Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ: ಒಣಹುಲ್ಲಿನ ಮೇಲೆ ಬಂದ ಒಮ್ನಿ ಬೆಂಕಿಗಾಹುತಿ..!

Facebook
Twitter
Telegram
WhatsApp

 

ದಾವಣಗೆರೆ: ಅಂಗಡಿಗೆ ದಿನಸಿ ಸಾಮಾನುಗಳನ್ನು ಸಾಗಿಸುತ್ತಿದ್ದ ಒಮ್ನಿ ಕಾರು ಹುಲ್ಲಿನ‌ ಮೇಲೆ ಸಾಗುತ್ತಿದ್ದಂತೆ ಹೊತ್ತಿ ಉರಿದಿದೆ. ಸದ್ಯ ಕಾರಲ್ಲಿ ಇದ್ದ ಚಾಲಕ ಹೊರ ಜಿಗಿದು ಪ್ರಾಣ ರಕ್ಷಿಸಿಕೊಂಡಿದ್ದಾನೆ. ಈ ಘಟನೆ ಆನಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಹುಲ್ಲಿನ ಮೇಲೆ ಸಾಗಿದ್ದಷ್ಟೆ ಇದ್ದಕ್ಕಿದ್ದ ಹಾಗೇ ಒಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಚಾಲಕ ಎಚ್ಚೆತ್ತುಕೊಂಡು‌ಹೊರಗೆ ಜಿಗಿದಿದ್ದಾನೆ. ಒಮ್ನಿ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ತಕ್ಷಣ ಎಚ್ಚೆತ್ತು ಯಾರೋ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ.

ಆದ್ರೆ ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಒಮ್ನಿ ಕಾರು ಸುಟ್ಟು ಭಸ್ಮವಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫಜಲ್ ಅಹ್ಮದ್ ಎಂಬುವವರಿಗೆ ಸೇರಿದ ಕಾರು ಇದಾಗಿದೆ. ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ದಾವಣಗೆರೆ ರೂರಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಪುತ್ರನಿಗೆ ಟಿಕೆಟ್ : ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ ಲಾಯರ್ ಜಗದೀಶ್

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಪುತ್ರನಿಗೆ ಟಿಕೆಟ್ : ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ ಲಾಯರ್ ಜಗದೀಶ್ ಬಿಗ್ ಬಾಸ್ ನಿಂದ ಈಗಷ್ಟೇ ಮನೆಯಿಂದ ಹೊರ ಬಂದಿರುವ ಲಾಯರ್ ಜಗದೀಶ್ ರಾಜಕೀಯಕ್ಕೆ ಎಂಟ್ರಿಯಾಗುವ ಪ್ಲ್ಯಾನ್ ನಡೆಸುತ್ತಿದ್ದಾರೆ. ಶಿಗ್ಗಾಂವಿ,

JDS ಚಿಹ್ನೆಯಡಿ ಸ್ಪರ್ಧಿಸಲು ಡೆಡ್ಲೈನ್ : ಸಿಪಿ ಯೋಗೀಶ್ವರ್ ಕೊಟ್ಟ ಸೂಚನೆಯೇ ಬೇರೆ..!

ಬೆಂಗಳೂರು, ಅಕ್ಟೋಬರ್. 21 : ಮೂರು ಕ್ಷೇತ್ರಗಳ ಉಪಚುನಾವಣೆಯ ವಿಚಾರದಲ್ಲಿ ಚನ್ನಪಟ್ಟಣ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಅದರಲ್ಲೂ ಕಾಂಗ್ರೆಸ್

ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲೂ ಗೆಲುವು : ಮುಖ್ಯಮಂತ್ರಿ ಸಿದ್ದರಾಮಯ್ಯ

  ಚಳ್ಳಕೆರೆ, ಅಕ್ಟೋಬರ್ 21: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದರು.

error: Content is protected !!