ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 25 : ತಾಲ್ಲೂಕಿನ ದೊಡ್ಡ ಸಿದ್ದವ್ವನಹಳ್ಳಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಪಂಚಾಯತ್ ಹಾಗೂ ಶಿಶು ಅಭಿವೃದ್ಧಿ ಯೋಜನೆ ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಅಂಗನವಾಡಿ ಎ ಕೇಂದ್ರದಲ್ಲಿ ಪೋಷಣ ಮಾಸಾಚರಣೆ ಹಾಗೂ ಬಾಲ್ಯ ವಿವಾಹ ನಿಷೇಧ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಜಿಲ್ಲಾ ನಿರೂಪನಾಧಿಕಾರಿಗಳಾದ ವಿಜಯಕುಮಾರ್ ಅವರು ಸೆಪ್ಟೆಂಬರ್ ಮಾಹೆನಲ್ಲಿ ಪೋಷನ್ ಮಾಸಾಚರಣೆ ಮಾಡುತ್ತೇವೆ. 8 ಥೀಮ್ ನಂತೆ ಮಾಸಾಚರಣೆಯನ್ನು ಮಾಡುವುದಾಗಿ ತಿಳಿಸಿದರು. ಬಾಲ್ಯವಿವಾಹ ದ ಕುರಿತು ಮಾತನಾಡಿದರು. ತಾಯಂದಿರಿಗೆ ಪೌಷ್ಟಿಕತೆ ಬಗ್ಗೆ ತಿಳಿಸಿದರು. ಈ ವರ್ಷದ ಘೋಷವಾಕ್ಯ ಸುಪೋಷಿತ ಕಿಶೋರಿ ಸಶಕ್ತ ನಾರಿ ಎಂದು ಹೇಳಿ ಕಿಶೋರಿಯರ ಪೌಷ್ಟಿಕತೆ ಬಗ್ಗೆ ಹೇಳಿದರು.
ಶ್ರೀಮತಿ ವೀಣಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮಾತನಾಡಿ ಅಂಗನವಾಡಿ ಕೇಂದ್ರಗಳಲ್ಲಿ ವಿತರಿಸುತ್ತಿರುವ ಆಹಾರ ಪದಾರ್ಥಗಳನ್ನು ಫಲಾನುಭವಿಗಳು ಸರಿಯಾಗಿ ಉಪಯೋಗಿಸಿಕೊಳ್ಳಬೇಕು,ಮೊಟ್ಟೆಯು ಒಂದು ಸಂಪೂರ್ಣ ಆಹಾರವಾಗಿರುತ್ತದೆ ಮಕ್ಕಳು,ಗರ್ಭಿಣಿ ಮತ್ತು ಬಾಣಂತಿಯರು ಮೊಟ್ಟೆಯನ್ನು ಸೇವಿಸಬೇಕು ಎಂದು ತಿಳಿಸಿದರು.
ಆರೋಗ್ಯ ಇಲಾಖೆಯ ಶ್ರೀಧರ್ ಅವರು ಪೌಷ್ಟಿಕತೆ ಬಗ್ಗೆ ಹೇಳಿದರು. ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಯುತ ರಾಜಶೇಖರ್ ಅವರು ಮಾತನಾಡಿ ಬಾಲ್ಯ ವಿವಾಹ ನಿಷೇಧದ ಬಗ್ಗೆ ತಿಳಿಸಿದರು. ಶ್ರೀಮತಿ ಸುಧಾ ಗ್ರಾಮ ಪಂಚಾಯತ್ ಸದಸ್ಯರು ಮಾತನಾಡಿ ಗರ್ಭಿಣಿ ಮತ್ತು ಬಾಣಂತಿಯರ ಶುಚಿತ್ವದ ಬಗ್ಗೆ ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರ ಪೋಷಣ್ ಮಾಸಾಚರಣೆ ಆಯೋಜಿಸಿರುವುದನ್ನು ನೋಡಿ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಶೋಭಾ ನಾವಳ್ಳಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗುರುಲಿಂಗಮ್ಮರವರು, ವೈದ್ಯಾಧಿಕಾರಿಗಳಾದ ಶ್ರೀಮತಿ ನಾಸಿಯಾ ಶಮಾಯ್ಲ ರವರು, ಹಿರಿಯ ಆರೋಗ್ಯ ಸಹಾಯಕರಾದ ಶ್ರೀಮತಿ ರೇಣುಕಮ್ಮ ಅವರು, ಪೋಷಣ ಅಭಿಯಾನ ಸಂಯೋಜಕಾರದ ಶ್ರೀಯುತ ಪ್ರದೀಪ್ ರವರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















