Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು!

---Advertisement---

ದಾವಣಗೆರೆ ನಗರದ ರಾಮನಗರದಲ್ಲಿ ನವವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ತಾಲೂಕಿನ ಕೈದಾಳೆ ಗ್ರಾಮದ 19 ವರ್ಷದ ಅಮೂಲ್ಯ ಎಂಬ ಯುವತಿ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತಳಾಗಿ ಪತ್ತೆಯಾಗಿದ್ದಾಳೆ.ಘಟನೆಯ ಬಳಿಕ ಆಕೆಯ ಪತಿ ಧನುಷ್ ಹಾಗೂ ಆತನ ಪೋಷಕರು ನಾಪತ್ತೆಯಾಗಿದ್ದು, ಪ್ರಕರಣಕ್ಕೆ ಮತ್ತಷ್ಟು ಅನುಮಾನಗಳ ಕವಲು ಮೂಡಿಸಿದೆ. ಈ ಸಂಬಂಧ ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಅಮೂಲ್ಯ ಮತ್ತು ಧನುಷ್ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಅಮೂಲ್ಯ 18 ವರ್ಷ ಪೂರೈಸಿದ ಬಳಿಕ ಇಬ್ಬರೂ ಮದುವೆಯಾಗಿದ್ದು, ಸುಮಾರು ಒಂದು ವರ್ಷದ ಹಿಂದೆ ದಾಂಪತ್ಯ ಜೀವನ ಆರಂಭಿಸಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮತ್ತು ಸಮಸ್ಯೆಗಳು ಉಂಟಾಗಿದ್ದವು ಎಂಬ ಮಾಹಿತಿ ಲಭ್ಯವಾಗಿದೆ.
ದಾವಣಗೆರೆಯ ರಾಮನಗರದಲ್ಲಿರುವ ಬಾಡಿಗೆ ಮನೆಯಲ್ಲಿ ದಂಪತಿ ವಾಸವಾಗಿದ್ದರು. ಧನುಷ್ ನಗರದ ಹೂವಿನ ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಜೂನ್ 20ರ ರಾತ್ರಿ ಅಮೂಲ್ಯ ಮೃತದೇಹ ಮನೆಯೊಳಗೆ ಪತ್ತೆಯಾಗಿದೆ. ಮಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿರುವ ಪೋಷಕರು, ಧನುಷ್ ಹಾಗೂ ಆತನ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದಾರೆ.

ಅಮೂಲ್ಯ ಸಾವಿನ ಬಳಿಕ ಪತಿ ಧನುಷ್ ಮತ್ತು ಆತನ ಪೋಷಕರು ನಾಪತ್ತೆಯಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ಹುಡುಕಾಟ ನಡೆಸುತ್ತಿದ್ದಾರೆ.
ಸಾವಿನ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಸತ್ಯಾಂಶಗಳು ತನಿಖೆ ಬಳಿಕವೇ ಬೆಳಕಿಗೆ ಬರಲಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now