ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 29 : ದಾವಣಗೆರೆ ವಿಶ್ವವಿದ್ಯಾನಿಲಯ ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ, ಮಹಾರಾಜ ಮದಕರಿನಾಯಕ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜು ವತಿಯಿಂದ ಸಿದ್ದಾಪುರದಲ್ಲಿ ಏಳು ದಿನಗಳ ಕಾಲ ನಡೆದ ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳು ರಾಷ್ಟ್ರೀಯ ಭಾವೈಕ್ಯತಾ ದೀಪ ಬೆಳಗುವ ಮೂಲಕ ಭಾರತ ಮಾತೆಗೆ ನಮಿಸಿ ಇಡಿ ಗ್ರಾಮಸ್ಥರ ಕಣ್ಮನ ಸೆಳೆದರು.
ನಿವೃತ್ತ ಪ್ರಾಚಾರ್ಯರಾದ ಪರಶುರಾಮ್ ಕಾಟವ್ಕರ್ ಮಾತನಾಡಿ ಎನ್.ಎಸ್.ಎಸ್. ಶಿಬಿರದಿಂದ ವಿದ್ಯಾರ್ಥಿಗಳು ಶಿಸ್ತು, ಸಮಯ ಪ್ರಜ್ಞೆ, ಸೇವಾ ಮನೋಭಾವ ಮೈಗೂಡಿಸಿಕೊಳ್ಳುವುದರ ಜೊತೆಗೆ ದೇಶ ಭಕ್ತಿ ಮೂಡಲಿದೆ ಎಂದು ಹೇಳಿದರು.
ಸಹ ಪ್ರಾಧ್ಯಾಪಕರು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ-ರ ಶಿಬಿರಾಧಿಕಾರಿ ಪ್ರೊ.ಗಂಗಮ್ಮ ಎನ್.ಟಿ. ಸಹಾಯಕ ಪ್ರಾಧ್ಯಾಪಕ ಪ್ರೊ.ಶ್ರೀನಿವಾಸ ಎನ್.
ಶಿಬಿರದ ನಿರ್ದೇಶಕರು, ಪ್ರಾಂಶುಪಾಲರಾದ ಡಿ.ಆರ್.ರಂಗಸ್ವಾಮಿ, ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರುಗಳು ರಾಷ್ಟ್ರೀಯ ಭಾವೈಕ್ಯತಾ ದೀಪೋತ್ಸವದಲ್ಲಿ ಭಾಗವಹಿಸಿದ್ದರು.













