Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚುನಾವಣೆಗೆ 3 ವರ್ಷ ಇರುವಾಗಲೇ ಕ್ಷೇತ್ರ ಘೋಷಿಸಿದ ನಿಖಿಲ್ ಕುಮಾರಸ್ವಾಮಿ..!

---Advertisement---

ರಾಮನಗರ: ನಿಖಿಲ್ ಕುಮಾರಸ್ವಾಮಿಗೆ ಅದ್ಯಾಕೋ ಏನೋ ಮೂರು ಚುನಾವಣೆಗಳು ಕೈಹಿಡಿಯಲಿಲ್ಲ. ಸೋಲಿನ ಸಮಯದಲ್ಲಿ ನಿಖಿಲ್ ಅವರು ಸಿನಿಮಾ ಹಾಗೂ ರಾಜಕೀಯ ಎರಡು ಕಡೆಯಲ್ಲೂ ಗಮನ ಹರಿಸಿದ್ದರು. ಲೋಕಸಭಾ ಚುನಾವಣೆಗೂ ಮುನ್ನ ಕೂಡ ಬಿಗ್ ಬಜೆಟ್ ಸಿನಿಮಾವನ್ನ ಅಮೌನ್ಸ್ ಮಾಡಿದ್ದರು. ಆದರೆ ಈಗ ಸಿನಿಮಾಗಿಂತ ಹೆಚ್ಚಾಗಿ ರಾಜಕೀಯದಲ್ಲಿಯೇ ಮುಳುಗಿ ಹೋಗಿದ್ದಾರೆ. ಕಾರ್ಯಕರ್ತರ ಸಭೆಗಳನ್ನ ನಡೆಸ್ತಾ ಇರ್ತಾರೆ, ತಮ್ಮ ಕ್ಷೇತ್ರದ ಜನರ ಬಳಿಗೆ ಹೋಗ್ತಾ ಇರ್ತಾರೆ. ಇದರ ನಡುವೆ ಚುನಾವಣೆಗೆ ಇನ್ನು ಬಹಳಷ್ಟು ಸಮಯ ಇರುವಾಗಲೇ ತಮ್ಮ ಕ್ಷೇತ್ರವನ್ನ ಘೋಷಣೆ ಮಾಡಿದ್ದಾರೆ. ಹಾಗಾದ್ರೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು..? ಯಾವ ಕ್ಷೇತ್ರವನ್ನ ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

ಚುನಾವಣೆಗೆ ನಿಲ್ಲುವ ಸಂದರ್ಭದ ಬಂದ್ರೆ ರಾಮನಗರದಲ್ಲಿಯೇ ನನ್ನ ಮುಂದಿನ ಸ್ಪರ್ಧೆ. ಯಾವುದೆರ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ. ಇದು ನಮ್ಮ ಸ್ವ ಕ್ಷೇತ್ರ. ನೀವೂ ಬೆಳೆಸಿದ ಮನೆ ಮಕ್ಕಳು ನಾವೂ. ನಮ್ಮನ್ನ ಪ್ರೀತಿಯಿಂದ ಬೆಳೆಸಿದ್ದೀರಿ, ಅರಸಿದ್ದೀರಿ. ಹೀಗಾಗಿ ಯಾವುದೆರ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದಿದ್ದಾರೆ.

ಇದೇ ವೇಳೆ ಕುಮಾರಸ್ವಾಮಿ ಅವರಿಗೆ ದೆಹಲಿಯಲ್ಲಿ ಕೆಲಸವಿಲ್ಲ. ಅದಕ್ಕೆ ರಾಜ್ಯಕ್ಕೆ ಬರ್ತಾರೆ ಎಂಬ ಡಿಕೆ ಸುರೇಶ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು, ಹೌದಪ್ಪ ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಕೊಡಿಸಿದ್ದು ಡಿಕೆ ಸುರೇಶ್ ಅವರ ಅಥವಾ ಅವರ ಸಹೋದರ ಶಿವಕುಮಾರ್ ಅವರ..? ಮಾವಿನ ಹಣ್ಣಿನ ಬೆಳೆಗಾರರು ಸಂಕಷ್ಟದಲ್ಲಿದ್ದಾಗ ಕುಮಾರಣ್ಣ ನೆರವಿಗೆ ಬಂದಿದ್ದಾರೆ. ಕುಮಾರಣ್ಣ ಪತ್ರ ಬರೆದಿದ್ದಕ್ಕೆ ಕೇಂದ್ರ ಕೃಷಿ ಸಚುವರು ಸ್ಪಂದಿಸಿದ್ದಾರೆ ಎಂದು ಡಿಕೆ ಬ್ರದರ್ಸ್ ಗೆ ತಿರುಗೇಟು ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...