ಮುಂದಿನ ಸಿಎಂ ಡಿಕೆ ಶಿವಕುಮಾರ್; ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ರಾಜಕೀಯ ಜಪ..!

ಬೆಂಗಳೂರು; ಇಷ್ಟು ದಿನ ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಬಣದವರು ನಮ್ಮ ನೆಕ್ಸ್ಟ್ ಸಿಎಂ ಡಿಕೆ ಶಿವಕುಮಾರ್ ಅಂತಾನೇ ಹೇಳ್ತಾ ಬಂದಿದ್ದಾರೆ. ಅಷ್ಟೇ ಅಲ್ಲ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಸಿಎಂ ಆಗುವ ಕನಸು ದೊಡ್ಡದಾಗಿದೆ. ಈ ಬಾರಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಅವರ ಶ್ರಮ ಹೆಚ್ಚಾಗಿದ್ದು, ಸಿಎಂ ಆಗುವ ಕನಸನ್ನ ಕಂಡಿದ್ದರು. ಅದಕ್ಕಾಗಿ ಕಾಯ್ತಾ ಇದ್ದಾರೆ ಕೂಡ. ಇದರ ಬೆನ್ನಲ್ಲೇ ನಟ ಧ್ರುವ ಸರ್ಜಾ ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದಿದ್ದಾರೆ. ಇದು ಬಾರೀ ಕುತೂಹಲಕ್ಕೆ ಕಾರಣವಾಗಿದೆ.

ಡಿಕೆಶಿ ಮಾಲೀಕತ್ವದ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ ಸ್ಪೆಷಲ್ ಗೆಸ್ಟ್ ಆಗಿ ಭಾಗಿಯಾಗಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡುವಾಗ ಮುಂದಿನ ಸಿಎಂ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.

ಟೈಂ ಮ್ಯಾನೇಜ್ಮೆಂಟ್ ಅಂತ ಮಾತಾಡೋದಕ್ಕಿಂತ ಮುಂಚೆ ನಾನು ಅಣ್ಣನ ಕೇಳುತ್ತಿದ್ದೆ. ಅಣ್ಣಾ ಎಷ್ಟು ಗಂಟೆಗೆ ಮಲಗುತ್ತೀರಾ..? ಎಷ್ಟು ಗಂಟೆಗೆ ಎದ್ದೇಳ್ತೀರಾ ಅಂತ. ಪಾಪ ಅವರು ತಮ್ಮ ಬ್ಯುಸಿ ಶೆಡ್ಯೂಲ್ ಬಗ್ಗೆ ಹೇಳಿದರು. ರಾತ್ರಿ 2.30ಕ್ಕೆ ಮಲಗಿಕೊಂಡು ಬೆಳಗ್ಗೆ 6.30ಕ್ಕೆ ಎದ್ದೆ ಎಂದರು. ಈ ಸ್ಥಾನಕ್ಕೆ ಬರುವುದಕ್ಕೆ ಎಷ್ಟೋ ವರ್ಷದಿಂದ ಮಾಡುತ್ತಾ ಇರುತ್ತಾರೆ. ನಾನು ಯಾರ ಬಗ್ಗೆ ಮಾತಾಡ್ತಾ ಇದ್ದೀನಿ ಅಂತ ಗೊತ್ತಾಯ್ತಾ..? ಏ ನಮ್ಮ ಫ್ಯೂಚರ್ ಸಿಎಂ ಬಗ್ಗೆ ಮಾತಾಡ್ತಾ ಇದ್ದೀನಪ್ಪ ಎಂದರು. ಈ ಮಾತು ಕೇಳಿ ಡಿಕೆ ಶಿವಕುಮಾರ್ ಫ್ಯಾಮಿಲಿಯಂತು ಫುಲ್ ಖುಷಿಯಾಗಿದೆ. ಫ್ಯೂಚರ್ ಸಿಎಂ ಆಗ್ಬೇಕು ಅನ್ನೋ ಆಸೆಗೆ ಬೆಂಬಲ ನೀಡಿದರು.

suddionenews

Recent Posts

ಹಿರಿಯೂರು‌ : ಹೆತ್ತ ತಾಯಿಯನ್ನೇ ಕೊಂದ ಮಗ

ಹಿರಿಯೂರು, ಮಾರ್ಚ್. 28 : ಕುಡಿತ ಅನ್ನೋದು ತಾನೂ ಏನು ಮಾಡ್ತಾ ಇದ್ದೀನಿ ಅನ್ನೋದನ್ನೇ ಮರೆಸಿ ಬಿಡುತ್ತದೆ. ಇಲ್ಲೊಬ್ಬ ಕುಡಿದು…

3 hours ago

ಚೆನ್ನೈ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಹಿಂಗ್ಯಾಕ್ ಆಡುದ್ರು..?

ಐಪಿಎಲ್ 18ನೇ ಸೀಸನ್ ನಲ್ಲಿ ಮೊದಲ ಗೆಲುವು ಕಂಡಿದ್ದ ಆರ್ಸಿಬಿ ಇಂದು ಚೆನ್ನೈ ವಿರುದ್ದ ಸೆಣೆಸಾಡುತ್ತಿದೆ. ಈಗಾಗಲೇ ಚೆನ್ನೈನ ಎರಡು…

3 hours ago

ಬಿ.ಆರ್. ಅಂಬೇಡ್ಕರ್ ಜಯಂತಿಗೆ ರಜೆ ಘೋಷಿಸಿದ ಕೇಂದ್ರ

ಸುದ್ದಿಒನ್ : ಸಮಾಜ ಮತ್ತು ಸಂವಿಧಾನಕ್ಕೆ ಅಂಬೇಡ್ಕರ್ ನೀಡಿದ ಕೊಡುಗೆಗಳಿಗಾಗಿ ಅವರ ಜನ್ಮ ದಿನಾಚರಣೆಯಾದ ಏಪ್ರಿಲ್ 14 ರಂದು ಸಾರ್ವಜನಿಕ…

3 hours ago

ಚಿತ್ರದುರ್ಗ : 35 ವಾರ್ಡ್‍ಗಳಲ್ಲಿಯೂ ಜಗಜೀವನರಾಂ ಹಾಗೂ ಅಂಬೇಡ್ಕರ್ ಅವರ ಹೆಸರಿನಲ್ಲಿ ಶುದ್ಧ ಕುಡಿಯುವ ನೀರು ಘಟಕ ಹಾಗೂ ಗ್ರಂಥಾಲಯ

ಚಿತ್ರದುರ್ಗ, ಮಾರ್ಚ್, 28 : ಜಿಲ್ಲಾ ಕೇಂದ್ರದಲ್ಲಿ ಈ ಬಾರಿ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಗಳನ್ನು ಅರ್ಥಪೂರ್ಣ…

5 hours ago

ಕೇಂದ್ರ ಸರ್ಕಾರಿ ನೌಕರರಿಗೆ ಯುಗಾದಿ ಗುಡ್ ನ್ಯೂಸ್ ; ಏನದು..?

ನವದೆಹಲಿ; ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ತುಟ್ಟಿ ಭತ್ಯೆ ಹೆಚ್ಚಳಕ್ಕಾಗಿ ಕಾಯುತ್ತಿದ್ದ ಲಕ್ಷಾಂತರ ಕೇಂದ್ರ ಸರ್ಕಾರಿ…

5 hours ago

ದಾವಣಗೆರೆಯಲ್ಲಿ ಬೇಸಿಗೆ ಹೆಚ್ಚಳ, ಕಾಡ್ಗಿಚ್ಚು ಸಂಭವ : 1926 ಸಹಾಯವಾಣಿ

ದಾವಣಗೆರೆ ಮಾ.28 : ದಾವಣಗೆರೆ ಪ್ರಾದೇಶಿಕ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಂಡುಬಂದರೆ ಕೂಡಲೇ ಅರಣ್ಯ ಸಹಾಯವಾಣಿ 1926 ಸಂಖ್ಯೆಗೆ…

5 hours ago