Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೈಕೋರ್ಟ್ ತೀರ್ಪಿನ ಬಳಿಕ ಯೋಗೀಶ್ ಗೌಡ ಪ್ರಕರಣಕ್ಕೆ ಹೊಸ ತಿರುವು

---Advertisement---

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ, ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ವ್ಯಕ್ತಿಗಳಿಂದ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.ಯೋಗೀಶ್ ಗೌಡ ಅವರ ಪತ್ನಿ ಮಲ್ಲಮ್ಮ ಮಾತನಾಡಿ, ನ್ಯಾಯಾಲಯದ ತೀರ್ಪಿನಿಂದ ತಮಗೆ ಸಂತೋಷವೂ ಇಲ್ಲ, ದುಃಖವೂ ಇಲ್ಲ ಎಂದು ಹೇಳಿದರು. ಸದ್ಯ ತಮ್ಮ ಮಕ್ಕಳ ಶಿಕ್ಷಣ ಮತ್ತು ಭವಿಷ್ಯದತ್ತವೇ ಗಮನ ಹರಿಸುತ್ತಿರುವುದಾಗಿ ತಿಳಿಸಿದ ಅವರು, ನ್ಯಾಯಾಲಯದ ತೀರ್ಪೇ ಅಂತಿಮ ಎಂದು ಹೇಳಿದ್ದಾರೆ.

“ನ್ಯಾಯಾಲಯ ಯಾವ ತೀರ್ಪು ನೀಡುತ್ತದೆ ಎಂಬುದು ಯಾರಿಗೂ ಮುಂಚಿತವಾಗಿ ಗೊತ್ತಾಗುವುದಿಲ್ಲ. ಕೋರ್ಟ್ ನೀಡಿರುವ ತೀರ್ಪಿನಿಂದ ನಮಗೆ ಯಾವುದೇ ಹಿನ್ನಡೆಯಾಗಿದೆ ಎಂದು ನಾನು ಭಾವಿಸುವುದಿಲ್ಲ. ನಾನು ಇನ್ನು ಮುಂದೆ ಯಾವುದೇ ಕಾನೂನು ಹೋರಾಟ ನಡೆಸುವುದಿಲ್ಲ. ಸುಪ್ರೀಂ ಕೋರ್ಟ್‌ಗೂ ಹೋಗುವುದಿಲ್ಲ. ನನಗೆ ನನ್ನ ಮಕ್ಕಳ ಭವಿಷ್ಯವೇ ಮುಖ್ಯ,” ಎಂದು ಮಲ್ಲಮ್ಮ ಸ್ಪಷ್ಟಪಡಿಸಿದರು.
ಇನ್ನೊಂದೆಡೆ, ಹೋರಾಟಗಾರ ಬಸವರಾಜ್ ಕೊರವರ ಪ್ರತಿಕ್ರಿಯಿಸಿ, ಜಾಮೀನು ಮಂಜೂರಾದ ಮಾತ್ರಕ್ಕೆ ಪ್ರಕರಣ ಅಂತ್ಯಗೊಂಡಿಲ್ಲ ಎಂದು ಹೇಳಿದರು. “ಯೋಗೀಶ್ ಗೌಡ ಕುಟುಂಬಕ್ಕೆ ನ್ಯಾಯ ದೊರಕಿಸುವ ಹೋರಾಟವನ್ನು ನಾವು ಮುಂದುವರಿಸುತ್ತೇವೆ,” ಎಂದು ಅವರು ತಿಳಿಸಿದರು.

ಬಿಜೆಪಿ ಮುಖಂಡ ಗುರುನಾಥಗೌಡ ಗೌಡರ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿ, “ವಿನಯ್ ಕುಲಕರ್ಣಿ ವಿರುದ್ಧದ ನಮ್ಮ ಕಾನೂನು ಹೋರಾಟ ಮುಂದುವರಿಯಲಿದೆ. ಯೋಗೀಶ್ ಗೌಡ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಾವು ಹಿಂದೆ ಸರಿಯುವುದಿಲ್ಲ,” ಎಂದರು.
ಇದಕ್ಕೆ ವಿರುದ್ಧವಾಗಿ, ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದರು. “ಸತ್ಯಕ್ಕೆ ಅಂತಿಮವಾಗಿ ಜಯ ಸಿಗುತ್ತದೆ ಎಂಬ ನಮ್ಮ ನಂಬಿಕೆ ಮತ್ತಷ್ಟು ಬಲಗೊಂಡಿದೆ. ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸುತ್ತೇವೆ. ಅಂತಿಮವಾಗಿ ವಿನಯ್ ಅವರು ಸಂಪೂರ್ಣ ನಿರ್ದೋಷಿಯಾಗಿ ಹೊರಬರುತ್ತಾರೆ ಎಂಬ ವಿಶ್ವಾಸವಿದೆ,” ಎಂದು ಹೇಳಿದರು.

ವಿನಯ್ ಕುಲಕರ್ಣಿ ಅವರ ಪುತ್ರಿ ವೈಶಾಲಿ ಕುಲಕರ್ಣಿ ಕೂಡ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, “ನ್ಯಾಯಾಲಯ ನ್ಯಾಯವನ್ನು ಎತ್ತಿ ಹಿಡಿದಿದೆ. ಆದರೆ ನಮ್ಮ ಕುಟುಂಬದ ಅಭಿಮಾನಿಗಳು ಯಾವುದೇ ರೀತಿಯ ಸಂಭ್ರಮಾಚರಣೆ ಮಾಡಬಾರದು. ಎಲ್ಲರೂ ಶಾಂತಿ ಮತ್ತು ಸಂಯಮದಿಂದ ವರ್ತಿಸಬೇಕು,” ಎಂದು ಮನವಿ ಮಾಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now