Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

1ನೇ ಕ್ಲಾಸಿಗೆ ಲಕ್ಷ ಲಕ್ಷ ಹಣ ತೆಗೆದುಕೊಳ್ಳುವ ಬೆಂಗಳೂರಿನಲ್ಲಿರುವ ಧೋನಿ ಶಾಲೆಗೆ ನೋಟೀಸ್..!

Facebook
Twitter
Telegram
WhatsApp

ಬೆಂಗಳೂರು: ಇತ್ತಿಚೆಗೆ ಎಲ್ ಕೆಜಿ/ ಯುಕೆಜಿ ಮಾಡಿಸುವುದಕ್ಕೂ ಲಕ್ಷ ಲಕ್ಷ ಹಣ ಕಟ್ಟಬೇಕಾದ ಸ್ಥಿತಿ ಇದೆ. ಅದರಲ್ಲೂ ಸಿಬಿಎಸ್ಸಿ / ಸ್ಟೇಟ್ ಸಿಲಬಸ್ ಎಂಬ ಕಾಂಪಿಟೇಷನ್ ಇದೆ. ಸ್ಟೇಟ್ ಸಿಲಬಸ್ ಗಿಂತ ಸಿಬಿಎಸ್ಸಿ ಸಿಲಬಸ್ ಗೆ ಹೆಚ್ಚು ಒತ್ತು ಕೊಡುತ್ತಾರೆ. ಹೀಗಾಗಿಯೇ ಅದೆಷ್ಟೋ ಶಾಲೆಗಳಲ್ಲಿ ಸಿಬಿಎಸ್ಸಿ ಅಂತ ಹೇಳಿ, ಸ್ಟೇಟ್ ಸಿಲಬಸ್ ನೇ ಬೋಧನೆ ‌ಮಾಡುತ್ತಿರುವ ಘಟನೆಗಳು ನಡೆದಿವೆ.

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ ಎಸ್ ಧೋನಿ ಒಡೆತನದ ಶಾಲೆಯಲ್ಲೂ ಇಂಥದ್ದೇ ಘಟನೆ ನಡೆದಿದೆ. ಒಂದನೇ ತರಗತಿಗೇನೆ ಎಂಎಸ್ ಧೋನಿ ಒಡೆತನದ ಶಾಲೆಯಲ್ಲಿ ಲಕ್ಷ ಲಕ್ಷ ಹಣ ತೆಗೆದುಕೊಳ್ಳಲಾಗುತ್ತದೆ. ಆದ್ರೆ ಸಿಎಬಿಎಸ್ಸಿ ಅಂತ ಹೇಳಿ ಸ್ಟೇಟ್ ಸಿಲಬಸ್ ಮಾತ್ರ ಅನುಮತಿ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಸಿಂಗಸಂಧ್ರದಲ್ಲಿ ಧೋನಿ ಒಡೆತನದ ಶಾಲೆ ಆರಂಭವಾಗಿದೆ. ಇಲ್ಲಿ ಒಂದರಿಂದ ಎಂಟನೇ ತರಗತಿಯವರೆಗೂ ಶಾಲೆ ಇದೆ. ಈ ಧೋನಿ ಶಾಲೆಯಲ್ಲಿ ಒಂದನೇ ತರಗತಿಗೇನೆ 1 ಲಕ್ಷದ 47 ಸಾವಿರದಷ್ಟು ಫೀಸ್ ಇದೆ. ಇನ್ನು ಮುಂದಿನ ತರಗತಿಗಳಿಗೆ ಇನ್ನು ಹೆಚ್ಚಿನ ಶುಲ್ಕ ವಿಧಿಸಲಾಗುತ್ತದೆ. ಆದರೆ ಎಂಎಸ್ ಧೋನಿ ಗ್ಲೋಬಲ್ ಶಾಲೆ ಪೋಷಕರಿಗೆ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.


ಈ ಶಾಲೆಯಲ್ಲಿ ಸಿಬಿಎಸ್ಸಿ ಸಿಲಬಸ್ ಎಂದು ಹೇಳಿ ಪೋಷಕರಿಂದ ಅಡ್ಮಿಷನ್ ಮಾಡಿಸಿಕೊಳ್ಳಲಾಗಿದೆ. ಆದರೆ CBSC ಸಿಲಬಸ್ ಗೆ ಶಾಲೆಯಿಂದ ಅನುಮತಿ ಪಡೆದಿಲ್ಲ. ಕೇವಲ ಸ್ಟೇಟ್ ಸಿಲಬಸ್ ಗೆ ಮಾತ್ರ ಅನುಮತಿ ಪಡೆದಿದೆ. ಹೀಗಾಗಿ ಶಿಕ್ಷಣ ಇಲಾಖೆ ಧೋನಿ ಗ್ಲೋಬಲ್ ಶಾಲೆಗೆ ನೋಟೀಸ್ ಜಾರಿ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!