Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ: ಬಿಜೆಪಿಯ ಘಟಾನುಘಟಿ ನಾಯಕರು ಸಾಥ್..!

---Advertisement---

ಚನ್ನಪಟ್ಟಣ: ಉಪಚುನಾವಣೆಯ ರಣಕಣ ಈಗಿನಿಂದ ರಂಗೇರಿದೆ. ಸಿಪಿ ಯೋಗೀಶ್ವರ್ ಕೈಕೊಟ್ಟ ಮೇಲೆ ಬಿಜೆಪಿ ನಾಯಕರು ಮತ್ತು ಜೆಡಿಎಸ್ ನಾಯಕರು ಒಟ್ಟುಗೂಡಿ ನಿಖಿಲ್ ಕುಮಾರಸ್ವಾಮಿ ಅವರನ್ನೇ ಕಣಕ್ಕೆ ಇಳಿಸಿದ್ದಾರೆ. ಪಕ್ಷ ಬಿಟ್ಟು ಹೋದವರಿಗೆ ಹೆದರುವ ಅವಶ್ಯಕತೆ ಇಲ್ಲ. ಗೆದ್ದೇ ಗೆಲ್ಲುತ್ತೇವೆ ಎಂಬ ಮಂತ್ರವನ್ನು ಮೈತ್ರಿ ಪಕ್ಷ ಜಪಿಸಿದೆ. ಇಂದು ನಿಖಿಲ್ ಕುಮಾರಸ್ವಾಮಿ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಬಿಜೆಪಿಯ ಘಟಾನುಘಟಿ ನಾಯಕರೇ ಸಾಥ್ ನೀಡಿದ್ದು ಗಮನ ಸೆಳೆದಿದೆ.

ಆರ್ ಅಶೋಕ್, ಸದಾನಂದ ಗೌಡ್ರು, ಅಶ್ವತ್ಥ್ ನಾರಾಯಣ್ ಹೀಗೆ ದೊಡ್ಡ ದೊಡ್ಡವರೇ ನಿಖಿಲ್ ಬೆನ್ನೆಲುಬಾಗಿ ನಿಂತಿದ್ದಾರೆ. ಮೆರವಣಿಗೆ ಮೂಲಕ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಜೊತೆಗೆ ಹೋಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೇ ವೇಳೆ ಆರ್ ಅಶೋಕ್ ಮಾತನಾಡಿ, ಮುಖಂಡರಿಂದ ಕಾರ್ಯಕರ್ತರ ತನಕ ಎಲ್ಲರೂ ಶ್ರಮವಹಿಸಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಬೇಕಿದೆ. ನಿಖಿಲ್ ಗೆ ಮೋದಿ, ದೇವೇಗೌಡರ ಆಶೀರ್ವಾದವಿದೆ. ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ.

ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್ ಮಾತನಾಡಿ, ನಿಖಿಲ್ ಎನ್‌ಡಿಎ ಅಭ್ಯರ್ಥಿ‌. ಬಿಜೆಪಿ ಮತ್ತು ಜೆಡಿಎಸ್ ನ ಒಗ್ಗಟ್ಟಿನ ಅಭ್ಯರ್ಥಿ. ಚನ್ನಪಟ್ಟಣದ ಜನ ಪ್ರಬುದ್ಧರು. ಕೆಂಗಲ್ ಹನುಮಂತಯ್ಯನವರಿಂದ  ದೇವೇಗೌಡರು ಪ್ರತಿನಿಧಿಸಿರುವ ಕ್ಷೇತ್ರ. ಕಾಂಗ್ರೆಸ್ ನಿಂದ ಏನನ್ನು ಬಯಸಲು ಸಾಧ್ಯವಿಲ್ಲ. ಆದರೆ ಎನ್‌ಡಿಎ ಜನರ ಪರವಾಗಿದೆ ಎಂದಿದ್ದಾರೆ. ಮಾಜಿ ಸಿಎಂ ಸದಾನಂದ ಗೌಡ ಮಾತನಾಡಿ, ಇದು ಸವಾಲಿನ ಚುನಾವಣೆ. ಒಬ್ಬ ವ್ಯಕ್ತಿ ಪಕ್ಷ ಅಂತ ಹೇಳಿ ಪಕ್ಷ ಅಂತ ಹೇಳಿ ಏಳನೇ ಬಾರಿಗೆ ಜಿಗಿದಿದ್ದಾರೆ. ಇದು ಸ್ವಾರ್ಥದ ರಾಜಕಾರಣ. ಯೋಗೀಶ್ವರ್ ಮಾನ ಮರ್ಯಾದೆ ಇದ್ದರೆ ನೀರು ತಂದ ಭಗೀರಥ ಅನ್ನೋದನ್ನ ಬಿಟ್ಟು ಚುನಾವಣೆ ಎದುರಿಸಬೇಕು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment