Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಎನ್‌ಐಎ ದಾಳಿ : ನಿಜವಾದ ಭಯೋತ್ಪಾದಕರು‌ ಮತ್ತು ಅಪರಾಧಿಗಳನ್ನ ಹಿಡಿಯಲು ದಮ್ ಇಲ್ಲ : ಮಹಮ್ಮದ್ ಸಾದ್

Facebook
Twitter
Telegram
WhatsApp

 

ದಾವಣಗೆರೆ: ದಾವಣಗೆರೆಯಲ್ಲಿ ಬೆಳಗ್ಗೆ 4ರ ಸುಮಾರಿನಲ್ಲಿ ಪಿಎಫ್ಐ ಮಾಜಿ ಜಿಲ್ಲಾಧ್ಯಕ್ಷ ಇಮಾದುದ್ದೀನ್ ಮನೆ ಮೇಲೆ ಎನ್ಐಎ ನ 14 ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಳಿಕ ಎನ್ಐಎ ಅಧಿಕಾರಿಗಳು ಪಿಎಫ್ಐ ಮುಖಂಡನನ್ನು ಬಂಧನ ಮಾಡಿದ್ದಾರೆ. ಇಮಾನುದ್ದೀನ್ ಬಂಧನಕ್ಕೊಳಗಾದ ಪಿಎಫ್ಐ ಮುಖಂಡ. ಬೆಳಗ್ಗೆಯೇ ಇಮಾನುದ್ದೀನ್ ಮನೆಗೆ ಆಗಮಿಸಿದ್ದ ಎನ್ ಐ ಎ ಅಧಿಕಾರಿಗಳು, ಕೆಲ ಕಾಲ ಮನೆಯಲ್ಲಿಯೇ ವಿಚಾರಣೆ ನಡೆಸಿದ್ದಾರೆ. ಸಾಕಷ್ಟು ವರ್ಷಗಳಿಂದ ಪಿಎಫ್ಐ ನಲ್ಲಿ ಇಮಾನುದ್ದೀನ್ ಸಕ್ರಿಯವಾಗಿದ್ದ.

ಬೆಳಿಗ್ಗೆ 3 ಗಂಟೆಗೆ ಇಮಾದುದ್ದೀನ್ ವಶಕ್ಕೆ ಪಡೆದಿದ್ದಾರೆ. ಅಜ್ಞಾತ ಸ್ಥಳದಲ್ಲಿಟ್ಟು ವಿಚಾರಣೆ ನಡೆಸಲಾಗುತ್ತಿದೆ. ಅಧಿಕಾರಿಗಳ ದಾಳಿ ಬಗ್ಗೆ ಇಮಾದುದ್ದೀನ್ ಸಹೋದರ ಮಹಮ್ಮದ್ ಸಾದ್ ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮಣ್ಣನನ್ನು ಯಾವುದೇ ಕಾರಣ ನೀಡದೆ ಕರೆದುಕೊಂಡು ಹೋಗಿದ್ದಾರೆ. ಪಿಎಫ್ಐನವರನ್ನು ಭಯೋತ್ಪಾದಕರಂತೆ ನೋಡುತ್ತಾರೆ. ಏಕಾಏಕಿ ಮನೆಗೆ ನುಗ್ಗಿ ಸಾಮಾನುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಯಾರು ಅಂತ ಕೇಳಿದರೂ ಹೇಳದೆ ಮನೆಗೆ ನುಗ್ಗಿದ್ದಾರೆ.

ಮನೆಯಲ್ಲಿನ ಒಂದು‌ ರೂಮ್ ನ್ನ ಬಿಡದೆ ಚೆಲ್ಲಾಪಿಲಿ ಮಾಡಿದ್ದಾರೆ. ಅಧಿಕಾರಿಗಳು ನಮ್ಮ ಬ್ಯಾಂಕ್ ಪಾಸ್ ಬುಕ್ ಮತ್ತು ದಾಖಲೆಗಳನ್ನ ಪರಿಶೀಲಿಸಿದರು. ಬಳಿಕ ಟೀ ಕುಡಿದು‌ ಮಾತಾಡೋಣ ಅಂತ ಇಮಾದುದ್ದೀನ್ ನನ್ನ ಕರೆದುಕೊಂಡು ಹೋದರು. ಅಧಿಕಾರಿಗಳು ಹಿಂದಿನಿಂದಲೂ ತುಂಬಾ ಸರಿ ಈ ರೀತಿ ಮಾಡುತ್ತಿದ್ದಾರೆ. ಪಿಎಫ್ಐ ಕಾರ್ಯಕ್ರಮ ನಡೆದಾಗ ಹೀಗೆ ದಾಳಿ ಮಾಡುತ್ತಾರೆ. ಹೀಗೆ ಹಲವಾರಿ ಬಾರಿ ದಾಳಿಯನ್ನ ಮಾಡಿದ್ದಾರೆ.

ನಮ್ಮನ್ನ ಸಾಮಾಜಿಕ‌ ಚಟುವಟಿಕೆಯಲ್ಲಿ ತೊಡಗಿಕೊಂಡವನು. ಇದು ರಾಜಕೀಯ ಪ್ರೇರಿತ ದಾಳಿ. ನಿಜವಾದ ಭಯೋತ್ಪಾದಕರು‌ ಮತ್ತು ಅಪರಾಧಿಗಳನ್ನ ಹಿಡಿಯಲು ಇವರಿಗೆ ದಮ್ ಇಲ್ಲ. ಯಾರದ್ದೊ ಸರ್ಕಾರದ ಮಾತು ಕೇಳಿ ಈ ರೀತಿ ಮಾಡುತ್ತಿದ್ದಾರೆ. ಇದರ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಇಮಾದುದ್ದೀನ್ ಸಹೋದರ ಮಹಮ್ಮದ್ ಸಾದ್ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!