ಜನವರಿ 7 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರದುರ್ಗಕ್ಕೆ ಆಗಮನ

suddionenews
1 Min Read

ಚಿತ್ರದುರ್ಗ,(ಜನವರಿ.05) : ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇದೇ ಜನವರಿ 07 ರಂದು ಒಂದು ದಿನದ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ 12.30 ಗಂಟೆಗೆ ಮೈಸೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು, ಮಧ್ಯಾಹ್ನ 1.30 ಗಂಟೆಗೆ ಚಿತ್ರದುರ್ಗದ ಎಸ್‍ಜೆಎಂ ಆಂಗ್ಲ ಮಾಧ್ಯಮ ಶಾಲೆ ಬಳಿಯ ಹೆಲಿಪ್ಯಾಡ್‍ಗೆ ಆಗಮಿಸುವರು.  ಬಳಿಕ ಚಿತ್ರದುರ್ಗ ಸೀಬಾರದ ಬಳಿ ಇರುವ ಶ್ರೀ ಮೇದಾರ ಗುರುಪೀಠದಲ್ಲಿ ಚಿತ್ರದುರ್ಗದ ಅಖಿಲ ಕರ್ನಾಟಕ ಶ್ರೀ ಗುರು ಮೇದಾರ ಕೇತೇಶ್ವರ ಟ್ರಸ್ಟ್, ಹುಬ್ಬಳ್ಳಿಯ ಅಖಿಲ ಕರ್ನಾಟಕ ಮೇದಾರ ಗಿರಿ ಜನಾಂಗ ಕಲ್ಯಾಣ ಸೇವಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ ‘ಅಖಿಲ ಭಾರತ, ಅಖಿಲ ಕರ್ನಾಟಕ ಮೇದಾರ (ಪರಿಶಿಷ್ಟ ಪಂಗಡ),ಬುಡಕಟ್ಟು ಜನಾಂಗದ ಬೃಹತ್ ಸಮಾವೇಶ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮುಖ್ಯಮಂತ್ರಿಗಳು ಅದೇ ದಿನ ಮಧ್ಯಾಹ್ನ 3.30 ಗಂಟೆಗೆ ಎಸ್‍ಜೆಎಂ ಆಂಗ್ಲ ಮಾಧ್ಯಮ ಶಾಲೆ ಬಳಿಯ ಹೆಲಿಪ್ಯಾಡ್‍ಗೆ ತೆರಳಿ, ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಬಸವೇಶ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *