Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಬೋಲಾ ವೈರಸ್ ಆತಂಕ ಬೇಡ, ಮುಂಜಾಗ್ರತೆ ಅಗತ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

---Advertisement---

ಸುದ್ದಿಒನ್,ಬೆಂಗಳೂರು,ಮೇ.23: ದೇಶದಲ್ಲಿ ಎಬೋಲಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. ಈ ಕುರಿತು ಜಾಗೃತಿ ಅತ್ಯಗತ್ಯವಾಗಿದ್ದು, ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಬೋಲಾ ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಆರೋಗ್ಯ ಇಲಾಖೆಯು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಸದ್ಯಕ್ಕೆ ದೇಶದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ಪತ್ತೆಯಾಗಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಸರ್ಕಾರ ಕೈಗೊಂಡಿರುವ ಪ್ರಮುಖ ಕ್ರಮಗಳು:

21 ದಿನಗಳ ನಿಗಾ: ವಿದೇಶಗಳಿಂದ ಬರುವ ಪ್ರಯಾಣಿಕರನ್ನು ಕಡ್ಡಾಯವಾಗಿ 21 ದಿನಗಳ ಕಾಲ ಆರೋಗ್ಯ ಇಲಾಖೆಯ ನಿಗಾದಲ್ಲಿ ಇರಿಸಲಾಗುವುದು.

ಲಕ್ಷಣಗಳಿದ್ದರೆ ತಕ್ಷಣ ಮಾಹಿತಿ: ನಿಗಾ ಅವಧಿಯಲ್ಲಿ ಯಾರಿಗಾದರೂ ರೋಗಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಕೇಂದ್ರದೊಂದಿಗೆ ಸಮನ್ವಯ: ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲು ರಾಜ್ಯ ಮತ್ತು ಕೇಂದ್ರದ ಅಧಿಕಾರಿಗಳ ತಂಡ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ.

ವದಂತಿಗಳಿಗೆ ಕಿವಿಗೊಡಬೇಡಿ:
ಎಬೋಲಾ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಯಾವುದೇ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಸರ್ಕಾರವು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸಂಪೂರ್ಣ ಸಜ್ಜಾಗಿದೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Join WhatsApp

Join Now

Join Telegram

Join Now