ಗಣರಾಜ್ಯೋತ್ಸವ ದಿನಾಚಾರಣೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯ ಹಾಜರಾತಿಗೆ ಸೂಚನೆ

1 Min Read

ಮಾಹಿತಿ ಕೃಪೆ :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜ.25) : ಜಿಲ್ಲಾಡಳಿತ ವತಿಯಿಂದ ಜ.26 ರಂದು ಗಣರಾಜ್ಯೋತ್ಸವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 7.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭುಜಿ.ಆರ್.ಜೆ ಧ್ವಜಾರೋಹಣ ನೆರೆವೇರಿಸುವರು.

ಅಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣಲ್ಲಿ ಜಿಲ್ಲಾ ಮಟ್ಟದ ಗಣರೋಜ್ಯೊತ್ಸವ ಆಚರಣೆಯಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಧ್ವಜಾರೋಹಣ ನೆರವೇರಿಸುವರು. ಸಂಜೆ 6 ಗಂಟೆಗೆ ತರಾಸು ರಂಗಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.

ಈ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *