Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯವರ ಕುಮ್ಮಕ್ಕಿಲ್ಲದೆ ಏನೂ ನಡೆಯಲ್ಲ : ಸಿದ್ದರಾಮಯ್ಯ

Facebook
Twitter
Telegram
WhatsApp

ಚಿತ್ರದುರ್ಗ: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಏನೇನೋ ನಡೆಯುತ್ತಿದೆ. ಆ ವಿಚಾರವಾಗಿ ಕಾಂಗ್ರೆಸ್ ಕಾರಣ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ ಮಾಡಿದ್ದರು. ಅವರ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಜಿಲ್ಲೆಯ ಹಿರಿಯೂರಿನಲ್ಲಿ ಮಾತನಾಡಿದ ಅವರು, ಆರಗ ಜ್ಞಾನೇಂದ್ರ ಒಬ್ಬ ಹೋಂ ಮಿನಿಸ್ಟರ್ ಆಗಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಮಸೀದಿಗಳಲ್ಲಿ ಆಜಾನ್ ಮಾಡೋದು ನಿನ್ನೆ ಮೊನ್ನೆ ಮಾಡ್ತಾ ಇದ್ದಾರಾ..? ಅನೇಕ ವರ್ಷಗಳಿಂದಲೂ ಮಾಡ್ತಾ ಇದ್ದಾರೆ. ಚುನಾವಣೆ ಹತ್ತಿರ ಬರುತ್ತಾ ಇದೆ ಅಂತೇಳಿ ಅದನ್ನ ದೊಡ್ಡ ಸುದ್ದಿಯಾಗಿ ಮಾಡ್ತಿದ್ದಾರೆ. ಬಿಜೆಪಿಗರಿಗೆ ಜನಪರವಾದಂತ ವಿಚಾರಗಳಿಲ್ಲ. ಜನಪರ ಕೆಲಸ ಮಾಡಿಲ್ಲ, ಅಭಿವೃದ್ಧಿ ಮಾಡಿಲ್ಲ. ಬೆಲೆ ಏರಿಕೆ ಗಗನ ಮುಟ್ಟಿದೆ. ಪೆಟ್ರೋಲ್ ಡಿಸೇಲ್, ವಿದ್ಯುತ್, ಹೊಟೇಲ್ ಎಲ್ಲಾ ದರ ಏರಿಕೆಯಾಗಿದೆ. ಇದನ್ನ ಮುಚ್ಚಿಕೊಳ್ಳೋದಕ್ಕೆ ಅನಗತ್ಯವಾದ ವಿಚಾರಗಳನ್ನ ಮುನ್ನೆಲೆಗೆ ತರುತ್ತಾ ಇದ್ದಾರೆ.

ಹಿಜಾಬ್ ತಗೊಂಡ್ ಬಂದ್ರು, ಜಾಯ್ರೆಯಲ್ಲಿ ವ್ಯಾಪಾರ ನಿಷೇಧ ಮಾಡಿದ್ರು, ಭಗವದ್ಗೀತೆ ವಿಚಾರ ತಂದ್ರು, ಹಲಾಲ್ ತಿನ್ಬೇಡಿ ಅಂದ್ರು ಈಗ ಧ್ವನಿವರ್ಧಕ ವಿಚಾರ ತಂದಿದ್ದಾರೆ. ಜನರಿಗೆ ಇದೆಲ್ಲಾ ಅರ್ಥವಾಗುತ್ತೆ. ಯಾರು ಈ ರೀತಿಯೆಲ್ಲಾ ಅನ್ನೋದು. ದೇವಸ್ಥಾನ, ಮಸೀದಿ, ಚರ್ಚ್ ನಲ್ಲೂ ಉಪಯೋಗಿಸ್ತಾರೆ. ಈಗ ಯಾಕೆ ಇದನ್ನ ತಂದಿದ್ದೀರಿ. ರೇಣುಕಾಚಾರ್ಯ ಬಗ್ಗೆ ಮಾತಾಡಲ್ಲ ಅವನೊಬ್ಬ ಮತಾಂಧ.

ಬಿಜೆಪಿಗೆ ಗೊತ್ತಿಲ್ಲದೆ ಏನು ನಡೆಯಲ್ಲ. ಇವರ ಕುಮ್ಮಕ್ಕು ಇದೆ. ಚುನಾವಣೆ ಮುಖ್ಯವೇ ವಿನಃ ಅವರುಗೆ ಸಮಾಜದ ಸಾಮರಸ್ಯ ಮುಖ್ಯವಲ್ಲ. ಸಮಾಜದಲ್ಲಿ ಎಲ್ಲರೂ ಸಾಮರಸ್ಯದಿಂದ ಬದುಕಿದ್ದರೆ ರಾಜ್ಯ ಅಭಿವೃದ್ಧಿಯಾಗುತ್ತೆ. ಹೂಡಿಕೆದಾರರು ಬರುತ್ತಾರೆ. ಹೂಡಿಕೆ ಬಂದ್ರೆ ಉದ್ಯೋಗ ಸೃಷ್ಟಿಯಾಗಿತ್ತೆ. ಕಾನೂನು ಸುವ್ಯವಸ್ಥೆ ಇಲ್ಲದೆ ಹೋದರೆ ಉದ್ಯೋಗಗಳು ಸೃಷ್ಟಿಯಾಗಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!