Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೆಬ್ರವರಿ 17 ರಂದು ಹೆಚ್.ಡಿ. ಪುರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ | ಈ ಸಮಸ್ಯೆ ಇರುವವರು  ನೊಂದಾಯಿಸಿಕೊಳ್ಳಿ….!

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ :
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ. 15 : ರೋಟರಿ ಬೆಂಗಳೂರು ಸೌತ್ ಪರೇಡ್, ರೋಟರಿ ಚಿತ್ರದುರ್ಗ ಕ್ಲಬ್ ಐಡಿ : 15714, ಎಂ.ಎಸ್. ರಾಮಯ್ಯ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ಉಚಿತ ಬೃಹತ್ ಆರೋಗ್ಯ ತಪಾಸಣೆ ಶಿಬಿರವು  ದಿನಾಂಕ : 17-02-2024, ಶನಿವಾರ ಹೊಳಲ್ಕೆರೆ ತಾ, ಹೆಚ್.ಡಿ.ಪುರದ ಬನಶಂಕರಿ ಸಮುದಾಯ ಭವನದಲ್ಲಿ ಬೆಳಗ್ಗೆ 10:00 ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿಯ ನಿವೃತ್ತ ಜಿಲ್ಲಾಪಾಲರು ಮಧುಪ್ರಸಾದ್. ಕೆ ರೋಟರಿ ಅಧ್ಯಕ್ಷರಾದ ಕನಕರಾಜು ತಿಳಿಸಿದ್ದಾರೆ.

ಈ ಶಿಬಿರದಲ್ಲಿ ಸಾಮಾನ್ಯ ರೋಗ ವಿಭಾಗ, ಮಕ್ಕಳ ವಿಭಾಗ, ಚರ್ಮರೋಗ ವಿಭಾಗ, ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ,  ಸಾಮಾನ್ಯ ಶಸ್ತ್ರ ಚಿಕಿತ್ಸಾ ವಿಭಾಗ ಶ್ವಾಸಕೋಶ ವಿಭಾಗ ಕ್ಯಾನ್ಸರ್ ವಿಭಾಗ ಕಿವಿ, ಮೂಗು ಮತ್ತು ಗಂಟಲು ವಿಭಾಗ,  ಮೂಳೆ ಮತ್ತು ಕೀಲು ರೋಗ ವಿಭಾಗ,  ಸ್ತ್ರೀ ರೋಗ ವಿಭಾಗ,  ಬಿಪಿ ಮತ್ತು ಸಕ್ಕರೆ ಖಾಯಿಲೆ ವಿಭಾಗ,  ಹಲ್ಲಿನ ಚಿಕಿತ್ಸಾ ವಿಭಾಗ,  ಫಿಸಿಯೋಥೆರಪಿ,  ಶಿಬಿರದಲ್ಲಿ ಆಯ್ಕೆಯಾಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಅಥವಾ ಶಸ್ತ್ರ ಚಿಕಿತ್ಸೆಗೆ ದಾಖಲಾಗುವಂತಹ ಎಲ್ಲಾ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡಲಾಗುವುದು.

ಈ ಶಿಬಿರದಲ್ಲಿ ನುರಿತ ತಜ್ಞ ವೈದ್ಯರುಗಳು ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಲಿದ್ದು. ಸುತ್ತಮುತ್ತಲಿನ ಗ್ರಾಮಸ್ಥರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ : ಬಿ.ಎನ್. ಚಂದ್ರಪ್ಪ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು ಶುಕ್ರವಾರ ನಡೆದ ಚುನಾವಣೆಯಲ್ಲಿ ನನ್ನ ಭವಿಷ್ಯ ನಿರ್ಣಯಿಸುತ್ತಾರೆ.

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

error: Content is protected !!