ಎಷ್ಟೇ ಮಾತ್ರೆ ನುಂಗಿದರು ಕೆಮ್ಮು ಕಡಿಮೆ ಆಗ್ತಿಲ್ವಾ..? ಹಾಗಾದ್ರೆ ಈ ರೀತಿ ಮಾಡಿ

ಸಾಮಾನ್ಯವಾಗಿ ಕೆಲವೊಬ್ಬರಿಗೆ ಕೆಮ್ಮು ಆದ್ರೆ ತಿಂಗಳು ಗಟ್ಟಲೇ‌ ಕಡಿಮೆ ಆಗುವುದೇ ಇಲ್ಲ. ಎಷ್ಟೇ ಮಾತ್ರೆಗಳನ್ನ ನುಂಗಿದರು ವಾಸಿಯಾಗುವುದೇ ಇಲ್ಲ. ಕೆಮ್ಮಿ ಕೆಮ್ಮಿ ಅವರೇ ಸುಸ್ತಾಗಿ ಬಿಡಬೇಕು. ಈ ರೀತಿ ಸಮಸ್ಯೆ ಇರುವವರು ಒಂದು ಮನೆ ಮದ್ದನ್ನ ಹೇಳ್ತೀವಿ ಟ್ರೈ ಮಾಡಿ.

ವೀಲಕ್ಯದೆಲೆಯನ್ನ ಸಾಮಾನ್ಯವಾಗಿ ಊಟವಾದ ಮೇಲೆ ಜಗಿಯುವ ಅಭ್ಯಾಸ ಹಲವರಿಗೆ ಇರುತ್ತದೆ. ಆದರೆ ಕೆಮ್ಮಿನ ಸಮಸ್ಯೆ ಇರುವವರು ಈ ರೀತಿ ಮಾಡಿ. ವೀಳ್ಯದೆಲೆಯಲ್ಲಿ ಸಾಕಷ್ಟು ಔಷಧೀಯ ಗುಣವಿರುತ್ತದೆ. ಎರಡು ವೀಳ್ಯದೆಲೆಯನ್ನು ತೊಳೆದು, ಚೂರು ಚೂರು ಮಾಡಿಕೊಳ್ಳಿ. ಬಳಿಕ ಕಲ್ಲು ಅಥವಾ ಏನಾದರೊಂದರಲ್ಲಿ ಜಜ್ಜಿ. ಅದರಿಂದ ರಸವನ್ನು ಒಂದು ಬಟ್ಟಲಿಗೆ ಹಾಕಿಕೊಳ್ಳಿ. ಅರ್ಧದಿಂದ ಮುಕ್ಕಾಲು ಸ್ಪೂನ್ ಸಿಗಬಹುದು. ಇದಕ್ಕೆ ಈರುಳ್ಳಿಯನ್ನ ಬಳಕೆ ಮಾಡಿಕೊಳ್ಳಬೇಕು.

ಮಕ್ಕಳಲ್ಲಿ ಕಫ ಏನಾದರೂ ಹೆಚ್ಚಾದಲ್ಲಿ, ಈರುಳ್ಳಿಯನ್ನ ಬಳಕೆ ಮಾಡಿಕೊಳ್ಳಬಹುದು. ಇದನ್ನ ಬಳಕೆ ಮಾಡುವ ವಿಧಾನ ನೋಡಿಕೊಳ್ಳಿ. ಸಣ್ಣ ಗಾತ್ರದ ಈರುಳ್ಳಿಯಲ್ಲಿ ಅರ್ಧ ಓಳು ತೆಗೆದುಕೊಳ್ಳಿ. ಅದನ್ನ ಒಂದು ಸ್ಪೂನ್ ನಲ್ಲಿ ಚುಚ್ಚಿ, ಬೆಂಕಿಯಲ್ಲಿ ಸುಡಿ. ಆ ಕಡೆ ಈ ಕಡೆ ಕಪ್ಪಾಗುವಷ್ಟು ಸುಟ್ಟಿದರು ಸಾಕು. ಬಳಿಕ ಈರುಳ್ಳಿಯನ್ನು ಜಜ್ಜಿಕೊಳ್ಳಿ. ಚೆನ್ನಾಗಿ ಜಜ್ಜಿ ಅದರಿಂದ ಬರುವ ರಸವನ್ನು ವೀಳ್ಯದೆಲೆ ರಸದ ಜೊತೆಗೆ ಮಿಕ್ಸ್ ಮಾಡಿ. ಒಂದು ಟೇಬಲ್ ಸ್ಪೂನ್ ಜೇನು ತುಪ್ಪ ಕೂಡ ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ. ಈ ಮಿಶ್ರಣವನ್ನು ಮಕ್ಕಳಲ್ಲಿ ಹೆಚ್ಚು ಕೆಮ್ಮಾದಾಗ ದಿನಕ್ಕೆ ಮೂರು ಟೈಮ್ ನಂತೆ ಕುಡಿಸಿ. ಇದರಿಂದ ಕೆಮ್ಮು ಬೇಗನೆ ವಾಸಿಯಾಗುತ್ತದೆ.

suddionenews

Recent Posts

ಯುರಿನ್ ಇನ್ಫೆಕ್ಷನ್ ಆಗಿದ್ಯಾ..? ಈ ಮನೆ ಮದ್ದನ್ನ ಟ್ರೈ ಮಾಡಿ

ಸಾಮಾನ್ಯವಾಗಿ ಸಾಕಷ್ಟು ಜನರಿಗೆ ಯುರಿನ್ ಇನ್ಫೆಕ್ಷನ್ ಸಮಸ್ಯೆ ಕಾಡುತ್ತದೆ. ಪಬ್ಲಿಕ್ ಟಾಯ್ಲೆಟ್ ಬಳಸಿದಾಗ ಅಥವಾ ಸ್ವಚ್ಚತೆ ಇಲ್ಲದ ವಾಶ್ ರೂಮ್…

12 minutes ago

ಈ ರಾಶಿಯ ಇಂಜಿನಿಯರ್ ಪದವಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ, ವಿದೇಶ ಯೋಗ

ಈ ರಾಶಿಯ ಇಂಜಿನಿಯರ್ ಪದವಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ, ವಿದೇಶ ಯೋಗ, ಗುರುವಾರದ ರಾಶಿ ಭವಿಷ್ಯ 27 ಮಾರ್ಚ್ 2025…

2 hours ago

ನಾಳೆಯಿಂದ ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೊಳಲ್ಕೆರೆ ಸಜ್ಜು

ಸುದ್ದಿಒನ್, ಹೊಳಲ್ಕೆರೆ, ಮಾರ್ಚ್. 26 : ಗಣಪತಿಯ ಧಾರ್ಮಿಕ ಸ್ಥಳವಾದ ಹೊಳಲ್ಕೆರೆಯಲ್ಲಿ ನಾಳೆಯಿಂದ ( ಗುರುವಾರ) ಎರಡು ದಿನಗಳ ಕಾಲ…

9 hours ago

ನಾಳೆ ಮಾನವ ಹಕ್ಕು ಆಯೋಗದ ಅಧ್ಯಕ್ಷರ ಭೇಟಿ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ವಿಚಾರಣೆ

    ಚಿತ್ರದುರ್ಗ. ಮಾರ್ಚ್26 :  ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ…

10 hours ago

ನಾಗರಾಜ್ ಅವರಿಗೆ ಸಮಾಜ ಸೇವಾ ರತ್ನ ಮತ್ತು ಬಡವರ ಆಶಾಕಿರಣ ಪ್ರಶಸ್ತಿ ಪ್ರದಾನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

10 hours ago

6 ವರ್ಷಗಳ ಕಾಲ ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ..!

  ಸುದ್ದಿಒನ್, ಬೆಂಗಳೂರು, ಮಾರ್ಚ್. 26 :  ಬಿಜೆಪಿಯ ಶಿಸ್ತು ಸಮಿತಿ ಸಾಕಷ್ಟು ಬಾರೀ ಎಚ್ಚರಿಕೆಯನ್ನು ನೀಡಿದರು ಸಹ ಎಚ್ಚೆತ್ತುಕೊಳ್ಳದೆ…

12 hours ago