Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೌತ್ ಸೂಪರ್ ಸ್ಟಾರ್ ವಿಕ್ರಮ್ ಗೆ ಹೃದಯಾಘಾತವಾಗಿರಲಿಲ್ಲವಾ..? ಹಾಗಾದ್ರೆ ಆಗಿದ್ದೇನು..? ಮ್ಯಾನೇಜರ್ ಹೇಳಿದ್ದೇನು..?

Facebook
Twitter
Telegram
WhatsApp

ನವದೆಹಲಿ: ದಕ್ಷಿಣ ಸೂಪರ್‌ಸ್ಟಾರ್ ಚಿಯಾನ್ ವಿಕ್ರಮ್ ಗೆ ಮೈಲ್ಡ್ ಹಾರ್ಟ್ ಅಟ್ಯಾಕ್ ಆಗಿದ್ದು, ಅವರನ್ನು ಚೆನ್ನೈನ ಕೌವೆರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ಒಂದಷ್ಟು ಊಹಾಪೋಹಗಳು ಹರಡಿವೆ. ಇದೀಗ ವಿಕ್ರಂ ಅವರ ಮ್ಯಾನೇಜರ್ ಸೂರ್ಯನಾರಾಯಣನ್ ಟ್ವೀಟ್ ಮಾಡಿ ಅಧಿಕೃತವಾಗಿ ಮಾಹಿತಿ ತಿಳಿಸಿದ್ದಾರೆ.

ವಿಕ್ರಮ್ ಅವರ ಮ್ಯಾನೇಜರ್ ಆರೋಗ್ಯದ ಬಗ್ಗೆ ಗಾಳಿ ಸುದ್ದಿಯನ್ನು ನಂಬಬೇಡಿ ಎಂದಿದ್ದಾರೆ. ಆತ್ಮೀಯ ಅಭಿಮಾನಿಗಳು ಮತ್ತು ಹಿತೈಷಿಗಳೇ, ಚಿಯಾನ್ ವಿಕ್ರಮ್ ಅವರಿಗೆ ಎದೆಯಲ್ಲಿ ಸ್ವಲ್ಪ ಅಸ್ವಸ್ಥತೆ ಕಂಡು ಬಂದಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ವರದಿಗಳು ಹೇಳುವಂತೆ ಅವರಿಗೆ ಹೃದಯಾಘಾತವಾಗಿರಲಿಲ್ಲ. ಈ ರೀತಿಯ ವದಂತಿಗಳನ್ನು ಕೇಳಿ ನಮಗೆ ನೋವಾಗಿದೆ.

ನಮ್ಮ ಪ್ರೀತಿಯ ಚಿಯಾನ್ ಈಗ ಚೆನ್ನಾಗಿದ್ದಾರೆ. ಇನ್ನು ಒಂದು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ನಮ್ಮ ಈ ಹೇಳಿಕೆ ಸ್ಪಷ್ಟತೆ ನೀಡುತ್ತದೆ ಎಂದು ನಾವು ಭಾವಿಸುತ್ತೇವೆ ಮತ್ತು ಸುಳ್ಳು ವದಂತಿಗಳನ್ನು ನಿಲ್ಲಿಸುತ್ತೀರಿ ಎಂದು ನಂಬುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಅವರ ಮ್ಯಾನೇಜರ್ ಹಂಚಿಕೊಂಡ ಮಾಹಿತಿಯ ಪ್ರಕಾರ, ವಿಕ್ರಮ್ ಒಂದು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ಚಿಯಾನ್ ಅಭಿಮಾನಿಗಳು ವದಂತಿಗಳನ್ನು ನಂಬಬೇಡಿ ಮತ್ತು ಅವರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಇಂದು ಸಂಜೆ ಚೆನ್ನೈನಲ್ಲಿ ನಡೆದ ದಂತಕಥೆ ಮಣಿರತ್ನಂ ಅವರ ಮುಂಬರುವ ಚಿತ್ರ ಪೊನ್ನಿಯಿನ್ ಸೆಲ್ವನ್‌ನ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಸೂಪರ್‌ಸ್ಟಾರ್ ಹಾಜರಾಗಬೇಕಿತ್ತು. ಆದರೆ ಅನಾರೋಗ್ಯದ ಕಾರಣದಿಂದ ಅವರು ಹಾಜರಾಗಲು ಸಾಧ್ಯವಾಗಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!