ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 25 : ತಾಲ್ಲೂಕಿನ ದೊಡ್ಡ ಸಿದ್ದವ್ವನಹಳ್ಳಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಪಂಚಾಯತ್ ಹಾಗೂ ಶಿಶು ಅಭಿವೃದ್ಧಿ ಯೋಜನೆ ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಅಂಗನವಾಡಿ ಎ ಕೇಂದ್ರದಲ್ಲಿ ಪೋಷಣ ಮಾಸಾಚರಣೆ ಹಾಗೂ ಬಾಲ್ಯ ವಿವಾಹ ನಿಷೇಧ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಜಿಲ್ಲಾ ನಿರೂಪನಾಧಿಕಾರಿಗಳಾದ ವಿಜಯಕುಮಾರ್ ಅವರು ಸೆಪ್ಟೆಂಬರ್ ಮಾಹೆನಲ್ಲಿ ಪೋಷನ್ ಮಾಸಾಚರಣೆ ಮಾಡುತ್ತೇವೆ. 8 ಥೀಮ್ ನಂತೆ ಮಾಸಾಚರಣೆಯನ್ನು ಮಾಡುವುದಾಗಿ ತಿಳಿಸಿದರು. ಬಾಲ್ಯವಿವಾಹ ದ ಕುರಿತು ಮಾತನಾಡಿದರು. ತಾಯಂದಿರಿಗೆ ಪೌಷ್ಟಿಕತೆ ಬಗ್ಗೆ ತಿಳಿಸಿದರು. ಈ ವರ್ಷದ ಘೋಷವಾಕ್ಯ ಸುಪೋಷಿತ ಕಿಶೋರಿ ಸಶಕ್ತ ನಾರಿ ಎಂದು ಹೇಳಿ ಕಿಶೋರಿಯರ ಪೌಷ್ಟಿಕತೆ ಬಗ್ಗೆ ಹೇಳಿದರು.
ಶ್ರೀಮತಿ ವೀಣಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮಾತನಾಡಿ ಅಂಗನವಾಡಿ ಕೇಂದ್ರಗಳಲ್ಲಿ ವಿತರಿಸುತ್ತಿರುವ ಆಹಾರ ಪದಾರ್ಥಗಳನ್ನು ಫಲಾನುಭವಿಗಳು ಸರಿಯಾಗಿ ಉಪಯೋಗಿಸಿಕೊಳ್ಳಬೇಕು,ಮೊಟ್ಟೆಯು ಒಂದು ಸಂಪೂರ್ಣ ಆಹಾರವಾಗಿರುತ್ತದೆ ಮಕ್ಕಳು,ಗರ್ಭಿಣಿ ಮತ್ತು ಬಾಣಂತಿಯರು ಮೊಟ್ಟೆಯನ್ನು ಸೇವಿಸಬೇಕು ಎಂದು ತಿಳಿಸಿದರು.
ಆರೋಗ್ಯ ಇಲಾಖೆಯ ಶ್ರೀಧರ್ ಅವರು ಪೌಷ್ಟಿಕತೆ ಬಗ್ಗೆ ಹೇಳಿದರು. ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಯುತ ರಾಜಶೇಖರ್ ಅವರು ಮಾತನಾಡಿ ಬಾಲ್ಯ ವಿವಾಹ ನಿಷೇಧದ ಬಗ್ಗೆ ತಿಳಿಸಿದರು. ಶ್ರೀಮತಿ ಸುಧಾ ಗ್ರಾಮ ಪಂಚಾಯತ್ ಸದಸ್ಯರು ಮಾತನಾಡಿ ಗರ್ಭಿಣಿ ಮತ್ತು ಬಾಣಂತಿಯರ ಶುಚಿತ್ವದ ಬಗ್ಗೆ ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರ ಪೋಷಣ್ ಮಾಸಾಚರಣೆ ಆಯೋಜಿಸಿರುವುದನ್ನು ನೋಡಿ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಶೋಭಾ ನಾವಳ್ಳಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗುರುಲಿಂಗಮ್ಮರವರು, ವೈದ್ಯಾಧಿಕಾರಿಗಳಾದ ಶ್ರೀಮತಿ ನಾಸಿಯಾ ಶಮಾಯ್ಲ ರವರು, ಹಿರಿಯ ಆರೋಗ್ಯ ಸಹಾಯಕರಾದ ಶ್ರೀಮತಿ ರೇಣುಕಮ್ಮ ಅವರು, ಪೋಷಣ ಅಭಿಯಾನ ಸಂಯೋಜಕಾರದ ಶ್ರೀಯುತ ಪ್ರದೀಪ್ ರವರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್