Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆನ್ಲೈನ್ ಮದುವೆಗೆ ಹೈಕೋರ್ಟ್ ಒಪ್ಪಿಗೆ..!

Facebook
Twitter
Telegram
WhatsApp

ಕೇರಳ : ಅಂದೊದಿತ್ತು ಕಾಲ. ಮದುವೆ ಅಂದ್ರೆ ಮನೆಯಲ್ಲಿ ಸಂಭ್ರಮ, ದಿನಗಟ್ಟಲೇ ಕೆಲಸ. ಅದು ಒಂದಲ್ಲ ಎರಡಲ್ಲ ಐದಾರು ದಿನ ಮದುವೆ ನಡೆಯೋದು. ಆದ್ರೆ ಬ್ಯುಸಿ ಶೆಡ್ಯೂಲ್ ನಡುವೆ ಇತ್ತೀಚೆಗೆ ಎರಡು ದಿನಕ್ಕೆ ಮದುವೆ ಬಂದು ನಿಂತಿದೆ. ಅದರೀಗ ಅದಕ್ಕೂ ಸಮಯವಿಲ್ಲದಂತಾಗಿದೆ. ಆನ್ಲೈನ್ ನಲ್ಲಿ ಕೇವಲ ಐದು ನಿಮಿಷಕ್ಕೆ ಬಂದಂತಾಗಿದೆ.

ಹೌದು ಆನ್ಲೈನ್ ಮದುವೆಗೆ ಕೇರಳ ಹೈಕೋರ್ಟ್ ಅಸ್ತು ಎಂದಿದೆ. ವಕೀಲ ಜೋಡಿಯೊಂದು ಈ ವಿಚಾರಕ್ಕೆ ಕೋರ್ಟ್ ಮೆಟ್ಟಿಲೇರಿತ್ತು. ಅದಕ್ಕೆ ಒಪ್ಪಿಗೆ ಸಿಕ್ಕಂತಾಗಿದೆ. ಈ ಮೂಲಕ ಹೊಸ ಸಂಪ್ರದಾಯವೊಂದು ಹುಟ್ಟಿಕೊಂಡಿದೆ.

ರಿಂತು ತಾಮಸ್ ಮತ್ತು ಅನಂತ ಹರಿಕೃಷ್ಣ ಎಂಬುವವರು ಮದುವೆಯಾಗಲು ನಿಶ್ಚಯ ಮಾಡಿಕೊಂಡಿದ್ದರು. ಅನಂತ ಹರಿಕೃಷ್ಣ ಇಂಗ್ಲೆಂಡ್ ನಲ್ಲಿ ವಿಧ್ಯಾಭ್ಯಾಸಕ್ಕೆಂದು ಹೋಗಿದ್ದಾರೆ. ಡಿಸೆಂಬರ್ 23 ಕ್ಕೆ ಇವರಿಬ್ಬರ ಮದುವೆ ನಿಶ್ಚಯವಾಗಿತ್ತು. ಅದರಂತೆ ಅನಂತ ಹರಿಕೃಷ್ಣ ನಾಯರ್ ವಿಮಾನದ ಟಿಕೆಟ್ ನ್ನ 22ಕ್ಕೆ ಬುಕ್ ಮಾಡಿದ್ದರು. ಆದ್ರೆ ಈ ಒಮಿಕ್ರಾನ್ ಹೆಚ್ಚಳದಿಂದ ಅವರು ಭಾರತಕ್ಕೆ ಬರಲು ಸಾಧ್ಯವಾಗಿಲ್ಲ.

ನಿಗಧಿಯಂತೆ ಮದುವೆಯಾಗಲು ಸಾಧ್ಯವಾಗಿಲ್ಲ. ಈ ಜೋಡಿ ಆನ್ಲೈನ್ ಮದುವೆ ಬಗ್ಗೆ ಯೋಚಿಸಿದ್ದಾರೆ. ಬಳಿಕ ಕೇರಳ ಹೈಕೋರ್ಟ್ ಗೆ ಅರ್ಜಿ ಹಾಕಿದ್ದಾರೆ. ಜೋಡಿಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಆನ್ಲೈನ್ ಮದುವೆಗೆ ಅಸ್ತು ಎಂದಿದೆ. ಈ ವಿಚಾರ ಜೋಡಿಗೆ ಸಿಕ್ಕಾಪಟ್ಟೆ ಖುಷಿ ತಂದುಕೊಟ್ಟಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

error: Content is protected !!