Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಿಕೆಶಿಯನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್ ನಲ್ಲಿ 1 ರೂಪಾಯಿ ಕೊಡ್ಲಿಲ್ಲ : ಪ್ರಣವಾನಂದಶ್ರೀ

---Advertisement---

ಬೆಂಗಳೂರು : ಇಂದು ನಾವೂ ಬರೋದಿಕ್ಕೆ ಕಾರಣ ಏನು ಅಂದ್ರೆ ಉಪಮುಖ್ಯಮಂತ್ರಿಗಳನ್ನು ಕೂಡಲೇ ಮುಖ್ಯಮಂತ್ರಿಗಳನ್ನಾಗಿ ಮಾಡಬೇಕು. ಸೋನಿಯಾ ಗಾಂಧಿ ಅವರು, ರಾಹುಲ್ ಗಾಂಧಿ ಅವರು ಸೇರಿ ಮಾತನ್ನಾಡಬೇಕು. ಈಗಾಗಲೇ ತುಂಬಾನೇ ಲೇಟ್ ಆಗಿದೆ. ಅವರು ಕಾಂಗ್ರೆಸ್ ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಅದಕ್ಕಾಗಿ ಕೂಲಿ ಕೊಡಬೇಕು ಎಂದು ಪ್ರಣವಾನಂದ ಸ್ವಾಮಿಗಳು ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದರು.

ಮೇ ತಿಂಗಳಲ್ಲಿ ಅರಮನೆ ಮೈದಾನದಲ್ಲಿ ಬೃಹತ್ ಮಠಾಧೀಶ್ವರ ಮಹಾಸಭೆ ವಿಚಾರವಾಗಿ ಈಡಿಗ ಸಮುದಾಯದ ಪ್ರಣಾವನಂದ ಸ್ವಾಮೀಜಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸದಾಶಿವ ನಗರದ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನ್ನಾಡಿ, ಬಜೆಟ್ ಬಗ್ಗೆಯೂ ಪ್ರಸ್ತಾಪ ಮಾಡಿದ್ದಾರೆ.

ಒಂದು ವೇಳೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡದೆ ಮುಂದುವರೆಸಿಕೊಂಡು ಹೋದರೆ, ಈಗ ಏನು ಹೇಳ್ತಾ ಇದ್ದಾರೆ ಪಂಚರಾಜ್ಯ ಚುನಾವಣೆ ಅಂತಿದ್ದಾರೆ. ಅದಕ್ಕೂ ಮುಂಚೆ ಯುಗಾದಿ ಅಂದಿದ್ರು. ಅದಕ್ಕೂ ಮುಂಚೆ ಮಕರ ಸಂಕ್ರಾಂತಿ ಅಂತೇಳಿದ್ರು. ಎಷ್ಟೊಂದು ದಿನ ಕಾಯಬೇಕಾಗುತ್ತೆ. ಅವರನ್ನ ಕೂಡಲೇ ಮುಖ್ಯಮಂತ್ರಿ ಮಾಡಬೇಕು ಎಂಬುದೇ ನಮ್ಮೆಲ್ಲರ ಒತ್ತಾಯ. ಅದರ ಜೊತೆಗೆ ಮೇ ತಿಂಗಳಲ್ಲಿ ಬೃಹತ್ ಸಮಾವೇಶ ಮಾಡ್ತಾ ಇದ್ದೀವಿ. ಮಠಾಧೀಶ್ವರ ಮಹಾಸಭೆಗೆ ಅವರು ಮೊದಲು ಬಂದಾಗ ಒಂದು ಭರವಸೆಯನ್ನ ನೀಡಿದ್ರು, ಎಲ್ಲಾ ಹಿಂದೂಳಿದ ಸಮುದಾಯದ ಸ್ವಾಮೀಜಿಗಳು ಕೂಡ ಬೆಂಗಳೂರಲ್ಲಿ ಉಳಿದುಕೊಳ್ಳುವುದಕ್ಕೆ ವ್ಯವಸ್ಥೆ ಮಾಡಿ‌ಕೊಡ್ತೀನಿ ಅಂದಿದ್ರು. ಇವಾಗ ಬರೋದಕ್ಕೂ ಒಂದು ಕಾರಣವಿದೆ. ಮೊನ್ನೆ ಬಜೆಟ್ ನಲ್ಲಿ ಯಾವ್ಯಾವ ಸ್ವಾಮೀಜಿಗಳು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ, ಮುಖ್ಯಮಂತ್ರಿ ಮಾಡಲು ಎಂದು ಹೇಳಿದ ಸ್ವಾಮೀಜಿಗಳ ಮಠಕ್ಕೆ ಒಂದು ರೂಪಾಯಿ ಕೂಡ ಕೊಟ್ಟಿಲ್ಲ ಎಂದು ಬೇಸರ ಹೊರ ಹಾಕಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now