Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಗಸ್ಟ್ 19 ರಂದು ನುಲಿಯ ಚಂದಯ್ಯ ಜಯಂತಿ | ನಮ್ಮ ಜನಾಂಗವನ್ನು ಕಡೆಗಣಿಸಲಾಗಿದೆ : ಹೆಚ್.ಎನ್.ರಾಮಚಂದ್ರಪ್ಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್ ,18 : ಬೆಂಗಳೂರಿನಲ್ಲಿ ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದೊಂದಿಗೆ ನಡೆಯಲಿರುವ ನುಲಿಯ ಚಂದಯ್ಯ ಜಯಂತಿ ಆಚರಣೆಯಲ್ಲಿ ನಮ್ಮ ಜನಾಂಗವನ್ನು ಕಡೆಗಣಿಸಲಾಗಿದೆ ಎಂದು ಅಖಿಲ ಕರ್ನಾಟಕ ಕೊರಚ ಮಹಾ ಸಂಘದ ರಾಜ್ಯಾಧ್ಯಕ್ಷ ಹೆಚ್.ಎನ್.ರಾಮಚಂದ್ರಪ್ಪ ಆಪಾದಿಸಿದರು.

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುಳುವ ಮಹಾಸಭಾ ಎಂದು ರಾಜ್ಯ ಮಟ್ಟದಲ್ಲಿ ನೊಂದಾಯಿಸಿಕೊಂಡಿರುವ ಕೆಲವರು ನಮ್ಮ ಜನಾಂಗವನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿರುವುದು ಅತೀವ ನೋವುಂಟಾಗಿದೆ. ಕೊರಚ, ಕೊರಮ, ಕೊರವಂಜಿ, ಕೊರವ, ಯರುಕುಲ ಎಂಬಿತ್ಯಾದಿ ಜಾತಿಗಳು ಒಳಗೊಂಡಂತೆ ರಾಜ್ಯದಲ್ಲಿ ಸುಮಾರು 2 ರಿಂದ 2.50 ಲಕ್ಷದಷ್ಟು ಜನಸಂಖ್ಯೆಯಿದೆ. ಕೊರಚ ಮತ್ತು ಕೊರಮ ಜನಾಂಗಕ್ಕೆ ಸಂಬಂಧಿಸಿದಂತೆ ಯಾವುದೇ ಗೆಜಟ್ ನೋಟಿಫಿಕೇಷನ್‍ನಲ್ಲಿ ಕುಳುವ ಎಂದು ನಮೂದಾಗಿಲ್ಲ. 2018 ನೇ ಸಾಲಿನಲ್ಲಿ ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ನೊಂದಣಿಯಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಿದರು.

ಗುರು ನುಲಿಯ ಜಯಂತಿ ಆಚರಣೆಗೆ ನಮ್ಮನ್ನು ಆಹ್ವಾನಿಸದೆ ಕಡೆಗಣಿಸಲಾಗಿದೆ. ಹಗ್ಗ ನೇಯುವುದು, ಬುಟ್ಟಿ ಎಣೆಯುವುದು, ಬಿದಿರು ತಯಾರಿಕೆ, ಕಣಿ ಹೇಳುವುದು ಕುಲ ಕಸುಬು. ಹಾಗಾಗಿ ಜಯಂತಿಯಲ್ಲಿ ನಮ್ಮ ಕುಲ ಕಸುಬುಗಳಿಗೆ ಸಂಬಂಧಪಟ್ಟಂತೆ ಸ್ಥಬ್ದ ಚಿತ್ರಗಳನ್ನು ಪ್ರದರ್ಶಿಸುವುದು ಪ್ರಮುಖ ವಿಚಾರ. ಕೆಲವೆ ಕೆಲವು ವ್ಯಕ್ತಿಗಳು ನಮ್ಮ ಸಮಾಜವನ್ನು ದಿಕ್ಕುತಪ್ಪಿಸುವ ಕುತಂತ್ರ ಮಾಡುತ್ತಿರುವುದು ಸರಿಯಲ್ಲ. ಮುಂದಿನ ವರ್ಷ ಪ್ರತ್ಯೇಕವಾಗಿ ಗುರು ನುಲಿಯ ಚಂದಯ್ಯ ಜಯಂತಿಯನ್ನು ಆಚರಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ನಿರ್ದೇಶನ ನೀಡುವಂತೆ ಸರ್ಕಾರದ ಕಾರ್ಯದರ್ಶಿಯವರಲ್ಲಿ ಹೆಚ್.ಎನ್.ರಾಮಚಂದ್ರಪ್ಪ ಮನವಿ ಮಾಡಿದರು.

ಅಖಿಲ ಕರ್ನಾಟಕ ಕೊರಚ ಮಹಾಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್, ಜಿಲ್ಲಾಧ್ಯಕ್ಷ ತಿಮ್ಮಣ್ಣ, ಮಂಜಪ್ಪ, ಶಿವಾನಂದಪ್ಪ, ಗಾಳೆಪ್ಪ ಇವರುಗಳು ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!