Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಫೆಬ್ರವರಿ 22ರಂದು ಬರಗೂರು ರಾಮಚಂದ್ರಪ್ಪನವರ ಆಯ್ದ ಅನುಭವಗಳ ಕಥನ “ಕಾಗೆ ಕಾರುಣ್ಯದ ಕಣ್ಣು” ಜನಾರ್ಪಣೆ ಸಮಾರಂಭ

---Advertisement---

 

ಚಿತ್ರದುರ್ಗ, ಫೆಬ್ರವರಿ.20 : ಗೆಳೆಯರ ಬಳಗದ ವತಿಯಿಂದ ಬರಗೂರು ರಾಮಚಂದ್ರಪ್ಪನವರ ಆಯ್ದ ಅನುಭವಗಳ ಕಥನ “ಕಾಗೆ ಕಾರುಣ್ಯದ ಕಣ್ಣು” ಜನಾರ್ಪಣೆ ಸಮಾರಂಭ ಇದೇ ಫೆ.22ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ತ.ರಾ.ಸು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ಸಾಹಿತಿ ಡಾ.ರಾಜಪ್ಪ ದಳವಾಯಿ ಕೃತಿಯ ಜನಾರ್ಪಣೆ ಮಾಡುವರು. ಲೇಖಕಿ ಡಾ.ತಾರಿಣಿ ಶುಭದಾಯಿನಿ ಕೃತಿ ಕುರಿತು ಮಾತನಾಡುವರು. ಅತಿಥಿಗಳಾಗಿ ಬಿ.ಎ.ಲಿಂಗಾರೆಡ್ಡಿ, ಕೆ.ಎಂ.ವೀರೇಶ್, ಮೆಹಬೂಬ್ ಪಾಷಾ, ಜಿ.ಎಸ್.ಮಂಜುನಾಥ್, ಪ್ರೊ.ಸಂದೀಪ್, ಪಿ.ರಘು, ಓ.ಪರಮೇಶ್ವರಪ್ಪ ಭಾಗವಹಿಸುವರು. ಕೃತಿಯ ಲೇಖಕ ಪ್ರೊ.ಬರಗೂರು ರಾಮಚಂದ್ರಪ್ಪ, ನಾಡೋಜ ಡಾ.ಬರಗೂರು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ.ಸುಂದರರಾಜ ಅರಸು ವಿಶೇಷ ಉಪಸ್ಥಿತಿವಹಿಸುವರು.

ಕಾರ್ಯಕ್ರಮದ ಆಯೋಜಕರಾದ ಚಿಕ್ಕಪ್ಪನಹಳ್ಳಿ ಷಣ್ಮುಖ, ಡಾ.ಜೆ.ಕರಿಯಪ್ಪ ಮಾಳಿಗೆ, ಅಹೋಬಲಪತಿ, ಗೋವಿಂದಪ್ಪ ಗೌನಹಳ್ಳಿ, ಗೋಪಾಲಸ್ವಾಮಿ ನಾಯಕ, ವಿನಾಯಕ್ ತೊಡರನಾಳ್, ಸಿ.ರಾಜಶೇಖರ್ ಉಪಸ್ಥಿತರಿರುವರು ಎಂದು ಗೆಳೆಯರ ಬಳಗ ಪ್ರಕಟಣೆ ತಿಳಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment