Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೊಡ್ಡ ಸಿದ್ದವ್ವನಹಳ್ಳಿಯಲ್ಲಿ ಪೋಷಣ ಮಾಸಾಚರಣೆ ಹಾಗೂ ಬಾಲ್ಯ ವಿವಾಹ ನಿಷೇಧ ಅರಿವು ಕಾರ್ಯಕ್ರಮ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 25 : ತಾಲ್ಲೂಕಿನ ದೊಡ್ಡ ಸಿದ್ದವ್ವನಹಳ್ಳಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಪಂಚಾಯತ್ ಹಾಗೂ ಶಿಶು ಅಭಿವೃದ್ಧಿ ಯೋಜನೆ ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಅಂಗನವಾಡಿ ಎ ಕೇಂದ್ರದಲ್ಲಿ ಪೋಷಣ ಮಾಸಾಚರಣೆ ಹಾಗೂ ಬಾಲ್ಯ ವಿವಾಹ ನಿಷೇಧ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜಿಲ್ಲಾ ನಿರೂಪನಾಧಿಕಾರಿಗಳಾದ ವಿಜಯಕುಮಾರ್ ಅವರು ಸೆಪ್ಟೆಂಬರ್ ಮಾಹೆನಲ್ಲಿ ಪೋಷನ್ ಮಾಸಾಚರಣೆ ಮಾಡುತ್ತೇವೆ. 8 ಥೀಮ್ ನಂತೆ ಮಾಸಾಚರಣೆಯನ್ನು ಮಾಡುವುದಾಗಿ ತಿಳಿಸಿದರು. ಬಾಲ್ಯವಿವಾಹ ದ ಕುರಿತು ಮಾತನಾಡಿದರು. ತಾಯಂದಿರಿಗೆ ಪೌಷ್ಟಿಕತೆ ಬಗ್ಗೆ ತಿಳಿಸಿದರು. ಈ ವರ್ಷದ ಘೋಷವಾಕ್ಯ ಸುಪೋಷಿತ ಕಿಶೋರಿ ಸಶಕ್ತ ನಾರಿ ಎಂದು ಹೇಳಿ ಕಿಶೋರಿಯರ ಪೌಷ್ಟಿಕತೆ ಬಗ್ಗೆ ಹೇಳಿದರು.

ಶ್ರೀಮತಿ ವೀಣಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮಾತನಾಡಿ ಅಂಗನವಾಡಿ ಕೇಂದ್ರಗಳಲ್ಲಿ ವಿತರಿಸುತ್ತಿರುವ ಆಹಾರ ಪದಾರ್ಥಗಳನ್ನು ಫಲಾನುಭವಿಗಳು ಸರಿಯಾಗಿ ಉಪಯೋಗಿಸಿಕೊಳ್ಳಬೇಕು,ಮೊಟ್ಟೆಯು ಒಂದು ಸಂಪೂರ್ಣ ಆಹಾರವಾಗಿರುತ್ತದೆ ಮಕ್ಕಳು,ಗರ್ಭಿಣಿ ಮತ್ತು ಬಾಣಂತಿಯರು ಮೊಟ್ಟೆಯನ್ನು ಸೇವಿಸಬೇಕು ಎಂದು ತಿಳಿಸಿದರು.

ಆರೋಗ್ಯ ಇಲಾಖೆಯ ಶ್ರೀಧರ್ ಅವರು ಪೌಷ್ಟಿಕತೆ ಬಗ್ಗೆ ಹೇಳಿದರು. ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಯುತ ರಾಜಶೇಖರ್ ಅವರು ಮಾತನಾಡಿ ಬಾಲ್ಯ ವಿವಾಹ ನಿಷೇಧದ ಬಗ್ಗೆ ತಿಳಿಸಿದರು. ಶ್ರೀಮತಿ ಸುಧಾ ಗ್ರಾಮ ಪಂಚಾಯತ್ ಸದಸ್ಯರು ಮಾತನಾಡಿ ಗರ್ಭಿಣಿ ಮತ್ತು ಬಾಣಂತಿಯರ ಶುಚಿತ್ವದ ಬಗ್ಗೆ ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರ ಪೋಷಣ್ ಮಾಸಾಚರಣೆ ಆಯೋಜಿಸಿರುವುದನ್ನು ನೋಡಿ ಶ್ಲಾಘಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಶೋಭಾ ನಾವಳ್ಳಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗುರುಲಿಂಗಮ್ಮರವರು, ವೈದ್ಯಾಧಿಕಾರಿಗಳಾದ ಶ್ರೀಮತಿ ನಾಸಿಯಾ ಶಮಾಯ್ಲ ರವರು, ಹಿರಿಯ ಆರೋಗ್ಯ ಸಹಾಯಕರಾದ ಶ್ರೀಮತಿ ರೇಣುಕಮ್ಮ ಅವರು, ಪೋಷಣ ಅಭಿಯಾನ ಸಂಯೋಜಕಾರದ ಶ್ರೀಯುತ ಪ್ರದೀಪ್ ರವರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.28 : ಸುಖಾಯು‌ ಆಯುರ್ವೇದ ಕ್ಲಿನಿಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಹಾಗೂ ಉಚಿತ ಆರೋಗ್ಯ ಸಲಹಾ ಶಿಬಿರವನ್ನು ನಗರದ ಸಾದಿಕ್ ನಗರದ ನಿವಾಸಿಗಳಿಗೆ ನಾಳೆ (ಸೆಪ್ಟೆಂಬರ್. 29 ರ ಭಾನುವಾರ)

ಈ ರಾಶಿಯವರ ಜೊತೆ ಮದುವೆಯಾಗಿ ಕೆಲವೇ ದಿನವೊಳಗೆ ಬಯಲಾಯಿತು ದುರ್ಬುದ್ಧಿ!

ಈ ರಾಶಿಯವರಿಗೆ ಕೈ ತುಂಬಾ ಹಣಪ್ರಾಪ್ತಿ. ಈ ರಾಶಿಯವರ ಜೊತೆ ಮದುವೆಯಾಗಿ ಕೆಲವೇ ದಿನವೊಳಗೆ ಬಯಲಾಯಿತು ದುರ್ಬುದ್ಧಿ! ಶನಿವಾರರಾಶಿ ಭವಿಷ್ಯ -ಸೆಪ್ಟೆಂಬರ್-28,2024 ಇಂದಿರಾ ಏಕಾದಶಿ ಸೂರ್ಯೋದಯ: 06:09, ಸೂರ್ಯಾಸ್ತ : 06:03 ಶಾಲಿವಾಹನ ಶಕೆ

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

error: Content is protected !!