Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೋಕಿಯಾ: ಜಾಗತಿಕವಾಗಿ 20% ಉದ್ಯೋಗ ಕಡಿತ! ಕಂಪನಿಯಿಂದ 14,000 ನೌಕರರು ವಜಾ

---Advertisement---

ಒಂದು ಕಾಲದಲ್ಲಿ ವಿಶ್ವದ ಅಗ್ರ ಫೋನ್ ತಯಾರಕವಾಗಿದ್ದ ನೋಕಿಯಾ ಇದೀಗ ದೊಡ್ಡ ಮಟ್ಟದ ಪುನರ್‌ರಚನೆಗೆ ಮುಂದಾಗಿದ್ದು, ಜಾಗತಿಕವಾಗಿ ಉದ್ಯೋಗಿಗಳನ್ನು ಕಡಿತಗೊಳಿಸಲು ಸಿದ್ಧತೆ ನಡೆಸುತ್ತಿದೆ. ಕಂಪನಿಯ ಯೋಜನೆಯಂತೆ ಒಟ್ಟು 14,000 ಉದ್ಯೋಗಿಗಳನ್ನು ಕಡಿಮೆ ಮಾಡುವ ಸಾಧ್ಯತೆ ಇದ್ದು, ಅದರ ಭಾಗವಾಗಿ ಭಾರತದಲ್ಲೂ ವಜಾಗೊಳಿಕೆ ನಡೆಯುವ ಸಾಧ್ಯತೆ ಇದೆ.

ವರದಿಗಳ ಪ್ರಕಾರ, ನೋಕಿಯಾ ತನ್ನ ಜಾಗತಿಕ ಉದ್ಯೋಗಿಗಳಲ್ಲಿ ಸುಮಾರು 20% ಕಡಿತಗೊಳಿಸುವ ನಿರೀಕ್ಷೆಯಿದೆ. ಪ್ರಸ್ತುತ ಕಂಪನಿಯಲ್ಲಿ 74,000ಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುತ್ತಿದ್ದು, ಭಾರತದಲ್ಲಿಯೇ 17,000ಕ್ಕೂ ಹೆಚ್ಚು ಸಿಬ್ಬಂದಿ ಇದ್ದಾರೆ.
ಈ ಕ್ರಮವು ಇತ್ತೀಚೆಗೆ ಅಮೇಜಾನ್ (Amazon), ಮೈಕ್ರೋಸಾಫ್ಟ್ (Microsoft) ಮತ್ತು ಗೂಗಲ್ (Google) ಸೇರಿದಂತೆ ಹಲವು ತಂತ್ರಜ್ಞಾನ ದಿಗ್ಗಜಗಳು ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿರುವ ಹಿನ್ನೆಲೆಯಲ್ಲಿಯೇ ಗಮನ ಸೆಳೆಯುತ್ತಿದೆ.

ಇದೇ ವೇಳೆ ಮೇಟಾ (Meta) ಕೂಡ 15,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕಡಿತಗೊಳಿಸುವ ಸಾಧ್ಯತೆ ಕುರಿತು ವರದಿಗಳು ಹರಿದಾಡುತ್ತಿವೆ.ನೋಕಿಯಾದ ಭಾರತದಲ್ಲಿನ ವ್ಯವಹಾರ ಪ್ರದರ್ಶನ ಕುಸಿತ ಕಂಡಿದ್ದು, 2025ರ ನಾಲ್ಕನೇ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ಮಾರಾಟ ವರ್ಷದಿಂದ ವರ್ಷಕ್ಕೆ 15% ಇಳಿಕೆಯಾಗಿದ್ದು, 393 ಮಿಲಿಯನ್ ಯುರೋ (ಸುಮಾರು ₹4,290 ಕೋಟಿ) ಆಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಇದು 463 ಮಿಲಿಯನ್ ಯುರೋ (ಸುಮಾರು ₹5,000 ಕೋಟಿ) ಇತ್ತು ಎಂದು ಕಂಪನಿ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now