ಸುದ್ದಿಒನ್, ಚಿತ್ರದುರ್ಗ,ಆಗಸ್ಟ್. 22 : ಕುಂಚಿಗ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಆ.24 ರಂದು ಬೆಳಿಗ್ಗೆ 10-45 ಕ್ಕೆ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
2023-24 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಕುಂಚಿಗ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆÀ ಪ್ರತಿಭಾ ಪುರಸ್ಕಾರ ಹಾಗೂ ಡಾ.ಎಂ.ಯೋಗೇಂದ್ರ, ಡಾ.ಅರವಿಂದ ಪಾಟೀಲ್ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಗುವುದು.
ಮಾಜಿ ಶಾಸಕ, ಕುಂಚಿಗ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಂ.ಬಿ.ತಿಪ್ಪೇರುದ್ರಪ್ಪ ಅಧ್ಯಕ್ಷತೆ ವಹಿಸುವರು. ಗೌರವಾಧ್ಯಕ್ಷ ಹಾಗೂ ನಿವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪರಮೇಶ್ವರಪ್ಪ, ಮಾಜಿ ಶಾಸಕರುಗಳಾದ ಟಿ.ಹೆಚ್.ಬಸವರಾಜ್, ಪಿ.ರಮೇಶ್, ನಿವೃತ್ತ ಪ್ರಾಚಾರ್ಯರಾದ ಬಿ.ಸಿ.ಕಾಂತರಾಜ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕುಂಚಿಗ ವೀರಶೈವ ಲಿಂಗಾಯತ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕುಂಚಿಗ ವೀರಶೈವ ಲಿಂಗಾಯತ ಸಮಾಜದ ಕಾರ್ಯದರ್ಶಿ ಹೆಚ್.ಕುಬೇರಪ್ಪ ದಗ್ಗೆ ಮನವಿ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















