ಮಗನಿಗೆ ಏನಾದ್ರೂ ಆದ್ರೆ ಬಿಡುವ ಪ್ರಶ್ನೆಯೇ ಇಲ್ಲ : ಲಾಯರ್ ಜಗದೀಶ್..!

suddionenews
1 Min Read

ಬೆಂಗಳೂರು : ಲಾಯರ್ ಜಗದೀಶ್ ಮಗನ ಮೇಲೆ ಹಲ್ಲೆ ನಡೆಸಲಾಗಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಗನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗನಿಗೆ ಏನಾದರೂ ಆದ್ರೆ ಸುಮ್ಮನೆ ಬಿಡುವುದಿಲ್ಲ ಎಂದು ಲಾಯರ್ ಜಗದೀಶ್ ಗರಂ ಆಗಿದ್ದಾರೆ.

ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲ ಜಗದೀಶ್ ಮಗ ಆರ್ಯನ್ ಹಾಗೂ ಅವರ ಆಪ್ತರ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ಆರೋಪ ಮಾಡಿರುವ ಲಾಯರ್ ಜಗದೀಶ್ ಹಲಸೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ವೇಳೆ ಮಾತನಾಡಿದ ಲಾಯರ್ ಜಗದೀಶ್, ಬೆಂಗಳೂರು ಪೊಲೀಸರ ಮೇಲೆ ಆಕ್ರೋಶಗೊಂಡಿದ್ದಾರೆ. ಪೊಲೀಸ್ ಸಮವಸ್ತ್ರ ಧರಿಸಿ ಗೂಂಡಾಗಿರಿ ಮಾಡುತ್ತಿದ್ದಾರೆ. ನನ್ನ ಮಗನಿಗೆ ಏನಾದರೂ ಆದರೆ, ನಾನಂತು ಸುಮ್ಮನೆ ಬಿಡೋದಿಲ್ಲ ಎಂದು ಆಕ್ರೋಶವಾಗಿ ನುಡಿದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *