Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೆಪ್ಟೆಂಬರ್ 30 ರಂದು ಹೊಳಲ್ಕೆರೆ ಪಟ್ಟಣ ಗಣೇಶ ವಿಸರ್ಜನಾ ಶೋಭಾಯಾತ್ರೆ : ಸಂಚಾರ ಮಾರ್ಗ ಬದಲು

Facebook
Twitter
Telegram
WhatsApp

 

ಚಿತ್ರದುರ್ಗ. ಸೆ.29: ಇದೇ ಸೆಪ್ಟೆಂಬರ್ 30ರಂದು ಹೊಳಲ್ಕೆರೆ ಪಟ್ಟಣದ ಶ್ರೀ ವಿಶ್ವ ಹಿಂದೂ ಮಹಾ ಗಣಪತಿ ಸಮಿತಿಯಿಂದ ಗಣೇಶ ವಿಸರ್ಜನಾ ಮತ್ತು ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 369ರ ವಾಹನ ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ತೆರಳವ ವಾಹನಗಳು ಚಿತ್ರಹಳ್ಳಿ ಗೇಟ್‍ನಿಂದ ವಿಭಾಗವಾಗಿ ಹೊಸದುರ್ಗಕ್ಕೆ ರಸ್ತೆಯಲ್ಲಿ ಸಂಚರಿಸಿ ಹೆಚ್.ಡಿ.ಪುರ ಮಾರ್ಗವಾಗಿ ಹೋಗುವುದು.

ಶಿವಮೊಗಕ್ಕೆ ಚಿಕ್ಕಜಾಜೂರು ಮಾರ್ಗವಾಗಿ ಹೊಳಲ್ಕೆರೆ ರೈಲ್ವೆ ಸ್ಟೇಷನ್ ಮುಖಾಂತರ ಹೋಗುವುದು.

ಹೊಸದುರ್ಗದಿಂದ ಶಿವಮೊಗ್ಗಕ್ಕೆ ಹೋಗುವ ವಾಹನಗಳು ಅವಿನಹಟ್ಟಿ ಗ್ರಾಮದ ಮುಖಾಂತರ ಚಲಿಸಿ ಅರೇಹಳ್ಳಿ ರೈಲ್ವೇ ಸ್ಟೇಷನ್ ಮುಖಾಂತರ ಶಿವಮೊಗ್ಗಕ್ಕೆ ಹೋಗುವುದು.

ಶಿವಮೊಗ್ಗದಿಂದ ಬರುವ ವಾಹನಗಳು ಅರೇಹಳ್ಳಿ ರೈಲ್ವೇ ಸ್ಟೇಷನ್‍ನಲ್ಲಿ ವಿಭಾಗವಾಗಿ ಚಿತ್ರದುರ್ಗ ಹೋಗುವ ವಾಹನಗಳು ಪೂಣಜೂರು, ಮಲ್ಕಾಪುರ, ಚಿಕ್ಕಜಾಜೂರು, ಬಿ.ದುರ್ಗ, ಭೀಮಸಮುದ್ರ ಮಾರ್ಗವಾಗಿ ಚಿತ್ರದುರ್ಗ ಹೋಗುವುದು.

ಹೊಸದುರ್ಗಕ್ಕೆ ಹೋಗುವ ವಾಹನಗಳು ಮಾಳೇನಹಳ್ಳಿ, ಅವಳೇಹಟ್ಟಿ, ಹೊಳಲ್ಕೆರೆ ಮುಖಾಂತರ ಹೊಸದುರ್ಗಕ್ಕೆ ಹೋಗುವುದು. ದಾವಣಗೆರೆಯಿಂದ ಬರುವ ವಾಹನಗಳು ಮಲ್ಕಾಪುರ, ಅರೇಹಳ್ಳಿ ರೈಲ್ವೆ ಸ್ಟೇಷನ್ ಮುಖಾಂತರ ಹೊಳಲ್ಕೆರೆಗೆ ಹೋಗುವುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!