Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಹೊಸ ವರ್ಷದ ಹಬ್ಬ ಯುಗಾದಿ : ಮಹತ್ವ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

---Advertisement---

ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾದ ಯುಗಾದಿಯನ್ನು ಹೊಸ ವರ್ಷದ ಆರಂಭವೆಂದು ಪರಿಗಣಿಸಲಾಗುತ್ತದೆ. ದಕ್ಷಿಣ ಭಾರತ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಪ್ರಾಂತ್ಯಾನುಸಾರವಾಗಿ ಬೇರೆ ಬೇರೆ ಹೆಸರಿನಲ್ಲಿ ಹಾಗೂ ಬೇರೆ ದಿನಗಳಲ್ಲಿ ಆಚರಿಸಲಾದರೂ, ಹಬ್ಬದ ಮೂಲ ಅರ್ಥ ಮತ್ತು ಮಹತ್ವ ಒಂದೇ ಆಗಿರುತ್ತದೆ.

ಹಿಂದೂ ಶಾಸ್ತ್ರಗಳ ಪ್ರಕಾರ ಈ ದಿನವೇ ಬ್ರಹ್ಮನು ಸೃಷ್ಟಿ ಕಾರ್ಯವನ್ನು ಆರಂಭಿಸಿದನೆಂದು ನಂಬಲಾಗಿದೆ. ಯುಗಾದಿಯ ಕಾಲದಿಂದಲೇ ಪ್ರಕೃತಿಯಲ್ಲಿ ಹೊಸ ಚೈತನ್ಯ ಮೂಡುತ್ತದೆ. ಗಿಡಮರಗಳಲ್ಲಿ ಹೊಸ ಚಿಗುರುಗಳು ಕಾಣಿಸಿಕೊಳ್ಳುವುದು, ಹೂವುಗಳು ಅರಳುವುದು ಹಾಗೂ ವಸಂತ ಋತುವಿನ ಆಗಮನವಾಗುವುದು ಈ ಹಬ್ಬದ ವಿಶೇಷವೆಂದು ಹೇಳಲಾಗುತ್ತದೆ. ಹೀಗಾಗಿ ಯುಗಾದಿಯನ್ನು ಹೊಸತನ ಮತ್ತು ಶುಭಾರಂಭದ ಸಂಕೇತವಾಗಿ ಕಾಣಲಾಗುತ್ತದೆ.

ಚಂದ್ರಮಾನ ಪದ್ಧತಿಯನ್ನು ಅನುಸರಿಸುವ ದಕ್ಷಿಣ ಭಾರತದ ರಾಜ್ಯಗಳಲ್ಲಿ ಯುಗಾದಿಯನ್ನು ಒಂದೇ ದಿನ ಆಚರಿಸಲಾಗುತ್ತದೆ. ಈ ವರ್ಷ ಮಾರ್ಚ್ 19ರಂದು ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ.
ಮುಹೂರ್ತಗಳು:
ಪ್ರತಿಪದ ತಿಥಿ ಬೆಳಿಗ್ಗೆ 06:52ಕ್ಕೆ ಆರಂಭವಾಗಿ, ಮಾರ್ಚ್ 20ರಂದು ಬೆಳಿಗ್ಗೆ 04:52ಕ್ಕೆ ಅಂತ್ಯಗೊಳ್ಳುತ್ತದೆ. ಬ್ರಹ್ಮ ಮುಹೂರ್ತ ಬೆಳಿಗ್ಗೆ 04:48ರಿಂದ 05:35ರವರೆಗೆ ಇದ್ದು, ಅಭಿಜಿತ್ ಮುಹೂರ್ತ ಮಧ್ಯಾಹ್ನ 12:05ರಿಂದ 12:55ರವರೆಗೆ ಇರುತ್ತದೆ.

ಯುಗಾದಿಯ ವಿಶೇಷತೆ:
ಯುಗಾದಿ ಹಬ್ಬವು ಬ್ರಹ್ಮ, ವಿಷ್ಣು ಹಾಗೂ ಲಕ್ಷ್ಮೀ ದೇವಿಯ ಆರಾಧನೆಗೆ ಸಂಬಂಧಿಸಿದೆ. ಈ ದಿನ ಪಂಚಾಂಗ ಪೂಜೆ, ಲಕ್ಷ್ಮೀ ಪೂಜೆ ಮತ್ತು ದೇವಿ ಪೂಜೆಗಳನ್ನು ನಡೆಸುವುದು ಸಂಪ್ರದಾಯವಾಗಿದೆ. ಯುಗಾದಿಯ ದಿನ ಬೇವು-ಬೆಲ್ಲ ಸೇವಿಸುವ ಪದ್ಧತಿಯೂ ಇದೆ. ಜೀವನದಲ್ಲಿ ಸಿಹಿ ಹಾಗೂ ಕಹಿ ಅನುಭವಗಳನ್ನು ಸಮನಾಗಿ ಸ್ವೀಕರಿಸಬೇಕು ಎಂಬ ಸಂದೇಶವನ್ನು ಈ ಆಚರಣೆ ಸಾರುತ್ತದೆ.

ಆಚರಣೆ ಹೇಗೆ?
ಯುಗಾದಿ ದಿನ ಬೆಳಗ್ಗೆ ಬೇಗ ಎದ್ದು ಅಭ್ಯಂಜನ ಸ್ನಾನ ಮಾಡುವುದು ಸಂಪ್ರದಾಯ. ತಲೆಗೆ ಹಾಗೂ ದೇಹಕ್ಕೆ ಎಣ್ಣೆ ಹಚ್ಚಿಕೊಂಡು ಸ್ನಾನ ಮಾಡಿದ ಬಳಿಕ ಮನೆಮಂದಿ ಶುದ್ಧ ಬಟ್ಟೆ ಧರಿಸಿ ದೇವರ ಪೂಜೆ ನಡೆಸುತ್ತಾರೆ. ಮನೆಯಲ್ಲೆಲ್ಲ ಮಾವಿನ ಎಲೆಗಳಿಂದ ಅಲಂಕಾರ ಮಾಡಿ, ಕಳಶದ ನೀರನ್ನು ಸಿಂಪಡಿಸುವ ಮೂಲಕ ಶುಭಾರಂಭ ಮಾಡಲಾಗುತ್ತದೆ. ನಂತರ ಬ್ರಹ್ಮ ಅಥವಾ ಲಕ್ಷ್ಮೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಹೊಸ ವರ್ಷದ ಆರಂಭವನ್ನು ಆಚರಿಸಲಾಗುತ್ತದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...