ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಧರ್ಮಸ್ಥಳವಾಗಿದೆ. ಪ್ರತಿದಿನ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಈ ವರ್ಷ ಫೆ. 15ರ ಭಾನುವಾರ ಶಿವರಾತ್ರಿ ಇದ್ದು
,ಈಗಲಂತೂ ಮಹಾ ಶಿವರಾತ್ರಿ ಸಮಯದಲ್ಲಿ ಸಾವಿರಾರು ಜನರು ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಾರೆ. ಆಗ ಭಕ್ತರಿಗೆ ವಸತಿ ಅತಿಅವಶ್ಯಕ.
ಈ ಸಮಯದಲ್ಲಿ ದೇವಾಲಯದ ಸುತ್ತಮುತ್ತ ಇರುವ ರೂಂಗಳಿಗೆ ಭಾರೀ ಬೇಡಿಕೆ ಇರುತ್ತದೆ. ಹಾಗಾಗಿ ಮುಂಚಿತವಾಗಿ ವಸತಿಗಾಗಿ ಬುಕ್ಕಿಂಗ್ ಮಾಡುವುದು ಇದೆ. ಆದರೆ ಈಗ ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತರನ್ನು ಗುರಿಯಾಗಿಸಿಕೊಂಡು ನಕಲಿ ರೂಂ ಬುಕ್ಕಿಂಗ್ಗಳನ್ನು ಸೃಷ್ಟಿಮಾಡಲಾಗುತ್ತದೆ. ಹಾಗಾಗಿ ಆನ್ಲೈನ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಿದೆ. ಆದ್ದರಿಂದ ನಕಲಿ ಬುಕ್ಕಿಂಗ್ ಬಗ್ಗೆ ಎಚ್ಚರವಹಿಸಿ ಎನ್ನಲಾಗುತ್ತಿದೆ.
ದೇವಾಲಯದ ಪ್ರಕಟಣೆ: ಶ್ರೀ ಕ್ಷೇತ್ರ ಧರ್ಮಸ್ಥಳ, ಭಕ್ತಾದಿಗಳ ಗಮನಕ್ಕೆ ಎಂದು ಪ್ರಕಟಣೆ ಹೊರಡಿಸಲಾಗಿದೆ. ನಕಲಿ ವೆಬ್ಸೈಟ್ಗಳು, ಫೋನ್ಕರೆಗಳು ಅಥವ ವಾಟ್ಸಪ್ ಸಂದೇಶಗಳ ಮೂಲಕ ನಡೆಯುವ ವಸತಿ ಗೃಹಗಳ (Rooms) ನಕಲಿ ಬುಕ್ಕಿಂಗ್ಗಳ ಬಗ್ಗೆ ಎಚ್ಚರದಿಂದಿರಲು ವಿನಂತಿಸಲಾಗಿದೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಅತಿಥಿ ಗೃಹಗಳ ಮುಂಡಗ ಕಾಯ್ದಿರಿಸುವಿಕೆ ಕೇವಲ ಅಧಿಕೃತ ವೆಬ್ಸೈಟ್ www.shridharmasthala.org ಮೂಲಕ ಮಾತ್ರ ಮಾಡಬಹುದಾಗಿದೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಅಪ್ಲಿಕೇಶನ್ ಅಥವ ಪ್ಲಾಟ್ಫಾರ್ಮ್ಗಳ ಮೂಲಕ ಬುಕ್ಕಿಂಗ್ ಮಾಡಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






