ದಾವಣಗೆರೆ ಆ.05 : ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವ ಬೀದಿಬದಿ ವ್ಯಾಪಾರಿಗಳು ಮತ್ತು ಈ ಹಿಂದೆ ಪಾಲಿಕೆಯಿಂದ ನೋಂದಾಯಿಸಲ್ಪಟ್ಟ, ನೋಂದಣಿ ಮಾಡಿಸದೇ ಇರುವ ಬೀದಿಬದಿ ವ್ಯಾಪಾರಿಗಳು ನಗರದ ರಸ್ತೆ ಬದಿಗಳಲ್ಲಿ ಪಾದಚಾರಿ ರಸ್ತೆಗಳಲ್ಲಿ ತರಕಾರಿ, ಹಣ್ಣು ಹಂಪಲು, ಹೂವು ಹಾಗೂ ಪೂಜಾ ಸಾಮಗ್ರಿಗಳ ವ್ಯಾಪಾರ ಮಾಡಲು ತಾವು ಬಳಸುವ ತಳ್ಳುವ ಗಾಡಿ, ಪೆಟ್ಟಿಗೆಗಳನ್ನು ವ್ಯಾಪಾರದ ಸ್ಥಳದಲ್ಲಿಯೇ ಶಾಶ್ವತವಾಗಿ ಇಡುತ್ತಿರುವುದರಿಂದ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ತಳ್ಳುವ ಗಾಡಿಗಳು, ಮಾರಾಟ ಸಾಮಗ್ರಿಗಳು ಸಾರ್ವಜನಿಕ ರಸ್ತೆ, ಫುಟ್ ಪಾತ್ ಮೇಲೆ ಕಂಡುಬಂದಲ್ಲಿ ಅವುಗಳನ್ನು ಮತ್ತು ಜಪ್ತಿ ಮಾಡುವ ಜೊತೆಗೆ ದಂಡ ವಿಧಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










