ನಡ್ಡಾ ಕಾರ್ಯಕ್ರಮದಲ್ಲಿ ಬಿಎಸ್ವೈಗಿಲ್ಲ ಆಹ್ವಾನ : ಬಿಎಸ್ವೈ ಉತ್ತರವೇನು..?

suddionenews
1 Min Read

ಬೆಂಗಳೂರು: ನಾಳೆ ಕೊಪ್ಪಳದ ಬಿಜೆಪಿ ಕಚೇರಿ ಉದ್ಘಾಟನೆ ಹಿನ್ನೆಲೆ, ಬಿಜೆಪಿ‌‌ ರಾಷ್ಟ್ರೀಯ ಅಧ್ಯಕ್ಷ ಜೆಪಿ‌ ನಡ್ಡಾ ಭಾಗಿಯಾಗಲಿದ್ದಾರೆ. ನಡ್ಡಾ ಭಾಗಿಯಾಗುವ ಕಾರ್ಯಕ್ರಮ ಯಡಿಯೂರಪ್ಪಗೆ ಇರಲಿಲ್ಲ ಆಹ್ವಾನ. ಈ ಸುದ್ದಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆದ ಬಳಿಕ ಬಿಜೆಪಿ ನಾಯಕರು ಎಚ್ಚೆತ್ತುಕಿಂಡಿದ್ದಾರೆ.

ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಯಡಿಯೂರಪ್ಪ ಮನವೊಲಿಕೆಗೆ ಯತ್ನಿಸಿದ್ದಾರೆ. ನಾಳೆ ಕೊಪ್ಪಳ ಕಾರ್ಯಕ್ರಮಕ್ಕೆ ಬರುವಂತೆ ಮನವೊಲಿಕೆ ಮಾಡಿದ್ದಾರೆ. ಈ ಸಂಬಂಧ ಬಿಜೆಪಿ ವರಿಷ್ಠರ ಸೂಚನೆ ಮೇರೆಗೆ ಬಿಎಸ್ ವೈ ನಿವಾಸಕ್ಕೆ ಪರಿಷತ್ ಸದಸ್ಯ ರವಿಕುಮಾರ್ ಭೇಟಿ ನೀಡಿದ್ದಾರೆ.

ಭೇಟಿ ವೇಳೆಯಲ್ಲಿ ಕೊಪ್ಪಳಕ್ಕೆ ಬರ್ತಿನಿ ಅಂತ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ನಾಳೆ ವಿಶೇಷ ವಿಮಾನದಲ್ಲಿ ಕೊಪ್ಪಳಕ್ಕೆ ಪ್ರವಾಸ ಮಾಡಲಿದ್ದಾರೆ. ಕೊನೆಗೂ ಬಿಎಸ್ವೈ ಮನವೊಲಿಸಿ ಬಿಜೆಪಿ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದೆ.

Share This Article
Leave a Comment

Leave a Reply

Your email address will not be published. Required fields are marked *