ಬಿಜೆಪಿ ರಾಜ್ಯಾಧ್ಯಕ್ಷ ಮಾತ್ರವಲ್ಲ ವಿಪಕ್ಷ ನಾಯಕನ ಸ್ಥಾನ ಕೂಡ ಬದಲಾಗುತ್ತೆ : ಅಶೋಕ್ ಭವಿಷ್ಯ ನುಡಿದ ಶಾಸಕ..!

ಬೆಂಗಳೂರು: ಬಿಜೆಪಿಯಲ್ಲಿ ಮೊದಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯುದ್ಧ ಶುರುವಾಗಿದೆ. ಯತ್ನಾಳ್ ಬಣ ಪಣತೊಟ್ಟು ನಿಂತಿದ್ದು, ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನ ಕೆಳಗಿಳಿಸಿಯೇ ತೀರುತ್ತೇವೆ ಎನ್ನುತ್ತಿದ್ದಾರೆ. ನಾನು ಕೂಡ ಆಕಾಂಕ್ಷಿ ನಾನೇ ನಿಲ್ತೀನಿ ಅಂತ ಯತ್ನಾಳ್ ಹೇಳ್ತಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮೂಲಕವೇ ಆಯ್ಕೆ ಎಂದು ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ. ಇದರ ನಡುವೆ ವಿಪಕ್ಷ ನಾಯಕನ ಸ್ಥಾನಕ್ಕೂ ಕುತ್ತು ಬರುವಂತೆ ಕಾಣಿಸುತ್ತಿದೆ.

ಸದ್ಯ ಬಿಜೆಪಿಯಲ್ಲಿ ವಿಪಲ್ಷ ನಾಯಕನ ಸ್ಥಾನದಲ್ಲಿ ಆರ್.ಅಶೋಕ್ ಅವರಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಾತನಾಡಿದ್ದು, ಅಶೋಕ್ ಅವರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವುದಕ್ಕೆ ಪ್ರತಿದಿನ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹುದ್ದೆ ಮಾತ್ರವಲ್ಲ ವಿರೋಧ ಪಕ್ಷದ ನಾಯಕರ ಸ್ಥಾನವೂ ಬದಲಾವಣೆಯಾಗಲಿದೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಬಾಂಬ್ ಸಿಡಿಸಿದ್ದಾರೆ.

ನನಗೆ ಬಿಜೆಪಿಯಲ್ಲಿ ಅನೇಕ ಮಂದಿ ಸ್ನೇಹಿತರು ಇದ್ದಾರೆ. ಅವರಿಂದಲೇ ಈ ವಿಷಯ ನನಗೆ ಗೊತ್ತಾಯಿತು. ಹಾಗಾಗಿ ಖಾಲಿಯಾಗಲಿರುವ ಎರಡೂ ಕುರ್ಚಿಗಳ ಮೇಲೆ ಹಲವು ಮಂದಿ ಕಣ್ಣಿಟ್ಟಿದ್ದಾರೆ. ಅಶೋಕ್ ಅವರು ವಿಪಕ್ಷ ನಾಯಕರಾಗಿರುವ ಕಾರಣ ಅವರು ಪ್ರತಿದಿನ ಏನಾದರೂ ಹೇಳಬೇಕು. ಇಲ್ಲದಿದ್ದರೆ ಹೈಕಮಾಂಡ್ ನಾಯಕರು ಅವರನ್ನು ಏನು ನಿದ್ದೆ ಮಾಡ್ತಾ ಇದ್ದೀರಾ ಅಂತ ಕೇಳ್ತಾರೆ. ಆದ ಕಾರಣ ಅಶೋಕ್ ಸುದ್ದಿಯಲ್ಲಿರಬೇಕೆಂದು ಕಾಂಗ್ರೆಸ್ ಬಗ್ಗೆ ಏನನ್ನಾದರೂ ಮಾತಾಡುತ್ತ ಇರುತ್ತಾರೆ. ಅಶೋಕ್ ಅವರು ಮೊದಲು ಅವರ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣದ ಬಗ್ಗೆ ಯೋಚಿಸಲಿ. ಮೊದಲಿಗೆ ನಿಮ್ಮ ಪಕ್ಷದಲ್ಲಿ ಏನು ನಡೆದಿದೆ ಎಂಬುದನ್ನು ನೋಡಿಕೊಳ್ಳಲಿ ಎಂದಿದ್ದಾರೆ.

suddionenews

Recent Posts

ಕ್ಯಾನ್ಸರ್ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಹೊಣೆ : ಡಾ. ಅಶ್ವಿನಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಫೆ. 05…

23 minutes ago

ರಥಸಪ್ತಮಿಗೆ ವೈಜ್ಞಾನಿಕ ಜತೆಗೆ ಪುರಾಣಗಳ ಉಲ್ಲೇಖವಿದೆ : ಯೋಗಾಚಾರ್ಯ ಎಲ್.ಎಸ್ .ಚಿನ್ಮಯಾನಂದ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ, ಫೆ. 05 :…

27 minutes ago

ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 05 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 05 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ…

1 hour ago

ಮಹಾಕುಂಭಮೇಳದಲ್ಲಿ ಮೋದಿ : ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಪ್ರಧಾನಿ

ಪ್ರಯಾಗ್ ರಾಜ್ : ಈಗಾಗಲೇ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಕೋಟ್ಯಾಂತರ ಭಕ್ತರು ಪುಣ್ಯ ಸ್ನಾನ ಮಾಡಿದ್ದಾರೆ. ಇದೀಗ…

3 hours ago

ಮಾರ್ಚ್ ಗೂ ಮುನ್ನವೇ ಶುರುವಾಯ್ತು ಬಿರು ಬೇಸಿಗೆ : ಮಕ್ಕಳ ಆರೋಗ್ಯದ ಬಗ್ಗೆ ಇರಲಿ ಕಾಳಜಿ

ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿತ್ತು. ಹೀಗಾಗಿ ಚಳಿಗಾಲವೂ ಜಾಸ್ತಿ ಎಂದೇ ನಂಬಲಾಗಿತ್ತು. ಕೆರೆ ಕಟ್ಟೆಗಳೆಲ್ಲ ತುಂಬಿ ತುಳುಕುತ್ತಿದ್ದ ಕಾರಣಕ್ಕೆ…

4 hours ago

ಬಳ್ಳಾರಿ ವೈದ್ಯ ಕಿಡ್ನ್ಯಾಪ್ ಕೇಸ್ : ಕಾಂಗ್ರೆಸ್ ಮುಖಂಡ ಅರೆಸ್ಟ್

ಬಳ್ಳಾರಿ: ಜಿಲ್ಲಾಸ್ಪತ್ರೆಯ ವೈದ್ಯ ಡಾ.ಸುನೀಲ್ ಕಿಡ್ನ್ಯಾಪ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಒಂದು ಸಿಕ್ಕಿದೆ. ಜನವರಿ 25 ರಂದು ವಾಕಿಂಗ್ ಮಾಡುವಾಗ…

4 hours ago