Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನ. 27 ರಂದು ಒನಕೆ ಓಬವ್ವ ರಾಜ್ಯ ಮಟ್ಟದ ಜಯಂತಿಯ ಆಚರಣೆ : ಎಸ್.ಸಿ.ನಿರಂಜನ ಮೂರ್ತಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ
ಸುರೇಶ್ ಪಟ್ಟಣ್
ಮೊ : 87220 22817

ಚಿತ್ರದುರ್ಗ,(ಅ.31) : ಚಿತ್ರದುರ್ಗದ ಹೆಸರನ್ನು ನಾಡಿನಾದ್ಯಂತ್ಯ ಬೆಳಗುವಂತೆ ಮಾಡಿದ ಒನಕೆ ಓಬವ್ವಳ ರಾಜ್ಯ ಮಟ್ಟದ ಜಯಂತಿಯ ಆಚರಣೆಯನ್ನು ಈ ವರ್ಷದಿಂದ ಸರ್ಕಾರವೇ ಆಚರಣೆ ಮಾಡುತ್ತಿದ್ದು ಪ್ರಥಮ ಬಾರಿಗೆ ಚಿತ್ರದುರ್ಗದಲ್ಲಿ ನ. 27 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಮುಖಂಡರಾದ ಎಸ್.ಸಿ.ನಿರಂಜನ ಮೂರ್ತಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ನಗರದ ವಿಜ್ಞಾನ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಅಂದು ಹೊಳಲ್ಕೆರೆ ರಸ್ತೆಯಿಂದ ಮೆರವಣಿಗೆ ನಡೆಯಲಿದ್ದು ಇದರಲ್ಲಿ ವಿವಿಧ ಜಾನಪದ ಕಲಾಮೇಳಗಳು ಪಾಲ್ಗೊಳ್ಳಲಿವೆ. ಅಂದು ಸುಮಾರು 1 ಲಕ್ಷ ಜನತೆ ನಾಡಿನ ವಿವಿಧ ಕಡೆಯಿಂದ ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಮಾಜದ ಚುನಾಯಿತ ಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಇದುವರೆವಿಗೂ ಸಮಾಜದವತಿಯಿಂದ ಒನಕೆ ಓಬವ್ವಳ ಜಯಂತಿಯನ್ನು ಆಚರಣೆ ಮಾಡಲಾಗುತ್ತಿತೂ ಇದೇ ಪ್ರಥಮ ಭಾರಿಗೆ ಸರ್ಕಾರ ಒನಕೆ ಓಬವ್ವಳ ಜಯಂತಿಯನ್ನು ಆಚರಿಸಲು ಮುಂದಾಗಿದೆ, ಇದರ ಅಂಗವಾಗಿ ಅಕೆಯ ನಾಡಾದ ಚಿತ್ರದುರ್ಗದಲ್ಲಿ ಆಚರಣೆ ಮಾಡಲಾಗುತ್ತಿದೆ, ಕಾರ್ಯಕ್ರಮಕ್ಕೆ ಸಮಾಜದ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುತ್ತಿದೆ ಎಂದು ನಿರಂಜನ ಮೂರ್ತಿ ತಿಳಿಸಿದರು.

ಗೋಷ್ಟಿಯಲ್ಲಿ ಸಮಾಜದ ಮುಖಂಡರಾದ ಗುರುಮೂರ್ತಿ, ಛಲವಾದಿ ತಿಪ್ಪೇಸ್ವಾಮಿ, ನೆಲ್ಲಿಕಟ್ಟೆ ನಾಗರಾಜ್, ಸುವರ್ಣಮ್ಮ, ಪ್ರದೀಪ್ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶರಣ ಸಂಸ್ಕøತಿ 2024 : ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ 2024ರ ಅಂಗವಾಗಿ ಶ್ರೀಜಯದೇವ ಕಪ್ ಪಂದ್ಯಾವಳಿಯ ನಿಮಿತ್ತ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ

Exit Poll-2024 : ಹರಿಯಾಣ ಜಮ್ಮು ಮತ್ತು ಕಾಶ್ಮೀರದಲ್ಲಿ ರೋಚಕ ಫಲಿತಾಂಶ : ಇಲ್ಲಿದೆ ಎಕ್ಸಿಟ್ ಪೋಲ್‌ ಮಾಹಿತಿ…!

  ಸುದ್ದಿಒನ್, ಅಕ್ಟೋಬರ್. 05 : ಹರಿಯಾಣದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ (ಅಕ್ಟೋಬರ್ 5) ಮತದಾನ ಪೂರ್ಣಗೊಂಡಿದೆ. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಅಕ್ಟೋಬರ್

ಕೇವಲ ಗಂಟು ಮಾಡಿಕೊಳ್ಳುಲು ಶಾಸಕರಾಗಿದ್ದರೆಯೇ ವಿನಃ ಅಭಿವೃದ್ದಿಗಾಗಿ ಅಲ್ಲ : ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಆರೋಪ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 05 : ಮೊಳಕಾಲ್ಮೂರು ಕ್ಷೇತ್ರದಲ್ಲಿ ‌ಮರಳು ಮಾಫಿಯಾ, ಭೂ ಕಬಳಿಕೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ.

error: Content is protected !!