Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಯಮೃತ್ಯುಂಜಯ ಸ್ವಾಮೀಜಿ ಪ್ರಕರಣಕ್ಕೆ ಹೊಸ ತಿರುವು; ಲೈಂಗಿಕ ದೌರ್ಜನ್ಯದ ಬಗ್ಗೆ ಈಗ ಮಹಿಳೆ ಹೇಳಿದ್ದೇನು ?

---Advertisement---

ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಕೇಳಿಬಂದಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಹೆಸರು ಕೇಳಿಬಂದ ಮಹಿಳೆ ಸ್ವತಃ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದು, ತನ್ನ ಮೇಲೆ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಹೇಳಿದ್ದಾಳೆ.

ವಿಡಿಯೋ ಸಂದೇಶದಲ್ಲಿ ಮಾತನಾಡಿದ ಮಹಿಳೆ, “ನನ್ನ ಮತ್ತು ಸ್ವಾಮೀಜಿಗಳ ನಡುವಿನ ಸಂಬಂಧವು ಭಕ್ತೆ ಹಾಗೂ ಗುರುವಿನ ಸಂಬಂಧ ಮಾತ್ರ. ನಾನು ಸ್ವಾಮೀಜಿ ವಿರುದ್ಧ ಯಾವುದೇ ದೂರು ನೀಡಿಲ್ಲ. ನನ್ನ ಹೆಸರಿನಲ್ಲಿ ಬೇರೆ ಯಾರೋ ದೂರು ನೀಡಿದ್ದಾರೆ,” ಎಂದು ಸ್ಪಷ್ಟಪಡಿಸಿದ್ದಾಳೆ. ಸ್ವಾಮೀಜಿಗಳು ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿಲ್ಲ, ಹಾಗೆಯೇ ತಾವೂ ಕೂಡ ಅವಮಾನಕಾರಿ ಪದಗಳನ್ನು ಬಳಸಿಲ್ಲ ಎಂದು ತಿಳಿಸಿದ್ದಾಳೆ.

ವಿಜಯಪುರದಲ್ಲಿ ನಡೆದ ಗಲಾಟೆ ಕುರಿತು ಉಲ್ಲೇಖಿಸಿದ ಮಹಿಳೆ, “ಮಾತನಾಡಲು ಕರೆದಿದ್ದರು, ಆದರೆ ನಾವು ಯಾವುದೇ ಗಲಾಟೆ ನಡೆಸಿಲ್ಲ. ಸ್ವಾಮೀಜಿಗಳಿಂದ ಹಣ ಬೇಡಿಕೆ ಇಟ್ಟಿಲ್ಲ. ನಮಗೆ ಆ ಪರಿಸ್ಥಿತಿ ಬಂದಿಲ್ಲ,” ಎಂದು ಹೇಳಿದ್ದಾಳೆ. ಏಪ್ರಿಲ್ 9ರಂದು ದಾಖಲಾಗಿರುವ ದೂರು ಸುಳ್ಳು ಎಂದು ಹೇಳಿ, ಅದನ್ನು ಯಾರೂ ನಂಬಬಾರದು ಎಂದು ಮನವಿ ಮಾಡಿದ್ದಾಳೆ.

ತಾನು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಲ ದಿನಗಳ ಬಳಿಕ ಸಂಪೂರ್ಣ ವಿವರ ನೀಡುವುದಾಗಿ ತಿಳಿಸಿದ್ದಾಳೆ.ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಂದು ಅಂಶವೂ ಗಮನಸೆಳೆಯುತ್ತಿದೆ. ಫೆಬ್ರವರಿಯಲ್ಲಿ ಕಗ್ಗೋಡು ಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಇದೇ ಮಹಿಳೆ ಸೇರಿದಂತೆ ಕೆಲವರು ಸ್ವಾಮೀಜಿಗಳ ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಏಪ್ರಿಲ್ 4ರಂದು ಸ್ವಾಮೀಜಿಗಳು ಪೊಲೀಸರಿಗೆ ದೂರು ನೀಡಿದ್ದರು.
ಈ ಮಧ್ಯೆ ಮಹಿಳೆಯ ಇತ್ತೀಚಿನ ಹೇಳಿಕೆ ಪ್ರಕರಣದ ದಿಕ್ಕನ್ನೇ ಬದಲಾಯಿಸುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲಿ ಪೊಲೀಸ್ ತನಿಖೆ ಯಾವ ರೀತಿಯಲ್ಲಿ ಮುಂದುವರೆಯುತ್ತದೆ ಎಂಬುದು ಕಾದು ನೋಡಬೇಕಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...