Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೀರಶೈವ-ಲಿಂಗಾಯತ ಮಹಾಸಭಾ ವತಿಯಿಂದ ಡಿಸೆಂಬರ್ 23 ಮತ್ತು 24 ರಂದು ದಾವಣಗೆರೆಯಲ್ಲಿ 24 ನೇ ಮಹಾ ಅಧಿವೇಶನ : ಅಣಬೇರು ರಾಜಣ್ಣ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.12 : ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ದಾವಣಗೆರೆ ಜಿಲ್ಲಾ ಘಟಕದಿಂದ ಡಿ.23 ಮತ್ತು 24 ರಂದು ದಾವಣಗೆರೆ ಎಂ.ಬಿ.ಎ.ಕಾಲೇಜು ಮೈದಾನದಲ್ಲಿ 24 ನೇ ಮಹಾ ಅಧಿವೇಶನ ನಡೆಯಲಿದೆ ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಉಪಾಧ್ಯಕ್ಷ ಅಣಬೇರು ರಾಜಣ್ಣ ತಿಳಿಸಿದರು.

ಮಹಾ ಅಧಿವೇಶನಕ್ಕೆ ಸಂಬಂಧಿಸಿದಂತೆ ರೋಟರಿ ಬಾಲಭವನದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಣಬೇರು ರಾಜಣ್ಣ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರ ಮುಂದಾಳತ್ವದಲ್ಲಿ ನಡೆಯಲಿರುವ ಎರಡು ದಿನಗಳ ಮಹಾ ಅಧಿವೇಶನದಲ್ಲಿ ವೀರಶೈವ-ಲಿಂಗಾಯತರು ನಾಡಿನ ಮೂಲೆ ಮೂಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬಲ ತುಂಬಬೇಕಿದೆ ಎಂದು ಮನವಿ ಮಾಡಿದರು.

ಎರಡು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿರುವ 24 ನೇ ಮಹಾ ಅಧಿವೇಶನದಲ್ಲಿ ವೀರಶೈವ-ಲಿಂಗಾಯತರ ಅನೇಕ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು.

ಹಿಂದಿನಿಂದಲೂ ನಮಗೆ ಅನ್ಯಾಯವಾಗುತ್ತಿದೆ. ಒಳಪಂಗಡಗಳಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತಿರುವುದರಿಂದ ಕೇಂದ್ರ ಓ.ಬಿ.ಸಿ. ಪಟ್ಟಿಗೆ ಸೇರಿಸಬೇಕೆಂದು ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಒಳಜಗಳ ಬಿಟ್ಟು ಎಲ್ಲರೂ ಒಂದಾಗಬೇಕಿದೆ. ನನಗೆ ಪಕ್ಷ ಮುಖ್ಯವಲ್ಲ.

ವೀರಶೈವ-ಲಿಂಗಾಯತರು ಮುಖ್ಯ ಎಂದು ಶಾಮನೂರು ಶಿವಶಂಕರಪ್ಪನವರು ಸ್ಪಷ್ಟವಾಗಿ ಹೇಳಿದ್ದಾರೆನ್ನುವುದನ್ನು ನೆನಪಿಸಿಕೊಂಡರು.
ಹೋರಾಟವಿದ್ದರೆ ಮಾತ್ರ ಆಳುವ ಸರ್ಕಾರಗಳು ಮಣಿಯುತ್ತವೆ. ಐದಾರು ವರ್ಷಗಳಲ್ಲಿ 2.50 ಲಕ್ಷ ಸದಸ್ಯರುಗಳು ನೊಂದಣಿಯಾಗಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಮಹಾ ಅಧಿವೇಶನಕ್ಕೆ ಬರುವವರಿಗೆ ಯಾವುದೇ ತೊಂದರೆಯಾಗದಂತೆ ಊಟದ ವ್ಯವಸ್ಥೆ ಕಲ್ಪಿಸಿ ಬಸ್ ಸಂಚಾರ ಕೂಡ ಒದಗಿಸಲಾಗುವುದು. ರಾಜಕಾರಣಿಗಳು, ಸ್ವಾಮೀಜಿಗಳು, ಸಾಹಿತಿಗಳು ಮಹಾ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಅನೇಕ ವಿಚಾರಗೋಷ್ಠಿಗಳಿರುತ್ತವೆ ಎಂದು ಹೇಳಿದರು.

ಎಸ್.ವೀರೇಶ್, ಬೆಂಗಳೂರು ನಗರ ಯುವ ಘಟಕದ ಅಧ್ಯಕ್ಷ ಲಿಂಗರಾಜು, ಹೊಸದುರ್ಗ ಘಟಕದ ಅಧ್ಯಕ್ಷ ಓಂಕಾರಪ್ಪ, ನಗರ ಘಟಕದ ಅಧ್ಯಕ್ಷ ಆನಂದ್, ಮಹಿಳಾ ಘಟಕದ ಅಧ್ಯಕ್ಷೆ ರೀನಾ ವೀರಭದ್ರಪ್ಪ, ಕಾರ್ಯದರ್ಶಿ ಮಹೇಶ್, ವೀಣಾ ಸುರೇಶ್ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment