ಬೆಳಗಾವಿಯಲ್ಲಿ ಮರಾಠಿ ಪುಂಡರ ನಡವಳಿಕೆಗೆ ಬೇಸತ್ತ ಕಮ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬಂದ್ ನಡೆಯುತ್ತಿದೆ. ಆದರೆ ಇಂದಿನ ಬಂದ್ ಗೆ ಎಲ್ಲೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂಬ ಮಾಹಿತಿ ಇಲ್ಲಿದೆ.

ಅದರಲ್ಲೂ ಬೆಂಗಳೂರಿನ ಮಂದಿಗಂತು ಯಾವುದೇ ರೀತಿಯ ವ್ಯತ್ಯಾಸವಾಗಿಲ್ಲ.ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರವೂ ಮೊದಲಿನಂತೆ ಇದೆ. ಮೆಟ್ರೋ ಸಂಚಾರವೂ ಎಂದಿನಂತೆ ಇದೆ. ಹೊಟೇಲ್ ಗಳು ಕೂಡ ತೆರೆದಿವೆ. ಮೈಸೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದರಲ್ಲೂ ಕರಾವಳಿ ಕರ್ನಾಟಕದಲ್ಲಿ ಬಂದ್ ಗೆ ಯಾವುದೇ ಸಂಘಟನೆಕರೆ ನೀಡಿಲ್ಲ. ಜನರು ತಮ್ಮ ದಿನಚರಿಯನ್ನು ಮಾಮೂಲಿಯಂತೆ ನಡೆಸುತ್ತಿದ್ದಾರೆ.

ಇನ್ನು ರಾಮನಗರದಲ್ಲಿ ಬಂದ್ ವಿಫಲವಾಗಿದೆ. ವಾಹನಗಳ ಸಂಚಾರ ಯಥಾ ಸ್ಥಿತಿಯಲ್ಲಿದೆ. ಅಂಗಡಿಗಳು ತೆರೆದಿದ್ದು, ವ್ಯಾಪಾರ ಎಂದಿನಂತೆ ಸಾಗಿದೆ. ಚಿಕ್ಕಮಗಳೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲಕರನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆದಿದೆ. ಚಾಮರಾಜನಗರದಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ಇತ್ತು. ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯಿಂದ ಬಂದ್ ಸೀಮಿತವಾಯ್ತು.ವೆಂಇಎಸ್ ಬಿತ್ತಿ ಚಿತ್ರದ ಮೇಲೆ ಟೊಮ್ಯಾಟೋ ಹೊಡೆದು ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಂತು ಎಲ್ಲರ ಜೀವನ ಯಥಾಸ್ಥಿತಿ ಸಾಗುತ್ತಿದೆ. ಬಸ್ ಗಳ ಓಡಾಟ, ಜನರ ಓಡಾಟ ಎಲ್ಲವೂ ಸಾಮಾನ್ಯವಾಗಿ ನಡೆಯುತ್ತಿದೆ. ಅಂಗಡಿಗಳನ್ನು ತೆರೆಯಲಾಗಿದೆ. ವ್ಯಾಪಾರವೂ ನಡೆಯುತ್ತಿದೆ, ಕಚೇರಿಗಳು ಓಪನ್ ಆಗಿವೆ. ಮರಾಠಿಗರ ಪುಂಡಾಟಕ್ಕೆ ಬ್ರೇಕ್ ಹಾಕುವುದಕ್ಕೆ ಕನ್ನಡಪರ ಹೋರಾಟಗಾರರು ಮಾಡುತ್ತಿರುವ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

