Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪೋಷಕರು ತಮ್ಮ ಮಕ್ಕಳು ಕ್ರೀಡಾಪಟುವಾಗಲಿ ಎಂದು ಯಾರೂ ಆಶಿಸುವುದಿಲ್ಲ, ಇದು ದುರಂತ : ಎನ್.ಡಿ. ಕುಮಾರ್

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಆ.10 :  ಇಂದಿನ ದಿನಮಾನದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಐ.ಟಿ., ಬಿ.ಟಿ. ಇಂಜಿನಿಯರ್, ಡಾಕ್ಟರ್ ನ್ಯಾಯಾವಾದಿ, ಸೇರಿದಂತೆ ಇತರೆ ಉದ್ಯೋಗದಲ್ಲಿ ನೋಡಲು ಇಚ್ಚೆ ಪಡುತ್ತಾರೆ ಹೊರೆತು ಯಾರು ಸಹಾ ತಮ್ಮ ಮಕ್ಕಳು ಕ್ರೀಡಾಪಟುವಾಗಲಿ ಎಂದು ಆಶಿಸುವುದಿಲ್ಲ. ಇದು ನಮ್ಮ ದುರಂತ ಇದರಿಂದ ಭಾರತ ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಹಿಂದೆ ಉಳಿಯಲು ಕಾರಣವಾದ ಪ್ರಮುಖ ಅಂಶಗಳಲ್ಲಿ ಇದು ಕೂಡ ಒಂದು. ಎಂದು ಅಂತರಾಷ್ಟ್ರೀಯ ಪದಕ ವಿಜೇತ ಕ್ರೀಡಾಪಟು ಎನ್.ಡಿ. ಕುಮಾರ್ ತಿಳಿಸಿದ್ದಾರೆ.

ದಾವಣಗೆರೆ ವಿಶ್ವ ವಿದ್ಯಾಲಯದ ಅಡಿಯಲ್ಲಿ ಜಿ.ಆರ್.ಹಳ್ಳಿಯಲ್ಲಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ  ಶನಿವಾರ ಜಿಮ್‍ಖಾನ ಅಡಿಯಲ್ಲಿ ನಡೆದ ಜ್ಞಾನ ಗಂಗೋತ್ರಿ ಕ್ರೀಡಾಕೂಟ ಅಂತರ ವಿಭಾಗ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು ನಮ್ಮಲ್ಲಿ ಇತ್ತೀಚೆಗೆ ನಡೆದ ಒಲಂಪಿಕ್ ಕ್ರೀಡಾಕೂಟದಲ್ಲಿ ನಮ್ಮವರ ಸಾಧನೆ ಕಡಿಮೆಯಾಗಿದೆ ಇಂದು ಒಂದು ಕಡೆಯಾದರೆ ಮ್ತತೊಂದು ಕಡೆಯಲ್ಲಿ ನಮ್ಮವರಿಗೆ ಕ್ರೀಡೆಯಲ್ಲಿ ಸಿಗಬೇಕಾದ ಸೌಲಭ್ಯ ಸರಿಯಾದಚ ರೀತಿಯಲ್ಲಿ ಸಹಾಯ ಮತ್ತು ಸಹಕಾರ ಸಿಗುತ್ತಿಲ್ಲ, ನಮ್ಮವರು ಒಲಂಪಿಕ್ ನಲ್ಲಿ ಇಷ್ಟು ಪದಕಗಳನ್ನು ಗೆದ್ದಿರುವುದೇ ಒಮದು ದೊಡ್ಡವ ಸಾಧನೆಯಾಗಿದೆ ಎಂದರು.

ಇತ್ತೀಚಿನ ದಿನಮಾನದಲ್ಲಿ ಬಹುತೇಕ ಪೋಷಕರು ತಮ್ಮ ಮಕ್ಕಳು ಉತ್ತಮವಾದ ಅಂಕಗಳನ್ನು ಪಡೆದು ಇಂಜಿನಿಯರ್, ಡಾಕ್ಟರ್, ನ್ಯಾಯವಾದಿ, ಇಲ್ಲವೆ ಸರ್ಕಾರದಲ್ಲಿ ಉತ್ತಮವಾದ ಅಧಿಕಾರಿಯಾಗಲಿ ಎದು ಆಶಿಸುತ್ತಾ ಉತ್ತಮವಾದ ಸಂಬಳವನ್ನು ತರಲಿ ಎನ್ನುತ್ತಾರೆ ಆದರೆ ಯಾರೂ ಸಹಾ ಕ್ರೀಡಾಪಟುಗಳಾಲಿ ಎಂದು ಆಶಿಸುವುದಿಲ್ಲ ಇದು ನಮ್ಮ ದೇಶದ ದುರಂತವಾಗಿದೆ. ಸರ್ಕಾರದಿಂದ ಕ್ರೀಡೆಗೆ ಸರಿಯಾದ ರೀತಿಯಲ್ಲಿ ಪ್ರೋತ್ಸಾಹ ಸಿಗುತ್ತಿಲ್ಲ, ಇದರಿಂದ ಹಲವಾರು ಕ್ರೀಡಾಪಟುಗಳು ಉತ್ತಮವಾಧ ಪ್ರತಿಭೆಯನ್ನು ಹೊಂದಿದ್ದರು ಸಹಾ ಅದಕ್ಕೆ ಪ್ರೋತ್ಸಾಹ ಇಲ್ಲದೆ ಕಮರಿ ಹೋಗುತ್ತಿವೆ. ಎಂದು ಕುಮಾರ್ ವಿಷಾಧಿಸಿದರು.

ಕ್ರೀಡಾ ಸಂಯೋಜಕರಾದ ಡಾ. ರಾಜೇಂದ್ರ ಪ್ರಸಾದ್ ಮಾತನಾಡಿ ಇತ್ತೀಚಿನ ದಿನಮಾನದಲ್ಲಿ ಯುವ ಜನತೆ ಕ್ರೀಡೆಯಲ್ಲಿ ಭಾಗವಹಿಸುವುದು ಕಡಿಮೆಯಾಗಿದೆ. ಬಹುತೇಕ ಯುವ ಜನಾಂಗ ಮೋಬೈಲ್‍ನಲ್ಲಿ ಮುಳುಗಿರುತ್ತಾರೆ ಇದರಿಂದ ಪ್ರಪಂಚವನ್ನೇ ಮರೆಯುತ್ತಾರೆ. ಕ್ರಿಡೆ ಮಾನವನಿಗೆ ಅತಿ ಮುಖ್ಯವಾಗಿದೆ ಇದರಿಂದ ಮಾನಸಿಕವಾಗಿ ಸದೃಢವಾಗಲು ಸಹಾಯವಾಗುತ್ತದೆ, ಆದರೆ ಇದರ ಬಗ್ಗೆ ಯಾರಿಗೂ ಸಹಾ ಅರಿವಿಲ್ಲದೆ ಕ್ರೀಡೆಯನ್ನು ನಿರ್ಲಕ್ಷ ಮಾಡುತ್ತಿದ್ದಾರೆ. ಸರ್ಕಾರ ಕ್ರೀಡೆಗಾಗಿ ಸಹಾಯವನ್ನು ಮಾಡುತ್ತಿದೆ ಇದರ ಪ್ರಯೋಜನವನ್ನು ಪಡೆಯಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಡಾ.ವಿಜಯ್‍ಕುಮಾರ್, ಡಾ. ಸತೀಶ್,ಡಾ. ಸುಂದರಂ,ಡಾ.ಶಶಿಧರ್,ಡಾ.ಅರುಣ್ ಕುಮಾರ್, ಡಾ.ಗಿರೀಶ್, ಡಾ.ಕುಮಾರ್, ಡಾ. ಕೀರ್ತಿ ಕುಮಾರ್  ಡಾ.ಜೋಶಿ, ಸೂಪರ್ಡೆಂಟ್ ಗಿರಿಜಮ್ಮ ನಿವೇದಿತಾ, ಹಾಗೂ ಬೋಧನಾ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...