Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸತೀಶ್ ಜಾರಕಿಹೊಳಿಗೆ ನಿಜಗುಣಾನಂದ ಪ್ರಭು ಸ್ವಾಮೀಜಿ ಆಶೀರ್ವಾದ

---Advertisement---

 

ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯಕ್ಕೆ ಉತ್ತರಾಧಿಕಾರಿ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹಲವರಿಂದ ಬಹುಪರಾಕ್ ಬಂದ್ರೆ ಇನ್ನು ಹಲವರಿಂದ ವಿರೋಧವೂ ಎದುರಾಗಿದೆ. ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರು ಮುಂದಿನ ಉತ್ತರಾಧಿಕಾರಿಯಾಗಿ ಸತೀಶ್ ಜಾರಕಿಹೊಳಿ ಅವರು ಮುಂದುವರೆಯಬಹುದು. ಯಾಕಂದ್ರೆ ತಂದೆಯವರ ಸಿದ್ಧಾಂತದಂತೆ ಅವರು ಕೂಡ ಫಾಲೋ ಮಾಡ್ತಾ ಇದ್ದಾರೆ ಎಂಬ ಹೇಳಿಕೆಯನ್ನ ನೀಡಿದ್ದರು.

ಇತ್ತ ಮುಂದಿನ ಸಿಎಂ ಆಗಬೇಕೆಂದು ಡಿಕೆ ಶಿವಕುಮಾರ್ ಕಾಯ್ತಾ ಇದ್ದಾರೆ. ಈಗ ಸಿದ್ದರಾಮಯ್ಯ ಅವರ ಮಗನೇ ಉತ್ತರಾಧಿಕಾರಿಯ ಬಗ್ಗೆ ಮಾತನಾಡಿದರೆ ಒಂದಷ್ಟು ಚರ್ಚೆಗಳು ಸಹಜವಾಗಿಯೇ ಹುಟ್ಟಿಕೊಳ್ತಾವೆ. ಈಗ ಆಗಿರೋದು ಅದೇ. ಡಿಕೆ ಶಿವಕುಮಾರ್ ಕಡೆಯವರು ಈ ಹೇಳಿಕೆಯನ್ನ ವಿರೋಧಿಸವ್ರೆ. ಸಿದ್ದರಾಮಯ್ಯ ಬಣದವರು ಅದು ಹಂಗಲ್ಲ ಹಿಂಗೆ ಎಂಬ ಮಾತನ್ನ ಹೇಳ್ತಾ ಇದ್ದಾರೆ. ಇದೀಗ ಸ್ವಾಮೀಜಿಯೊಬ್ಬರು ಸತೀಶ್ ಜಾರಕಿಹೊಳಿ ಅವರೇ ಸಿಎಂ ಆಗಲಿ ಎಂದಿದ್ದಾರೆ.

ಕಿತ್ತೂರು ಕೋಟೆಯಲ್ಲಿ ನಡೆದ ಕಿತ್ತೂರು ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಬೈಲೂರು ಮಠದ ನಿಜಗುಣ ಪ್ರಭು ಸ್ವಾಮೀಜಿ ಅವರು, ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದೇ ಹಾರೈಸಿದ್ದಾರೆ. ಈ ಬಗ್ಗೆ ಮಾತನಾಡಿ ನಿಜಗುಣ ಪ್ರಭು ಸ್ವಾಮೀಜಿ ಅವರು, ಸತೀಶ್ ಜಾರಕಿಹೊಳಿ ಸೇವೆ ಮೌನದ ಸೇವೆ, ಒಳ್ಳೆಯ ಮುತ್ಸದ್ದಿ ಅವರು, ಒಳ್ಳೆಯ ರಾಜಕಾರಣಿಯೂ ಆಗಿದ್ದಾರೆ. ಮುಂದಿನ ರಾಜ್ಯದ ಭವಿಷ್ಯಗಳೆಲ್ಲವೂ ಸಹ ಅವರ ಕಣ್ಣ ಮುಂದೆ ನಡೆಯಲಿ ಎಂದು ಪರೋಕ್ಷವಾಗಿ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬುದನ್ನ ಹೇಳಿದ್ದಾರೆ. ಸದ್ಯ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಕಿಚ್ಚು ಹಚ್ಚಿರುವ ವಿಚಾರಕ್ಕೆ ಸ್ವಾಮೀಜಿ ಮಾತು ಇನ್ನಷ್ಟು‌ ಕೆರಳುವಂತೆ ಮಾಡುತ್ತಾ ನೋಡಬೇಕಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now