Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆ ಶಿವಕುಮಾರ್ ಅವರ ವೈಯಕ್ತಿಕ ಸಾಮರ್ಥ್ಯದ ಬಗ್ಗೆ ಪ್ರಶ್ನಿಸುತ್ತಿಲ್ಲ ಆದರೆ..: ಸಿಟಿ ರವಿ ಹೇಳಿದ್ದೇನು..?

Facebook
Twitter
Telegram
WhatsApp

 

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಜಿಲ್ಲೆಯಲ್ಲಿ ಮಾತನಾಡಿ, ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡುವುದು ಅವಶ್ಯಕತೆಯೇ ಇಲ್ಲ. ದೇಶದ ಜನರೇ ಕಾಂಗ್ರೆಸ್ ಅನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇಲ್ಲಿ ಏನೋ ಡಿಕೆ ಶಿವಕುಮಾರ್ ಅವರು ಅವರನ್ನು ಅವರು ವೈಭವೀಕರಿಸಿಕೊಳ್ಳಬಹುದು. ಆದರೆ ಉತ್ತರ ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿ ಅವರೇ ಚುನಾವಣೆಗೆ ನೇತೃತ್ವ ವಹಿಸಿದ್ದರು. ಏನಾಯ್ತು ಅಲ್ಲಿ. 387 ಕ್ಷೇತ್ರದಲ್ಲಿ ಕಾಂಗ್ರೆಸ್ ಡೆಪಾಸಿಟ್ ಹೋಯ್ತು. ಗೆದ್ದಿದ್ದು ಎರಡೇ ಕ್ಷೇತ್ರ. ದೇಶದ ಜನರೇ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾರೆ. ಅವರೇ ಅಧಿಕಾರದಲ್ಲಿದ್ದಂತ ಪಂಜಾಬ್ ನಲ್ಲಿ ಹೀನಾಯವಾಗಿ ಸೋತರು. ಆಮ್ ಆದ್ಮಿ ಪಾರ್ಟಿಗೆ ರೆಡ್ ಕಾರ್ಪೆಟ್ ಹಾಸಿ ಕರೆದುಕೊಂಡು ಬಂದು ಕೂರಿಸಿದವರು ಇದೇ ಕಾಂಗ್ರೆಸ್ ಕೆಟ್ಟ ಆಡಳಿತಗಾರರು.

ನಾನು ಡಿಕೆ ಶಿವಕುಮಾರ್ ಅವರ ವೈಯಕ್ತಿಕ ಸಾಮರ್ಥ್ಯದ ಬಗ್ಗೆ ಪ್ರಶ್ನೆ ಮಾಡುವುದಕ್ಕೆ ಹೋಗಲ್ಲ. ಆದರೆ ಅವರ ರಾಜಕೀಯ ಸಾಮರ್ಥ್ಯ, ಅವರು ಇದುವರೆಗೆ ಸಾಬೀತು ಪಡಿಸಿರುವುದು, ಕನಕಪುರದಲ್ಲಿ ಮಾತ್ರ. ಹೀಗಾಗಿ ಅವರನ್ನು ನಾವೂ ಟಾರ್ಗೆಟ್ ಮಾಡುವ ಅವಶ್ಯಕತೆ ಇಲ್ಲ. ಒಂದು ಗಾದೆ ಮಾತಿದೆ ಉಪ್ಪು ತಿಂದವರು ನೀರು ಕುಡಿಯಬೇಕು, ತಪರಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಅವರು ಏನು ತಪ್ಪು ಮಾಡದೆ ಇದ್ದರೆ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮದಕರಿಪುರದಲ್ಲಿ ಕೊಲ್ಲಾಪುರದಮ್ಮ ಜಾತ್ರೆ | ಕೋಣ ಗುದ್ದಿ ಓರ್ವ ಮೃತ

  ಸುದ್ದಿಒನ್, ಚಿತ್ರದುರ್ಗ, ಮೇ. 01 : ಜಾತ್ರೆಯಲ್ಲಿ ದೇವಿಗೆ ಕೋಣ ಬಲಿ ಕೊಡುವ ವೇಳೆ ಕೊಣ ಗುದ್ದಿ ಕೊಲ್ಲಪ್ಪ (53 ವರ್ಷ) ಎಂಬಾತ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಮದಕರಿ ಪುರ ಗ್ರಾಮದಲ್ಲಿ ಇಂದು

ರಾಹುಲ್ ಚೌದ್ರಿ ನಿಧನ

  ಹಿರಿಯೂರು, ಸುದ್ದಿಒನ್, ಮೇ. 01 : ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ರಾಹುಲ್ ಚೌದ್ರಿ (34) ಅವರು ಅನಾರೋಗ್ಯದಿಂದ ಇಂದು(ಬುಧವಾರ) ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು

ಹೆಚ್ಚು ನೀರು ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ : ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಅದಕ್ಕಾಗಿಯೇ ವೈದ್ಯರು ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯಲು ಹೇಳುತ್ತಾರೆ. ಹೆಚ್ಚು ನೀರು ಇರುವ ಹಣ್ಣುಗಳು ಮತ್ತು ಆಹಾರಗಳನ್ನು

error: Content is protected !!