Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ – ಜೆಡಿಎಸ್ ನಡುವೆ ಯಾವುದೇ ಸೀಟು ಹೊಂದಾಣಿಕೆಯಾಗಿಲ್ಲ : ಮೈತ್ರಿ ಬಗ್ಗೆ ಕುಮಾರಸ್ವಾಮಿ ಫಸ್ಟ್ ರಿಯಾಕ್ಷನ್

---Advertisement---

 

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಇದರ ಮಧ್ಯೆ ದೆಹಲಿಯಲ್ಲಿ ಮೈತ್ರಿ ಮಾತುಕತೆ ನಡೆದಿದೆ. ರಾಜ್ಯದಲ್ಲೆಲ್ಲಾ ಮೈತ್ರಿಯದ್ದೇ ಚರ್ಚೆಯಾಗುತ್ತಿದೆ. ಇದರ ನಡುವೆ ಮೈತ್ರಿ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರೋಗ್ಯದ ಕಡೆಗೆ ಗಮನ ಕೊಡುವುದರ ಜೊತೆಗೆ ಮೈತ್ರಿಯ ಮಾತುಕತೆಯ ಕಡೆಗೂ ಗಮನ ನೀಡಿದ್ದೇನೆ. ಮೈತ್ರಿ ಕುರಿತ ಮಾತುಕತೆಗಳೆಲ್ಲಾ ಮಾತುಕತೆಯ ಹಂತದಲ್ಲಿವೆ. ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಗಮನಿಸಿದ್ದೇನೆ. ಬಿಜೆಪಿ ಮತ್ತು ಜೆಡಿಎಸ್ ನಡುವೆ ಸೀಟು ಹೊಂದಾಣಿಕೆಯ ಚರ್ಚೆಯಾಗಿಲ್ಲ ಎಂದಿದ್ದಾರೆ.

ಇನ್ನು ಬಿಎಸ್ ಯಡಿಯೂರಪ್ಪ ಅವರು ನಿನ್ನೆ ಮಾತಾಡಿದ್ದನ್ನು ಕೇಳಿಸಿಕೊಂಡೆ. ಪಕ್ಷದ ಬಗ್ಗೆ, ದೇವೇಗೌಡರ ಬಗ್ಗೆ ಹಾಗೂ ನನ್ನ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಯಡಿಯೂರಪ್ಪ ಅವರು ಹೇಳಿರುವುದಕ್ಕೆ ನಾನು ಆಭಾರಿಯಾಗಿದ್ದೇನೆ. ಸೀಟು ಹೊಂದಾಣಿಕೆಯ ಚರ್ಚೆಯಾಗಿಲ್ಲ. ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಹಠ ಹಿಡಿದಿದೆ. ಮಂಡ್ಯ ಸೀಟು ಏನಾಗುತ್ತದೆ..? ಅಲ್ಲಿನ ಸಂಸದರಿಗೆ ಏನಾಗುತ್ತದೆ..? ತುಮಕೂರು, ಕೋಲಾರ ಏನಾಗುತ್ತದೆ ಎಂಬುದ್ಯಾವುದು ಚರ್ಚೆಯೇ ಆಗಿಲ್ಲ. ಚರ್ಚೆನೆ ಆರಂಭಿಕ ಹಂತದಲ್ಲಿರುವಾಗ ಜನರಗೆ ತಪ್ಪು ಮಾಹಿತಿ ನೀಡಬಾರದು ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...