Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಥಳೀಯರಿಗೆ ಕೆಲಸ ಕೊಡುವಂತೆ ಒತ್ತಾಯಿಸಿ ಜುಲೈ 24 ರಂದು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ಸಿರಿಗೆರೆಯ ತಣಿಗೆಹಳ್ಳಿ ಸಮೀಪ ಡಿ.ಮದಕರಿಪುರದ ಹತ್ತಿರವಿರುವ ಗಣಿಬಾಧಿತ ಪ್ರದೇಶಗಳ ಜನ ಶನಿವಾರದಿಂದ ಪ್ರತಿಭಟನೆ ಆರಂಭಿಸಿದ್ದು, ಬುಧವಾರ ಮಧ್ಯಾಹ್ನದ ವೇಳೆಗೆ 52 ಲಾರಿಗಳೊಂದಿಗೆ ಕಾಲ್ನಡಿಗೆ ಜಾಥ ಮೂಲಕ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಸ್ಥಳೀಯರಿಗೆ ಕೆಲಸ ಕೊಡುವಂತೆ ಒತ್ತಾಯಿಸಲಿದ್ದಾರೆ.

ಜಿಲ್ಲಾ ಬಂಜಾರ ಲಂಬಾಣಿ ಸಮಾಜ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ಸೇನೆ, ವಾಲ್ಮೀಕಿ ಸೇನೆ ಹಾಗೂ ವಾಲ್ಮೀಕಿ ಜನಾಂಗದ ವತಿಯಿಂದ ಜಾನ್ ಮೈನ್ಸ್, ವೇದಾಂತ ಮೈನ್ಸ್‍ನವರು ತೋರುತ್ತಿರುವ ದರ್ಪದ ವಿರುದ್ದ ಅನಿರ್ಧಿಷ್ಠಾವಧಿ ಧರಣಿ ನಡೆಸುತ್ತಿರುವವರು ಮಂಗಳವಾರ ಬೆಳಿಗ್ಗೆ ಕಾಲ್ನಡಿಗೆ ಜಾಥ ಆರಂಭಿಸಿ ಹದಿನೈದು ಕಿ.ಮೀ. ಬಳಿಕ ರಾತ್ರಿ ಮಾರ್ಗ ಮಧ್ಯದಲ್ಲಿ ಎಲ್ಲಿಯಾದರೂ ತಂಗಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಸೇರಿದ 52 ಲಾರಿಗಳನ್ನು ಜಾನ್ ಮೈನ್ಸ್ ಹಾಗೂ ವೇದಾಂತ ಮೈನ್ಸ್ ನವರು ಗಣಿಗಾರಿಕೆಗೆ ಬಳಸಿಕೊಂಡು ಈಗ ಏಕಾಏಕಿ ನಿಲ್ಲಿಸಿರುವುದರಿಂದ ಫೈನಾನ್ಸ್‍ಗಳಿಂದ ಸಾಲ ಪಡೆದಿರುವವರು ಇ.ಎಂ.ಐ. ಹಾಗೂ ಸಾಲಗಳನ್ನು ಕಟ್ಟಲಾಗದೆ ಬೀದಿಗೆ ಬಿದ್ದಿದ್ದಾರೆ. ಹೊರಗಿನಿಂದ ಕೆಲಸಗಾರರನ್ನು ಕರೆಸಿಕೊಂಡಿರುವ ಎರಡು ಮೈನ್ಸ್‌ ನವರು ಸ್ಥಳೀಯರಿಗೆ ಏಕೆ ಕೆಲಸ ಕೊಡುತ್ತಿಲ್ಲ ಎಂದು ಪ್ರತಿಭಟನಾನಿರತರು ಪ್ರಶ್ನಿಸುತ್ತಿದ್ದಾರೆ.

ಬಂಜಾರ ಲಂಬಾಣಿ ಸಮಾಜದ ಜಿಲ್ಲಾಧ್ಯಕ್ಷ ಎಸ್.ಸತೀಶ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ, ಮದಕರಿನಾಯಕ ಯುವಸೇನೆಯ ರಾಜಣ್ಣ, ತಿಪ್ಪೇಶಿ, ಸುಂದರಮೂರ್ತಿ, ರಘು, ಉಮಾಪತಿ, ತಿಪ್ಪೇಸ್ವಾಮಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!