Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನವೆಂಬರ್ ಕ್ರಾಂತಿ ಸಂಕ್ರಾಂತಿಗೆ ಶಿಫ್ಟ್ ಆಯ್ತಾ..? ಸತೀಶ್ ಜಾರಕಿಹೊಳಿ ಹೇಳಿದ್ದೇನು..?

---Advertisement---

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಕ್ರಾಂತಿಗಳ ಬಗ್ಗೆ ಚರ್ಚೆಯಾಗಿದ್ದೆ ಜಾಸ್ತಿ. ಸೆಪ್ಟೆಂಬರ್ ಕ್ರಾಂತಿ ಆಗುತ್ತೆ ಅಂದ್ರು ಅದು ಠುಸ್ ಪಟಾಕಿ ಆಯ್ತು. ನವೆಂಬರ್ ಕ್ರಾಂತಿಯಲ್ಲಿ ಖಂಡಿತ ಅಲ್ಲೋಲ ಕಲ್ಲೋಲ ಆಗುತ್ತೆ ಅಂದ್ರು ಅದು ಏನು ವರ್ಕ್ ಆಗ್ತಿರೋ ರೀತಿ ಕಾಣ್ತಿಲ್ಲ. ಮುಂದೆ ಸಂಕ್ರಾಂತಿ ಹಬ್ಬ ಬರ್ತಿದೆ. ಆಗ ಕ್ರಾಂತಿ ಆಗುತ್ತಾ ಎಂಬ ವಿಚಾರಕ್ಕೆ ಸತೀಶ್ ಜಾರಿಹೊಳಿ ಅವರು ಮಾಧ್ಯಮದವರ ಜೊತೆಗೆ ಮಾತನಾಡುವಾಗ ರಿಯಾಕ್ಟ್ ಮಾಡಿದ್ದಾರೆ.

ಸಂಬಂಧಪಟ್ಟವರನ್ನ ಕೇಳಿದ್ರೆ ಅದರ ಬಗ್ಗೆ ಮಾಹಿತಿ ಸಿಗಬಹುದು. ನಾವೂ ಯಾವ ಕ್ರಾಂತಿಯ ಬಗ್ಗೆಯು ಮಾತನಾಡಿಲ್ಲ. ನನಗೆ ಆ ಬಗ್ಗೆ ಗೊತ್ತಿಲ್ಲ ಎಂಬ ಮಾಹಿತಿಯನ್ನ ನೀಡಿದ್ದಾರೆ. ಬೆಳಗಾವಿ ಅಧಿವೇಶನದ ಸಿದ್ಧತೆಗಳ ಬಗ್ಗೆ ಮಾತನಾಡುತ್ತಾ, ಬೆಳಗಾವಿ ಅಧಿವೇಶನಕ್ಕೆ ಸಂಬಂಧಿಸಿದಂತೆ ಎಲ್ಲಾ ಸಿದ್ಧತೆಗಳು ಆಗಿವೆ. ಅದರಲ್ಲೇನು ವಿಶೇಷವಿಲ್ಲ. ಆದರೆ ಹಿಂದಿನ ಬಾರಿಯಾದಂತ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡ್ತಾ ಇದಾರೆ ಎಂದು ಹೇಳಿದ್ದಾರೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಈಗಾಗಲೇ ಅಧ್ಯಕ್ಷ ಸ್ಥಾನದ ತ್ಯಾಗದ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆ 8 ವರ್ಷ ಇದ್ರು. ಪರಮೇಶ್ವರ್ ಅವರು ಎಂಟು ವರ್ಷ ಮಾಡಿದ್ದರು. ಆ ರೆಕಾರ್ಡ್ ಮುರಿಬೇಕು ಅಂದ್ರೆ ಒಂದ್ ವರ್ಷ ಜಾಸ್ತಿಯಾಗಬೇಕಲ್ವಾ. ಆಸೆ ಎಲ್ಲರಿಗೂ ಇದ್ದೆ ಇರುತ್ತೆ. 90 ಮಾರ್ಕ್ಸ್ ಒಬ್ಬ ತಗೊಂಡ್ರೆ ನಾನು ಅದ್ಕಿಂತ ಹೆಚ್ಚು ತೆಗೆದುಕೊಳ್ಳಬೇಕು ಎಂಬುದು ಎಲ್ಲರಿಗೂ ಇದ್ದೆ ಇರುತ್ತಲ್ವಾ. ಹಾಗೆ ಇರಬಹುದು. ಇದನ್ನ ಸಂಬಂಧ ಪಟ್ಟವರನ್ನು ಕೇಳಿದ್ರೆನೆ ಚೆಂದ ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now