Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಎಷ್ಟೇ ಮಾತ್ರೆ ನುಂಗಿದರು ಕೆಮ್ಮು ಕಡಿಮೆ ಆಗ್ತಿಲ್ವಾ..? ಹಾಗಾದ್ರೆ ಈ ರೀತಿ ಮಾಡಿ

---Advertisement---

ಸಾಮಾನ್ಯವಾಗಿ ಕೆಲವೊಬ್ಬರಿಗೆ ಕೆಮ್ಮು ಆದ್ರೆ ತಿಂಗಳು ಗಟ್ಟಲೇ‌ ಕಡಿಮೆ ಆಗುವುದೇ ಇಲ್ಲ. ಎಷ್ಟೇ ಮಾತ್ರೆಗಳನ್ನ ನುಂಗಿದರು ವಾಸಿಯಾಗುವುದೇ ಇಲ್ಲ. ಕೆಮ್ಮಿ ಕೆಮ್ಮಿ ಅವರೇ ಸುಸ್ತಾಗಿ ಬಿಡಬೇಕು. ಈ ರೀತಿ ಸಮಸ್ಯೆ ಇರುವವರು ಒಂದು ಮನೆ ಮದ್ದನ್ನ ಹೇಳ್ತೀವಿ ಟ್ರೈ ಮಾಡಿ.

ವೀಲಕ್ಯದೆಲೆಯನ್ನ ಸಾಮಾನ್ಯವಾಗಿ ಊಟವಾದ ಮೇಲೆ ಜಗಿಯುವ ಅಭ್ಯಾಸ ಹಲವರಿಗೆ ಇರುತ್ತದೆ. ಆದರೆ ಕೆಮ್ಮಿನ ಸಮಸ್ಯೆ ಇರುವವರು ಈ ರೀತಿ ಮಾಡಿ. ವೀಳ್ಯದೆಲೆಯಲ್ಲಿ ಸಾಕಷ್ಟು ಔಷಧೀಯ ಗುಣವಿರುತ್ತದೆ. ಎರಡು ವೀಳ್ಯದೆಲೆಯನ್ನು ತೊಳೆದು, ಚೂರು ಚೂರು ಮಾಡಿಕೊಳ್ಳಿ. ಬಳಿಕ ಕಲ್ಲು ಅಥವಾ ಏನಾದರೊಂದರಲ್ಲಿ ಜಜ್ಜಿ. ಅದರಿಂದ ರಸವನ್ನು ಒಂದು ಬಟ್ಟಲಿಗೆ ಹಾಕಿಕೊಳ್ಳಿ. ಅರ್ಧದಿಂದ ಮುಕ್ಕಾಲು ಸ್ಪೂನ್ ಸಿಗಬಹುದು. ಇದಕ್ಕೆ ಈರುಳ್ಳಿಯನ್ನ ಬಳಕೆ ಮಾಡಿಕೊಳ್ಳಬೇಕು.

ಮಕ್ಕಳಲ್ಲಿ ಕಫ ಏನಾದರೂ ಹೆಚ್ಚಾದಲ್ಲಿ, ಈರುಳ್ಳಿಯನ್ನ ಬಳಕೆ ಮಾಡಿಕೊಳ್ಳಬಹುದು. ಇದನ್ನ ಬಳಕೆ ಮಾಡುವ ವಿಧಾನ ನೋಡಿಕೊಳ್ಳಿ. ಸಣ್ಣ ಗಾತ್ರದ ಈರುಳ್ಳಿಯಲ್ಲಿ ಅರ್ಧ ಓಳು ತೆಗೆದುಕೊಳ್ಳಿ. ಅದನ್ನ ಒಂದು ಸ್ಪೂನ್ ನಲ್ಲಿ ಚುಚ್ಚಿ, ಬೆಂಕಿಯಲ್ಲಿ ಸುಡಿ. ಆ ಕಡೆ ಈ ಕಡೆ ಕಪ್ಪಾಗುವಷ್ಟು ಸುಟ್ಟಿದರು ಸಾಕು. ಬಳಿಕ ಈರುಳ್ಳಿಯನ್ನು ಜಜ್ಜಿಕೊಳ್ಳಿ. ಚೆನ್ನಾಗಿ ಜಜ್ಜಿ ಅದರಿಂದ ಬರುವ ರಸವನ್ನು ವೀಳ್ಯದೆಲೆ ರಸದ ಜೊತೆಗೆ ಮಿಕ್ಸ್ ಮಾಡಿ. ಒಂದು ಟೇಬಲ್ ಸ್ಪೂನ್ ಜೇನು ತುಪ್ಪ ಕೂಡ ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ. ಈ ಮಿಶ್ರಣವನ್ನು ಮಕ್ಕಳಲ್ಲಿ ಹೆಚ್ಚು ಕೆಮ್ಮಾದಾಗ ದಿನಕ್ಕೆ ಮೂರು ಟೈಮ್ ನಂತೆ ಕುಡಿಸಿ. ಇದರಿಂದ ಕೆಮ್ಮು ಬೇಗನೆ ವಾಸಿಯಾಗುತ್ತದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...