Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇನ್ಮುಂದೆ ಬಿಬಿಎಂಪಿ ಇಲ್ಲ.. ಒನ್ಲಿ ಗ್ರೇಟರ್ ಬೆಂಗಳೂರು; ಸಿಲಿಕಾನ್ ಸಿಟಿ ಮಂದಿಗೆ ಏನೆಲ್ಲಾ ಬದಲಾವಣೆಯಾಗಲಿದೆ..!

---Advertisement---

ಬೆಂಗಳೂರು; ಸಿಲಿಕಾನ್ ಸಿಟಿಯ ಎಲ್ಲಾ ಆಗು ಹೋಗುಗಳನ್ನ ನಿಭಾಯಿಸ್ತಾ ಇರೋದು ಬಿಬಿಎಂಪಿ. ಇದೀಗ ಬಿಬಿಎಂಪಿ ಎಂಬ ಹೆಸರನ್ನೇ ಬದಲಾಯಿಸಲಾಗಿದೆ. ಬಹಳ ವರ್ಷಗಳಿಂದ ಇದ್ದ ಹೆಸರು ಇಂದಿನಿಂದ ಬದಲಾಗಿದೆ. ಬಿಬಿಎಂಪಿ ಎಂಬ ಹೆಸರು ಇಂದಿನಿಂದ ಗ್ರೇಟರ್ ಬೆಂಗಳೂರು ಆಗಿ ಬದಲಾಗಿದೆ. ಈ ಮೂಲಕ ಹಲವು ಬದಲಾವಣೆಗೆ ಸಿಲಿಕಾನ್ ಸಿಟಿ ನಾಂದಿ‌ ಆಡಲಿದೆ.

ಈಗಾಗಲೇ ಬೆಂಗಳೂರು ವ್ಯಾಪ್ತಿಯಲ್ಲಿ ಮೂರು ಅಥವಾ ಐದು ಪಾಲಿಕೆಗಳನ್ನ ಸೃಷ್ಟಿಸುವ ಬಗ್ಗೆ ಚರ್ಚೆಯಾಗಿದೆ. ಸದ್ಯಕ್ಕೆ ಇಡೀ ಬೆಂಗಳೂರಿಗೆ ಒಂದೇ ಬಿಬಿಎಂಪಿ ಆಗಿತ್ತು. ಈಗ ಮೂರು ಪಾಲಿಕೆಗಳನ್ನ ಸೃಷ್ಟಿಸುವ ಪ್ಲ್ಯಾನ್ ನಡೆಸಲಾಗಿದೆ. ಏನು 17 ವರ್ಷದಿಂದ ಬಿಬಿಎಂಪಿ ಎಂಬ ಹೆಸರಿನಲ್ಲಿಯೇ ಸಾಗಿದ ಪಾಲಿಕೆ ಗ್ರೇಟರ್ ಬೆಂಗಳೂರು ಆದ್ಮೇಲೆ ಏನೆಲ್ಲಾ ಬದಲಾವಣೆಗಳು ಆಗಬಹುದು ಎಂಬುದು ಸಿಲಿಕಾನ್ ಸಿಟಿ ನಾಗರಿಕರ ಪ್ರಶ್ನೆಯಾಗಿದೆ. ಆದರೆ ಇದಕ್ಕೆ ಸರ್ಕಾರದಿಂದಾಗಲೀ, ಬಿಬಿಎಂಪಿಯಿಂದಾಗಲೀ ಉತ್ತರ ಸಿಕ್ಕಿಲ್ಲ.

ಮುಂದಿನ ಮೂರು ತಿಂಗಳು ಬಿಬಿಎಂಪಿಯೇ ಕಾರ್ಯ ನಿರ್ವಹಿಸಲಿದೆ. ಆ ಬಳಿಕ ಬಿಬಿಎಂಪಿ ವಿಭಜನೆಯೂ ಸೇರಿದಂತೆ ಹಲವು ಮಹತ್ವದ ಬದಲಾವಣೆಗಳು ಆಗಲಿದ್ದಾವೆ. ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳು ಸಹ ಬಿಬಿಎಂಪಿ ವ್ಯಾಪ್ತಿಗೆ ಸೇರಲಿವೆ. ಮುಂದಿನ ದಿನಗಳಲ್ಲಿ ಆಸ್ತಿಯ ನೀತಿಯೂ ಬದಲಾವಣೆಯಾಗುವ ಸಾಧ್ಯತೆ ಇದೆ. ಆದರೆ ಈಗ ಯಾವುದೇ ಬದಲಾವಣೆ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಈ ಬದಲಾವಣೆಗಳು ಆಗಲಿವೆ. ಸದ್ಯಕ್ಕೆ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿರುವ ಗ್ರೇಟರ್ ಬೆಂಗಳೂರು ನಿರ್ಧಾರಕ್ಕೆ ರಾಜಕೀಯ ಪಕ್ಷಗಳಿಂದ ಸಹಜವಾಗಿಯೇ ಪರ ವಿರೋಧಗಳು ಕೇಳಿ ಬರುತ್ತಿವೆ. ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನ ತೆಗೆದುಕೊಂಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment