Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇನ್ನು ಮುಂದೆ ಜಿಲ್ಲಾಸ್ಪತ್ರೆಗಳಲ್ಲಿ ರೋಗಿಗಳು ಸಾಲಿನಲ್ಲಿ ನಿಲ್ಲಬೇಕಿಲ್ಲ : ಸಚಿವ ಸುಧಾಕರ್

Facebook
Twitter
Telegram
WhatsApp

ಬೆಂಗಳೂರು: ಜಯನಗರ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳು ಹಾಗೂ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಒಂದು ತಿಂಗಳೊಳಗೆ ಡಿಜಿಟಲ್‌ ಹೆಸರು ನೋಂದಣಿ ಹಾಗೂ ಡಿಜಿಟಲ್‌ ಪಾವತಿ ವ್ಯವಸ್ಥೆ ತರಲಾಗುವುದು. ಬಳಿಕ ತಾಲೂಕು ಆಸ್ಪತ್ರೆಗಳಲ್ಲೂ ಇದೇ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತಿ ವಾರ್ಡ್‌ಗೆ ಭೇಟಿ ನೀಡಿದ ಸಚಿವ ಡಾ.ಕೆ.ಸುಧಾಕರ್‌, ರೋಗಿಗಳನ್ನು ಮಾತನಾಡಿಸಿ ಚಿಕಿತ್ಸೆಯ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಬಳಿಕ ಆಸ್ಪತ್ರೆ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಇದೇ ವೇಳೆ ಆಸ್ಪತ್ರೆ *ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ* ಒದಗಿಸುವುದಾಗಿ ತಿಳಿಸಿದರು.

ಬಳಿಕ ಮಾತನಾಡಿದ ಸಚಿವರು, ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಜನದಟ್ಟಣೆ ಕಡಿಮೆ ಮಾಡಲು, ವೈದ್ಯರ ಭೇಟಿಗೆ ಆನ್‌ಲೈನ್‌ನಲ್ಲಿ ಅಥವಾ ಮೊಬೈಲ್‌ ಸಂದೇಶ ಮೂಲಕ ಸಮಯ ನಿಗದಿ ಮಾಡಿಕೊಳ್ಳುವ ವ್ಯವಸ್ಥೆ ತರಲು ಸೂಚಿಸಲಾಗಿದೆ. ಆಸ್ಪತ್ರೆಯಲ್ಲಿ ಜನರ ಉದ್ದದ ಸಾಲು ಕಡಿಮೆ ಮಾಡಲು ಈ ಕ್ರಮ ವಹಿಸಲಾಗುತ್ತಿದೆ. ವೈದ್ಯರ ಆಪಾಯಿಂಟ್‌ಮೆಂಟ್‌ ಸಮಯ, ಯಾವ ವೈದ್ಯರು ಎಂಬಿತ್ಯಾದಿ ಮಾಹಿತಿಗಳನ್ನು ಮೊಬೈಲ್‌ಗೆ ಸಂದೇಶ ಕಳುಹಿಸುವ ವ್ಯವಸ್ಥೆ ತರಲಾಗುತ್ತಿದೆ. ಆಸ್ಪತ್ರೆಗೆ ಯಾರೂ ಬಂದು ಕಾಯುವ ಅಗತ್ಯವಿಲ್ಲ. ಹಾಗೆಯೇ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಜನರು ಬರುವ ಮುನ್ನವೇ ಆನ್‌ಲೈನ್‌ ನಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಹಾಗೂ ಡಿಜಿಟಲ್‌ ಪಾವತಿ ಮಾಡುವ ವ್ಯವಸ್ಥೆ ತರಲಾಗುವುದು ಎಂದು ಹೇಳಿದರು.

 

ಜಯನಗರ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಬಗ್ಗೆ ರೋಗಿಗಳನ್ನು ಮಾತನಾಡಿಸಿದ್ದು, ಒಬ್ಬರು ಕೂಡ ಗುಣಮಟ್ಟದಲ್ಲಿ ಲೋಪ ಆಗಿದೆ ಎಂದು ಹೇಳಿಲ್ಲ. ಐದು ವರ್ಷದಿಂದ ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿರುವ ರೋಗಿಯೊಬ್ಬರು, ಯಾವುದೇ ಹಣ ನೀಡದೆ ಚಿಕಿತ್ಸೆ ಪಡೆಯುತ್ತಿದ್ದೇನೆ ಹಾಗೂ ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಾವಣಿ ಸೇರಿದಂತೆ ಕೆಲವೆಡೆ ದುರಸ್ತಿ ಕಾರ್ಯಗಳು ನಡೆಯಬೇಕಿದೆ. ಸುಮಾರು 5 ಕೋಟಿ ರೂ.ನಷ್ಟು ಅನುದಾನ ಬೇಕಿದ್ದು, ಅದನ್ನು ನೀಡಲಾಗುವುದು ಎಂದರು.

ರೋಗಿಗಳಿಗೆ ಚಿಕಿತ್ಸೆ ವಿಚಾರದಲ್ಲಿ ಸಮಾಧಾನ ಇದೆ ಎಂದು ತಿಳಿದುಬಂದಿದೆ. ಪ್ರಸೂತಿ ವಿಭಾಗದಲ್ಲಿ ಕೆಲ ದೂರುಗಳಿದ್ದು, ಅದಕ್ಕಾಗಿ ಸ್ಪಷ್ಟ ಸೂಚನೆ ನೀಡಲಾಗಿದೆ. ಪ್ರತಿ ವಿಭಾಗಗಳ ಮುಖ್ಯಸ್ಥರಿಗೆ ನಿಗದಿತ ಗುರಿ ನೀಡಲಾಗಿದೆ. ಜನರು ಖಾಸಗಿ ಆಸ್ಪತ್ರೆಗೆ ಹೋಗದೆ ಇಲ್ಲಿಯೇ ಬರುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.

ಈ ಹಿಂದೆ ಲಂಚ ಪಡೆದ ಹೊರಗುತ್ತಿಗೆ ವೈದ್ಯರೊಬ್ಬರ ವಿರುದ್ಧ ತನಿಖೆ ನಡೆಯುತ್ತಿದೆ. ಈಗ ತಕ್ಷಣ ಕೆಲಸದಿಂದ ತೆಗೆದುಹಾಕಬೇಕು ಎಂದು ಸೂಚಿಸಲಾಗಿದೆ. ತನಿಖಾ ವರದಿ ಬರುವ ಮುನ್ನವೇ ಅವರನ್ನು ಕೆಲಸದಿಂದ ತೆಗೆದುಹಾಕಲು ತಿಳಿಸಲಾಗಿದೆ. ರಾಜ್ಯದ ಬೇರೆ ಬೇರೆ ಆಸ್ಪತ್ರೆಗಳಿಗೂ ಭೇಟಿ ನೀಡಲಾಗುವುದು. ನಮ್ಮ ಸರ್ಕಾರ ಮಾತೃ ಹೃದಯ ಹೊಂದಿದ್ದು, ಅದಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸಲಾಗುವುದು ಎಂದರು.

 

ಕೋವಿಡ್‌ ರೋಗಿಗಳಿಂದ ಹಣ ಪಡೆದು ಬಳಿಕ ಸರ್ಕಾರದಿಂದ ಹಣ ಪಡೆದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌ ನೀಡಿ, ಹಣವನ್ನು ರೋಗಿಗಳಿಗೆ ಹಿಂದಿರುಗಿಸಲಾಗಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಕಾರ ಈ ರೀತಿಯ ಕ್ರಮ ವಹಿಸಿ, 1.58 ಕೋಟಿ ರೂ. ಹಣವನ್ನು ರೋಗಿಗಳ ಕುಟುಂಬಕ್ಕೆ ವಾಪಸ್‌ ಮಾಡಲಾಗಿದೆ. ಇನ್ನು ಉಳಿದ ಮೊತ್ತವನ್ನು ಕೂಡ ವಾಪಸ್‌ ಕೊಡಿಸಲಾಗುವುದು. ಮೊತ್ತವನ್ನು ವಾಪಸ್‌ ಕೊಡಿಸುವವರೆಗೂ ಸರ್ಕಾರ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!