Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ಬದುಕಿನಲ್ಲೇ ಅಂತ ನಿರ್ಧಾರ ತೆಗೆದುಕೊಳ್ಳಲ್ಲ : ಬಿಜೆಪಿ ಸೇರ್ಪಡೆ ಬಗ್ಗೆ ಎಸ್ ಆರ್ ಪಾಟೀಲ್ ಸ್ಪಷ್ಟನೆ..!

Facebook
Twitter
Telegram
WhatsApp

ಬಾಗಲಕೋಟೆ : ವಿಧಾನ ಪರಿಷತ್ ವಿಪಕ್ಷ ನಾಯಕ ಬಿಜೆಪಿಗೆ ಸೇರುತ್ತಾರೆ ಅಂತ ಕೆ.ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದರು. ಆ ಹೇಳಿಕೆಗೆ ಇದೀಗ ಎಸ್ ಆರ್ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ನನ್ನ ಬದುಕಿನಲ್ಲೇ, ನನ್ನ ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾದ ನಿರ್ಧಾರಗಳನ್ನ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಈಶ್ವರಪ್ಪ ಅವರ ಹೇಳಿಕೆಗೆ ಸ್ಪಷ್ಟನೆ ನೀಡಿದ್ದು, ಈಶ್ವರಪ್ಪ ಬಿಜೆಪಿ ಸಿದ್ಧಾಂತಕ್ಕೆ ತಕ್ಕಂತೆ ಅವರ ಪಕ್ಷದಲ್ಲಿದ್ದಾರೆ. ಇಬ್ಬರೂ ಯಾವುದೇ ರೀತಿಯಲ್ಲೂ ವೈರಿಗಳಲ್ಲ. ಇಬ್ಬರು ಜನಸೇವೆಗೆ ಬಂದಿರೋದು. ನಾವೂ ಕಾಂಗ್ರೆಸ್ ನಲ್ಲಿದ್ದುಕೊಂಡು ಮಾಡ್ತೇವೆ. ಅವರು ಬಿಜೆಪಿಯಲ್ಲಿದ್ದುಕೊಂಡು ಸೇವೆ ಮಾಡ್ತಾರೆ.

ಅಭಿವೃದ್ಧಿ ಕೆಲಸ ಮಾಡುವಾಗ ಜೊತೆಯಾಗಿ ಕೆಲಸ ಮಾಡುತ್ತೇವೆ. ಚುನಾವಣೆ ಸಂದರ್ಭದಲ್ಲಿ ಅವರ ಚಡ್ಡಿ ಅವರನ್ನ ಹಿಂಬಾಲ ಮಾಡಿದ್ರೆ ನಮ್ಮ ಚಡ್ಡಿ ನಮ್ಮ ಹಿಂಬಾಲ ಮಾಡುತ್ತೆ ಅಷ್ಟೇ. ಚುನಾವಣೆ ಜನರ ಮೇಲೆಯೇ‌ ನಿಂತಿರುತ್ತೆ. ಅವರಿಗೆ ಆಶೀರ್ವಾದ ಮಾಡಿದರೆ ಅವರು ಇರುತ್ತಾರೆ. ನಮಗೆ ಆಶೀರ್ವಾದ ಮಾಡಿದರೆ ನಾವಿರುತ್ತೇವೆ.

45 ವರ್ಷ ಅಖಂಡವಾಗಿ ಒಂದು ಪಕ್ಷದಲ್ಲಿ ಇದ್ದು, ಒಂದು ಪಕ್ಷದ ಸಿದ್ಧಾಂತವನ್ನು ನಂಬಿಕೊಂಡು ಬಂದಿದ್ದೇನೆ. ಸೈದಾಂತಿಕ ನಿಲುವಿನಲ್ಲಿ ನಮ್ಮ ಮತ್ತು ಅವರ ನಡುವೆ ಒಂದಷ್ಟು ಭಿನ್ನಾಭಿಪ್ರಾಯಗಳಿವೆ. ನನ್ನ ಪಕ್ಷ ಅವಕಾಶ ಕೊಟ್ಟಿದೆ, ಅನೇಕ ಸ್ಥಾನಮಾನಗಳನ್ನು ಕೊಟ್ಟಿದೆ. ಜನಸೇವೆ ಮಾಡುವುದಕ್ಕೆ ಅವಕಾಶ ಕಲ್ಪಿಸಿದೆ, ಇಂಥ ಸಮಯದಲ್ಲಿ ಕೇವಲ ಟಿಕೆಟ್ ತಪ್ಪಿದ್ದಕ್ಕೆ ಆ ಪಕ್ಷಕ್ಕೆ ಈ ಪಕ್ಷಕ್ಕೆ ಹೋಗುವುದು ನಮ್ಮ ಜಾಯಮಾನಕ್ಕೆ ಒಪ್ಪುವಂಥದಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!