Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಂಪಿ ಉತ್ಸವದಲ್ಲಿ ‘ಶೇಕ್ ಇಟ್ ಪುಷ್ಪವತಿ’ ಅಂತ ಕುಣಿಯಲಿದ್ದಾರೆ ನಿಮಿಕಾ

Facebook
Twitter
Telegram
WhatsApp

 

 

ಇದೇ ತಿಂಗಳ 4ರಂದು ಮೂರು ದಿನಗಳ ಹಂಪಿ ಉತ್ಸವಕ್ಕೆ ಚಾಲನೆ ಸಿಗಲಿದೆ. ಹಂಪಿ ಉತ್ಸವದಲ್ಲಿ ನಾನಾ ರೀತಿಯ ಕಲಾ ಪ್ರದರ್ಶನಗಳು ನಡೆಯಲಿವೆ. ಈ ಬಾರಿ ಹಂಪಿ ಉತ್ಸವಕ್ಕೆ ಬರುವ ಜನರಿಗೆ ನೃತ್ಯದ ಮೂಲಕ ಮನರಂಜನೆ ನೀಡಲು ಬರುತ್ತಿದ್ದಾರೆ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್ ನೃತ್ಯ ಪ್ರದರ್ಶನ ನೀಡಲಿದ್ದಾರೆ.

ವಿಶೇಷವೆಂದರೆ, ಈ ಹಾಡೇ ಅವರನ್ನು ಹಂಪಿ ಉತ್ಸವದಲ್ಲಿ ಭಾಗಿಯಾಗಿ ನೃತ್ಯ ಪ್ರದರ್ಶನ ನೀಡುವ ಅವಕಾಶ ಕಲ್ಪಿಸಿದೆ. ಈಗಾಗಲೇ ಅದಕ್ಕೆ ಬೇಕಾದ ತಯಾರಿಗಳನ್ನು ಮಾಡಿಕೊಂಡಿರುವ ನಿಮಿಕಾ, ಆ ಕ್ಷಣಕ್ಕಾಗಿ ಕಾಯುತ್ತಿದ್ದಾರೆ. ಹಂಪಿ ಎಂದರೇನೇ ಅದೇನೋ ಆಕರ್ಷಣೆ. ನಿಮಿಕಾ ರತ್ನಾಕರ್ ಪಾಲಿಗೂ ಅಂಥಾದ್ದೊಂದು ಸೆಳೆತವಿದೆಯಂತೆ. ಆದರೆ ಈ ವರೆಗೂ ಅಲ್ಲಿಗೆ ಭೇಟಿ ಕೊಡುವ ಅವಕಾಶ ಕೂಡಿ ಬಂದಿರಲಿಲ್ಲ. ಕೆಲ ಹಾಡುಗಳ ಮೂಲಕವಷ್ಟೇ ಹಂಪಿಯನ್ನು ಕಣ್ತುಂಬಿಕೊಂಡಿದ್ದ ತಮ್ಮ ಪಾಲಿಗೆ ಆ ಪರಿಸರದಲ್ಲಿ ಬೆರೆಯುವ ಅವಕಾಶ ಸಿಕ್ಕಿದ್ಚದು ಖುಷಿ ಕೊಟ್ಟಿದೆ ಎಂಬುದು ನಿಮಿಕಾ ಮನದ ಮಾತು. ಈ ಹಿಂದೆ ನಿಮಿಕಾ ದಸರಾ ಉತ್ಸವದಲ್ಲಿಯೂ ಭಾಗಿಯಾಗಿದ್ದರು. ಆ ಸಂದರ್ಭದಲ್ಲಿ ಅವರ ಪೋಷಕರು ಹಾಜರಿದ್ದು ಖುಷಿಗೊಂಡಿದ್ದರು. ಈ ಬಾರಿಯೂ ಪೋಷಕರೊಂದಿಗೆ ಹಂಪಿ ಉತ್ಸವದಲ್ಲಿ ಭಾಗಿಯಾಗೋ ಇಂಗಿತ ನಿಮಿಕಾರದ್ದು.

 

ಅಷ್ಟಕ್ಕೂ ಶೇಕ್ ಇಟ್ ಪುಷ್ಪವತಿ ಎಂಬ ಹಾಡು ನಿಮಿಕಾಗೆ ಒಂದಿಡೀ ಕರ್ನಾಟಕಕ್ಕೆ ಪ್ರದಕ್ಷಿಣೆ ಹಾಕುವ ಅವಕಾಶ ಕಲ್ಪಿಸುತ್ತಿದೆ. ಈಗಾಗಲೇ ಅವರು ರಾಜ್ಯದ ನಾನಾ ಪ್ರದೇಶಗಳಲ್ಲಿ ಈ ನೃತ್ಯ ಪ್ರದರ್ಶನ ನೀಡಿದ್ದಾರೆ. ಇದೀಗ ಹಂಪಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಿರೋದು ಅವರ ಪಾಲಿಗೆ ವಿಶೇಷ ಘಳಿಗೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!