Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಧ್ಯಕ್ಷರನ್ನು ಹೊರತುಪಡಿಸಿ ಬೇರೆ ಯಾವುದೇ ಪದಾಧಿಕಾರಿಗಳು ಸುದ್ದಿಗೋಷ್ಠಿಯನ್ನು ನಡೆಸುವಂತಿಲ್ಲ ; ಕೆ. ಮಂಜುನಾಥ್

Facebook
Twitter
Telegram
WhatsApp

ಚಿತ್ರದುರ್ಗ, (ಏ.21) : ಸಂಘಟನೆಯ ಅಧ್ಯಕ್ಷರನ್ನು ಹೊರತುಪಡಿಸಿ ಬೇರೆ ಯಾವುದೇ ಪದಾಧಿಕಾರಿಗಳು ಸುದ್ದಿಗೋಷ್ಠಿಯನ್ನು ನಡೆಸಲು ಸಂಘದ ಬೈಲಾ ಪ್ರಕಾರ ಅವಕಾಶವಿರುವುದಿಲ್ಲ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯು ಎಲ್ಲಾ ಇಲಾಖೆಗಳನ್ನು ಪ್ರತಿನಿಧಿಸುವ ಏಕೈಕ ಸರ್ಕಾರಿ ನೌಕರರ ಸಂಘಟನೆಯಾಗಿದೆ.

ಸಂಘದ ಹೆಸರಿನಲ್ಲಿ ಯಾರಾದರೂ ಸಂಘದ ಸದಸ್ಯರು ಸುದ್ದಿಗೋಷ್ಠಿ ನಡೆಸಿದರೆ ಇದು ಸಂಘ ವಿರೋಧಿ ಚಟುವಟಿಕೆಯಾಗುತದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಸಂಘಟನೆ, ಜಿಲ್ಲೆಯ ಎಲ್ಲಾ ಇಲಾಖೆಗಳ ಎ ಗ್ರೂಪಿನಿಂದ ಹಿಡಿದು ಗ್ರೂಪ್-ಡಿ ನೌಕರರ ಹಿತಕ್ಕಾಗಿ ಶ್ರಮಿಸುತ್ತಿದೆ. ನೌಕರರ ಶ್ರೇಯೋಭಿವೃದ್ಧಿಗೆ, ನೌಕರರ ಹಿತಾಸಕ್ತಿಗಾಗಿ ಸರ್ವ ಸದಸ್ಯರನ್ನು ಗಣನೆಗೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಿದೆ.

2022 ನೇ ಸಾಲಿನ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜನೆ ಮಾಡುವ ದಿನಾಂಕ ಈ ಹಿಂದೆಯೇ ನಿಗದಿಪಡಿಸಿ, ಜಿಲ್ಲೆಯ ಎಲ್ಲಾ ನೌಕರರಿಗೂ ವಿಷಯವನ್ನು ಪ್ರಚಾರ ಮಾಡಲಾಗಿದೆ. ಆದರೆ ಈ ದಿನಾಂಕದಂದೇ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕರ್ತವ್ಯದ ದಿನಾಂಕವೂ ನಿಗದಿಯಾಗಿದೆ.

ಈ ಹಿಂದೆಯೇ ಕ್ರೀಡಾಕೂಟದ ದಿನಾಂಕದ ಮಾಹಿತಿ ಎಲ್ಲಾ ಇಲಾಖೆಗಳ ನೌಕರರಿಗೂ ತಲುಪಿದ್ದು, ನೊಂದಣಿ ಕಾರ್ಯ ನಡೆದಿರುತ್ತದೆ. ಆದ್ದರಿಂದ ಯಾವುದೇ ಸ್ವಹಿತಾಸಕ್ತಿಯಿಂದಾಗಲಿ ಅಥವಾ ದುರುದ್ದೇಶದಿಂದಾಗಲಿ ಕ್ರೀಡಾಕೂಟದ ದಿನಾಂಕವನ್ನು ನಿಗದಿಪಡಿಸಿರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದೇನೆ.

ಈ ಎಲ್ಲಾ ವಿಷಯಗಳನ್ನು ಜಿಲ್ಲೆಯ ವಿವಿಧ ತಾಲೂಕುಗಳ ಸರ್ಕಾರಿ ನೌಕರ ಸಂಘ ಮತ್ತು ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳ ಮತ್ತು ಸರ್ವ ಸದಸ್ಯರ ಗಮನಕ್ಕೆ ತಿಳಿಸುತ್ತಾ, ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರು ಯಾವುದೇ ಗೊಂದಲವಿಲ್ಲದೆ ಕ್ರೀಡಾಕೂಟದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಪೂರೈಸಲು ಕೋರುತ್ತೇನೆ.

ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

error: Content is protected !!