Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೈಲಿನಲ್ಲೂ ‘ನಂಬರ್’ ಆಟ: ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪ್ರದೋಷ್ ವಿರುದ್ಧ ದೂರು

---Advertisement---

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ 14ನೇ ಆರೋಪಿ ಪ್ರದೋಷ್ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿಬಂದಿದ್ದು, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈಲಿನಲ್ಲಿ ಬೇರೆ ಕೈದಿಯ ಹೆಸರಿನಲ್ಲಿ ಮೊಬೈಲ್‌ ನಂಬರ್ ಪಡೆದು, ಅದನ್ನು ವಕೀಲರ ನಂಬರ್ ಎಂದು ನೋಂದಾಯಿಸಿ ಪತ್ನಿಯೊಂದಿಗೆ ಮಾತನಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರದೋಷ್ ಈಗಾಗಲೇ ಮಾಫಿ ಸಾಕ್ಷಿಯಾಗಲು ನ್ಯಾಯಾಲಯದ ಮೊರೆ ಹೋಗಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ. ಪ್ರದೋಷ್ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಪ್ರಸ್ತಾಪಿಸಿರುವುದಾಗಿ ವರದಿಯಾಗಿದೆ.

ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ವಕೀಲರು ಹಾಗೂ ಕುಟುಂಬ ಸದಸ್ಯರೊಂದಿಗೆ ಮಾತನಾಡಲು ನಿಗದಿತ ದೂರವಾಣಿ ಸಂಖ್ಯೆಗಳ ವ್ಯವಸ್ಥೆ ಇರುತ್ತದೆ. ಈ ಸಂಖ್ಯೆಗಳ ವಿವರಗಳನ್ನು ಜೈಲು ದಾಖಲೆಗಳಲ್ಲಿ ನೋಂದಾಯಿಸಲಾಗುತ್ತದೆ.ಈ ನಂಬರ್‌ಗಳನ್ನು ನೋಂದಾಯಿಸುವ ಜವಾಬ್ದಾರಿ ಜೈಲು ಸಿಬ್ಬಂದಿ ಮೌನೇಶ್. ಹೆಚ್.ಕೋರಿ ಅವರಿಗೆ ವಹಿಸಲಾಗಿತ್ತು ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಪ್ರದೋಷ್ ಬೇರೆ ಕೈದಿಯ ಹೆಸರಿನಲ್ಲಿ ಒಂದು ನಂಬರ್ ಪಡೆದುಕೊಂಡಿದ್ದಾನೆ ಎಂಬ ಆರೋಪ ಇದೀಗ ಬೆಳಕಿಗೆ ಬಂದಿದೆ.

ಪೊಲೀಸ್ ದೂರಿನ ಪ್ರಕಾರ, ಜೈಲು ಸಿಬ್ಬಂದಿ ಮೌನೇಶ್ ಅವರ ಸಹಾಯದಿಂದ ಪ್ರದೋಷ್ ಬೇರೆ ಕೈದಿಯ ಹೆಸರಿನಲ್ಲಿ ನಂಬರ್ ನೋಂದಾಯಿಸಿಕೊಂಡಿದ್ದಾನೆ ಎನ್ನಲಾಗಿದೆ. ಬಳಿಕ ಆ ನಂಬರ್ ಅನ್ನು ವಕೀಲರ ನಂಬರ್ ಎಂದು ದಾಖಲಿಸಿ, ಅದನ್ನು ಬಳಸಿಕೊಂಡು ತನ್ನ ಪತ್ನಿಯೊಂದಿಗೆ ಮಾತನಾಡುತ್ತಿದ್ದನು ಎಂಬ ಆರೋಪವಿದೆ.
ಈ ಹಿನ್ನೆಲೆಯಲ್ಲಿ ಜೈಲು ನಿಯಮ ಉಲ್ಲಂಘನೆ ಹಾಗೂ ನಂಬರ್ ನೋಂದಣಿ ಪ್ರಕ್ರಿಯೆಯಲ್ಲಿ ಅಕ್ರಮಕ್ಕೆ ಸಹಕರಿಸಿದ ಆರೋಪದಡಿ ಜೈಲು ಸಿಬ್ಬಂದಿ ಮೌನೇಶ್ ಮತ್ತು ಆರೋಪಿ ಪ್ರದೋಷ್ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳಾಗಿದ್ದಾರೆ. ಪ್ರದೋಷ್ 14ನೇ ಆರೋಪಿಯಾಗಿದ್ದು, ಪ್ರಕರಣದಿಂದ ಮಾಫಿ ಸಾಕ್ಷಿಯಾಗಿ ಹೊರಬರಲು ಅರ್ಜಿ ಸಲ್ಲಿಸಿರುವುದು ಈಗಾಗಲೇ ನ್ಯಾಯಾಲಯದ ಗಮನ ಸೆಳೆದಿದೆ. ಪ್ರದೋಷ್ ಅವರ ಮಾಫಿ ಸಾಕ್ಷಿ ಅರ್ಜಿಗೆ ಸಂಬಂಧಿಸಿದಂತೆ ದರ್ಶನ್ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಿದ್ದರೂ, ಕರ್ನಾಟಕ ಹೈಕೋರ್ಟ್ ಅದನ್ನು ತಿರಸ್ಕರಿಸಿತ್ತು.

ಇದೀಗ ಜೈಲಿನಲ್ಲಿ ಬೇರೆ ಕೈದಿಯ ಹೆಸರಿನಲ್ಲಿ ನಂಬರ್ ಪಡೆದುಕೊಂಡಿರುವ ಆರೋಪದ ಕುರಿತು ಪ್ರತ್ಯೇಕ ದೂರು ದಾಖಲಾಗಿರುವುದರಿಂದ, ಪೊಲೀಸರು ಪ್ರಕರಣದ ಸಂಪೂರ್ಣ ಹಿನ್ನೆಲೆ ಹಾಗೂ ನಂಬರ್ ನೋಂದಣಿ ಪ್ರಕ್ರಿಯೆಯಲ್ಲಿ ಯಾರ್ಯಾರ ಪಾತ್ರವಿದೆ ಎಂಬುದರ ಬಗ್ಗೆ ತನಿಖೆ ನಡೆಸುವ ಸಾಧ್ಯತೆಯಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ | ಲಕ್ಷ್ಮಣ ರೆಡ್ಡಿ ನಿಧನ

ಚಿತ್ರದುರ್ಗ ಜಿಲ್ಲೆಯಾದ್ಯಂತ 2,134 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ : 7 ಅತಿಸೂಕ್ಷ್ಮ, 114 ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಚಿತ್ರದುರ್ಗ ಜಿಲ್ಲೆಯಾದ್ಯಂತ ಡಿ.ಜೆ, ಹೈ-ಡೆಸಿಬಲ್ ಧ್ವನಿವರ್ಧಕಗಳ ಬಳಕೆಗೆ ಸಂಪೂರ್ಣ ನಿಷೇಧ: ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶ

ಚಿತ್ರದುರ್ಗ ಮುಖ್ಯ ರಸ್ತೆ ಅಗಲೀಕರಣ : ಭೂಸ್ವಾಧೀನ, ಕಟ್ಟಡ ಪರಿಹಾರದ ನಿಖರ ಮಾಹಿತಿ ಸಂಗ್ರಹಿಸಲು ಸಚಿವ ಟಿ. ರಘುಮೂರ್ತಿ ಸೂಚನೆ

ಗೌರಿ-ಗಣೇಶ ಹಬ್ಬದ ಮೆರವಣಿಗೆಯಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ/ಸಿಡಿಮದ್ದು ಬಳಕೆ ನಿಷೇಧ: ಚಿತ್ರದುರ್ಗ ಜಿಲ್ಲಾಧಿಕಾರಿ ಆದೇಶ

ಗೋನೂರು ಕೆರೆಯಲ್ಲಿ ಭದ್ರೆಗೆ ಸಿಎಂ ಗಂಗಾಪೂಜೆ, ಬಾಗಿನ: ಅಗತ್ಯ ಸಿದ್ಧತೆಗೆ ಸಚಿವ ಟಿ. ರಘುಮೂರ್ತಿ ಸೂಚನೆ