Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂದಿನ ಸಿಎಂ ಡಿಕೆ ಶಿವಕುಮಾರ್; ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ರಾಜಕೀಯ ಜಪ..!

---Advertisement---

ಬೆಂಗಳೂರು; ಇಷ್ಟು ದಿನ ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಬಣದವರು ನಮ್ಮ ನೆಕ್ಸ್ಟ್ ಸಿಎಂ ಡಿಕೆ ಶಿವಕುಮಾರ್ ಅಂತಾನೇ ಹೇಳ್ತಾ ಬಂದಿದ್ದಾರೆ. ಅಷ್ಟೇ ಅಲ್ಲ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಸಿಎಂ ಆಗುವ ಕನಸು ದೊಡ್ಡದಾಗಿದೆ. ಈ ಬಾರಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಅವರ ಶ್ರಮ ಹೆಚ್ಚಾಗಿದ್ದು, ಸಿಎಂ ಆಗುವ ಕನಸನ್ನ ಕಂಡಿದ್ದರು. ಅದಕ್ಕಾಗಿ ಕಾಯ್ತಾ ಇದ್ದಾರೆ ಕೂಡ. ಇದರ ಬೆನ್ನಲ್ಲೇ ನಟ ಧ್ರುವ ಸರ್ಜಾ ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದಿದ್ದಾರೆ. ಇದು ಬಾರೀ ಕುತೂಹಲಕ್ಕೆ ಕಾರಣವಾಗಿದೆ.

ಡಿಕೆಶಿ ಮಾಲೀಕತ್ವದ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ ಸ್ಪೆಷಲ್ ಗೆಸ್ಟ್ ಆಗಿ ಭಾಗಿಯಾಗಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡುವಾಗ ಮುಂದಿನ ಸಿಎಂ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.

ಟೈಂ ಮ್ಯಾನೇಜ್ಮೆಂಟ್ ಅಂತ ಮಾತಾಡೋದಕ್ಕಿಂತ ಮುಂಚೆ ನಾನು ಅಣ್ಣನ ಕೇಳುತ್ತಿದ್ದೆ. ಅಣ್ಣಾ ಎಷ್ಟು ಗಂಟೆಗೆ ಮಲಗುತ್ತೀರಾ..? ಎಷ್ಟು ಗಂಟೆಗೆ ಎದ್ದೇಳ್ತೀರಾ ಅಂತ. ಪಾಪ ಅವರು ತಮ್ಮ ಬ್ಯುಸಿ ಶೆಡ್ಯೂಲ್ ಬಗ್ಗೆ ಹೇಳಿದರು. ರಾತ್ರಿ 2.30ಕ್ಕೆ ಮಲಗಿಕೊಂಡು ಬೆಳಗ್ಗೆ 6.30ಕ್ಕೆ ಎದ್ದೆ ಎಂದರು. ಈ ಸ್ಥಾನಕ್ಕೆ ಬರುವುದಕ್ಕೆ ಎಷ್ಟೋ ವರ್ಷದಿಂದ ಮಾಡುತ್ತಾ ಇರುತ್ತಾರೆ. ನಾನು ಯಾರ ಬಗ್ಗೆ ಮಾತಾಡ್ತಾ ಇದ್ದೀನಿ ಅಂತ ಗೊತ್ತಾಯ್ತಾ..? ಏ ನಮ್ಮ ಫ್ಯೂಚರ್ ಸಿಎಂ ಬಗ್ಗೆ ಮಾತಾಡ್ತಾ ಇದ್ದೀನಪ್ಪ ಎಂದರು. ಈ ಮಾತು ಕೇಳಿ ಡಿಕೆ ಶಿವಕುಮಾರ್ ಫ್ಯಾಮಿಲಿಯಂತು ಫುಲ್ ಖುಷಿಯಾಗಿದೆ. ಫ್ಯೂಚರ್ ಸಿಎಂ ಆಗ್ಬೇಕು ಅನ್ನೋ ಆಸೆಗೆ ಬೆಂಬಲ ನೀಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment